ಮಂಗಳೂರು/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಅಲಿಯಾಸ್ ಮೂರ್ತಿ (52) ಬಂಧಿತ ಆರೋಪಿ.
ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!
ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ
ಬಂಧಿತನಿಂದ ಕಳವು ಮಾಡಿದ ಸುಮಾರು ರೂ 15,00,000/- ಮೌಲ್ಯದ 20 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಹೀರೋ ಹೋಂಡಾ ಸ್ಪೇಂಡರ್ ಪ್ಲಸ್ ಮೋಟಾರ್ ಸೈಕಲ್ ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನದ ಮತ್ತು ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳ್ಳತನ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿದ್ದಾನೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ದತ್ತಪೀಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ದೀಪಕ್ ದೊಡ್ಡಯ್ಯ
- ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ್ಯು.!
- ಶಾಸಕ ಸಿ.ಟಿ ರವಿ ವಿರುದ್ಧ ನಕಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತ ಪೋಲಿಸ್ ವಶಕ್ಕೆ
ಆರೋಪಿತನು ಮಂಗಳೂರು ನಗರ, ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಕಾರ್ಕಳ ಪೊಲೀಸ್ ಠಾಣೆಯ ಒಟ್ಟು 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆ ಅಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಟ್ಟು 8 ಪಕರಣಗಳು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣಗಳಲ್ಲಿ ಮನೆ ಕಳ್ಳತನ ಮಾಡಿದ್ದು ಮಂಗಳೂರಿನಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ 1 ಮನೆ ಕಳ್ಳತನ ಮಾಡಿದ್ದು, ಒಟ್ಟು 13 ಪ್ರಕರಣಗಳ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ; ಎನ್ ಆರ್ ಪುರದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಹೆಚ್ಚಿದ ಭಯ
ಆರೋಪಿ ಈ ಹಿಂದೆ 2005 ರಲ್ಲಿ ಗಂಗಮ್ಮ ಎಂಬ ಮಹಿಳೆಯ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಈ ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಂಗ ಬಂಧನದಲ್ಲಿದ್ದ ಈತ, 2006 ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಮಂಡ್ಯ ಜಿಲ್ಲೆಯ ಮದ್ದೂರು ಎಂಬಲ್ಲಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು ಈವರೆಗೆ ತಲೆಮರೆಸಿಕೊಂಡಿದ್ದ.
ಮಂಗಳೂರಿನಲ್ಲಿ ಮನೆಯೊಂದನ್ನು ಕಳ್ಳತನ ಮಾಡಲು ಬಂದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಈತ ಹಾಸನ ಜಿಲ್ಲೆಯ ಅರಕಲಗೂಡಿನ ಪುನೀತ್ ಎಂಬಾತನೊಂದಿಗೆ ಸೇರಿ ಮನೆ ಕಳ್ಳತನ ಮಾಡುತ್ತಿದ್ದ ಎನ್ನುವುದು ಗೊತ್ತಾಗಿದೆ.
ಇದನ್ನೂ ಓದಿ; ಕೈ ಟಿಕೆಟ್ ತಪ್ಪಿದ್ದಕ್ಕೆ ಗಳಗಳನೆ ಅತ್ತ ಗೋಪಿಕೃಷ್ಣ
ಆರೋಪಿತನ ವಿರುದ್ಧ ಈವರೆಗೆ ದಾಖಲಾದ ಪ್ರಕರಣಗಳು:
ಮಂಗಳೂರು ನಗರದಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು-1 ಪ್ರಕರಣ ಹಾಗೂ ಮೈಸೂರು ಹಾಗೂ ಮಂಡ್ಯ ಜಿಲ್ಲೆಯ 10 ಠಾಣೆಗಳಲ್ಲಿ ಕೊಲೆ, ಅತ್ಯಾಚಾರ, ಕೊಲೆ ಯತ್ನ ಹಾಗೂ ಕಳ್ಳತನಕ್ಕೆ ಸಂಬಂಧಿಸಿದಂತೆ ಒಟ್ಟು -15 ಪ್ರಕರಣಗಳು, ಉಡುಪಿ ಜಿಲ್ಲೆಯಲ್ಲಿ 3 ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು -3 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯಲ್ಲಿ 4 ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು -8 ಪಕರಣಗಳು, ಹಾಸನ ಜಿಲ್ಲೆಯಲ್ಲಿ 2 ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು -2 ಪ್ರಕರಣಗಳು ಸೇರಿ ಒಟ್ಟು 30 ಪ್ರಕರಣಗಳು ದಾಖಲಾಗಿರುತ್ತವೆ.