ಹಾಸನ: (ನ್ಯೂಸ್ ಮಲ್ನಾಡ್ ವರದಿ) ಇಬ್ಬರು ಮಹಿಳೆಯರ ಮತದಾರ ಗುರುತಿನ ಚೀಟಿಯಲ್ಲಿ ಸಂಖ್ಯೆ, ವಿಳಾಸ ಒಂದೇ ರೀತಿ ಇದ್ದು, ಭಾವಚಿತ್ರಗಳು ಬೇರೆಯಾಗಿ ಗೊಂದಲ ಸೃಷ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ.
ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ!
ಆಲೂರಿನ ಮತಗಟ್ಟೆ ಸಂಖ್ಯೆ 55 ರಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಎರಡೂ ಗುರುತಿನ ಚೀಟಿಯಲ್ಲಿ ಭಾವಚಿತ್ರಗಳು ಬೇರೆಯಾಗಿವೆ. ಒಬ್ಬರು ಬಂದು ಈಗಾಗಲೇ ವೋಟ್ ಮಾಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
- ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ
- ಕೋಟಿ ಹಣದ ಕನಸಲ್ಲಿ ಮಾಜಿ ಶಾಸಕನ ಮನೆಗೆ ಕನ್ನ
ಅದೇ ಸಂಖ್ಯೆಯ ಗುರುತಿನ ಚೀಟಿ ಇರುವ ಇನ್ನೊಬ್ಬ ಮಹಿಳೆ ಇದೀಗ ಮತದಾನಕ್ಕೆ ಬಂದಿದ್ದಾರೆ ಆದರೆ, ಚುನಾವಣಾ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಕೊನೆಗೆ ಟೆಂಡರ್ ಮತ ಚಲಾಯಿಸಲು ಅವಕಾಶ ನೀಡುವುದಾಗಿ ಹೇಳಿದ್ದು, ಹಿರಿಯ ಅಧಿಕಾರಿಗಳಿಗೆ ಕಾಯಲಾಗುತ್ತಿದೆ.
ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ತನ್ನ ಬೆಂಬಲಿಗರಿಗೆ ನೀಡಿದ್ದಾರೆ
ಚುನಾವಣಾ ಕರ್ತವ್ಯಕ್ಕೆ ಲೋಪ; ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಮಾನತ್ತು
ಶೃಂಗೇರಿ: ಚುನಾವಣಾ ಕರ್ತವ್ಯಕ್ಕೆ ಲೋಪವನ್ನುಂಟು ಮಾಡಿ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತ್ತುಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಪುಟ್ಟೇಗೌಡ ಅಮಾನತ್ತು ಆದ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.
ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28 (ಎ) ಮತ್ತು 136 ರಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.