Sunday, December 3, 2023
Homeಮಲೆನಾಡುಕೆರೆಗೆ ಉರುಳಿ ಬಿದ್ದ ನಾಟಾ ಸಾಗಿಸುತ್ತಿದ್ದ ಲಾರಿ

ಕೆರೆಗೆ ಉರುಳಿ ಬಿದ್ದ ನಾಟಾ ಸಾಗಿಸುತ್ತಿದ್ದ ಲಾರಿ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಾಟಾ ತುಂಬಿದ ಲಾರಿಯೊಂದು ಕೆರೆಗೆ ಉರುಳಿ ಬಿದ್ದ ಘಟನೆ ನಿನ್ನೆ ಸಂಜೆ ಸೊರಬ ತಾಲೂಕಿನ ದೂಗೂರು ಸಮೀಪದಲ್ಲಿ ನಡೆದಿದೆ.

ಇದನ್ನೂ ಓದಿ; ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!

ಇದನ್ನೂ ಓದಿ; ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ

ಸೊರಬದಿಂದ ಸಾಗರ ಕಡೆ ಸಾಗಿಸುತ್ತಿದ್ದ ನಾಟಾ ತುಂಬಿದ ಲಾರಿ ದೂಗೂರು ಸಮೀಪ ಇರುವ ಕೆರೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದಿದ್ದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಸೊರಬ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

Most Popular

Recent Comments