Sunday, September 24, 2023
Homeಮಲೆನಾಡುಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಹಾಸನ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದೆಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ. ಆದರೆ,

ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ!

ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ತನ್ನ ಬೆಂಬಲಿಗರಿಗೆ ನೀಡಿದ್ದಾರೆ

ಮತದಾನ ಮಾಡಿ ಹೊರಬರುತ್ತಿದ್ದಂತೆ ಮತಗಟ್ಟೆ ಆವರಣದಲ್ಲೇ ಹೃದಯಾಗತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕೋಲೆ ಗ್ರಾಮದಲ್ಲಿ ನಡೆದಿದೆ. ಜಯಣ್ಣ (49) ಹೃದಯಾಘಾತದಿಂದ ಮೃತ ಪಟ್ಟ ವ್ಯಕ್ತಿ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಚಿಕೋಲೆ ಗ್ರಾಮದಲ್ಲಿ ಮತದಾನ ಮಾಡಿ ಹೊರಬಂದ ನಂತರ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಕರ್ತವ್ಯಕ್ಕೆ ಲೋಪ; ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಮಾನತ್ತು

ಶೃಂಗೇರಿ: ಚುನಾವಣಾ ಕರ್ತವ್ಯಕ್ಕೆ ಲೋಪವನ್ನುಂಟು ಮಾಡಿ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತ್ತುಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಪುಟ್ಟೇಗೌಡ ಅಮಾನತ್ತು ಆದ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.

ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28 (ಎ) ಮತ್ತು 136 ರಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

Most Popular

Recent Comments