ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದರು. ನಿನ್ನೆ ಮತ್ತೊರ್ವನನ್ನು ಬಂಧಿಸುವಲ್ಲಿ ತರೀಕೆರೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ; ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ
ಇದನ್ನೂ ಓದಿ; ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು
ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್, ಧನು, ಈಶ್ವರ್, ಪರಮೇಶ್ವರ್, ನಿತಿನ್ ಎರಡು ದಿನಗಳ ಹಿಂದೆ ಬಂಧಿಸಿರುವ ಆರೋಪಿಗಳು. ಲೋಹಿತ್ ನಿನ್ನೆ ಬಂಧಿಸಿದ ಆರೋಪಿ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ‘ಹೇಳಲು ಮಲೆನಾಡು, ನೋಡೋಕೆ ಎರಡು ಮರ ಕಾಣಿಸ್ತಿಲ್ಲ.. ಏನ್ ಕರ್ಮ ನಮ್ದು’
- ತಾಯಿಯನ್ನೇ ಬಡಿಗೆಯಿಂದ ಹೊಡೆದು ಹತ್ಯೆ
- ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ?
ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗ 8 ಜನರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ
ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು
ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು