ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

ಧರ್ಮಸ್ಥಳ/ಹಾಸನ: (ನ್ಯೂಸ್ ಮಲ್ನಾಡ್ ವರದಿ)  ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಕೃಷ್ಣಪ್ಪ ಗೌಡ ಎಚ್.ಟಿ.(52) ಮೃತ ವ್ಯಕ್ತಿ

ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್

ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಹಾಸನದ ಹರಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರ ಪತ್ನಿ ಹಾಗೂ ಮಗ ಸ್ನಾನಕ್ಕೆಂದು ನದಿಗೆ ಇಳಿದಿದ್ದರು ಎನ್ನಲಾಗಿದೆ. ಅವರಿಬ್ಬರನ್ನು ಮೇಲಕ್ಕೆತ್ತಲು ಕೃಷ್ಣಪ್ಪ ಅವರು ನೀರಿಗೆ ಇಳಿದಿದ್ದು, ಆಗ ಅವರು ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.