Anna Bhagya Scheme: ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ

(Anna Bhagya Scheme:) ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಕುರಿತು ರಾಜ್ಯದ ಪಡಿತರ ಚೀಟಿದಾರರಲ್ಲಿ ಗೊಂದಲ ಉಂಟಾಗಿದ್ದು, ಈ ತಿಂಗಳು ರಾಜ್ಯ ಸರ್ಕಾರದ ಪಾಲಿನ ಅಕ್ಕಿ ವಿತರಣೆ ಆಗದಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ ಫಲಾನುಭವಿಗಳು ಯಾವುದೇ ಆತಂಕಪಡಬೇಕಿಲ್ಲ, ಮುಂದಿನ ತಿಂಗಳು ಎರಡು ತಿಂಗಳ ಅಕ್ಕಿಯನ್ನು ಒಟ್ಟಿಗೆ ವಿತರಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಮುಖ್ಯಮಂತ್ರಿ Siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಒಟ್ಟು 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಹಾಗೂ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಸೇರಿರುತ್ತದೆ.

ಆದರೆ ಈ ಬಾರಿ ಕೇಂದ್ರ ಸರ್ಕಾರ ಮೇ ಹಾಗೂ ಜೂನ್ ತಿಂಗಳ ಅಕ್ಕಿಯನ್ನು ಒಟ್ಟಿಗೆ ಕಳುಹಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಸದ್ಯ ಕೇಂದ್ರದ ಪಾಲಿನ ಎರಡು ತಿಂಗಳ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ತನ್ನ ಪಾಲಿನ ಮೇ ತಿಂಗಳ ಅಕ್ಕಿ ವಿತರಣೆ ಮಾಡಿಲ್ಲ ಎಂಬ ಗೊಂದಲ ಸಾರ್ವಜನಿಕರಲ್ಲಿ ಮೂಡಿದೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಹಾಗೂ ರಾಗಿಯನ್ನು ಖರೀದಿಸಿ ಸಂಗ್ರಹಿಸಿಟ್ಟಿರುವ ಕಾರಣ, ಎರಡು ತಿಂಗಳ ಧಾನ್ಯವನ್ನು ಒಂದೇ ಬಾರಿ ಕಳುಹಿಸಿದೆ ಎನ್ನಲಾಗಿದೆ. ಮುಂದಿನ ತಿಂಗಳು ಕೇಂದ್ರ ಸರ್ಕಾರ ತನ್ನ ಪಾಲಿನ ಅಕ್ಕಿ ಕಳುಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆ, ರಾಜ್ಯ ಸರ್ಕಾರ ಮೇ ತಿಂಗಳ ಬಾಕಿ ಅಕ್ಕಿಯನ್ನು ಜೂನ್ ತಿಂಗಳ ಪಡಿತರದೊಂದಿಗೆ ಸೇರಿಸಿ ವಿತರಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದು, ಅನ್ನಭಾಗ್ಯ ಯೋಜನೆ ಅನುಷ್ಠಾನದಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಆರೋಪಿಸಿದ್ದಾರೆ. ಇದೀಗ ಸರ್ಕಾರ ಸ್ಪಷ್ಟನೆ ನೀಡಿರುವಂತೆ, ಫಲಾನುಭವಿಗಳು ಆತಂಕಪಡಬೇಕಾಗಿಲ್ಲ. ಮುಂದಿನ ತಿಂಗಳು ಎರಡು ತಿಂಗಳ ಅಕ್ಕಿ ಒಟ್ಟಿಗೆ ದೊರೆಯಲಿದ್ದು, ಅನ್ನಭಾಗ್ಯ ಯೋಜನೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Anna Bhagya Scheme: ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
Anna Bhagya Scheme: ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ

ಇತ್ತೀಚಿನ ಜನಪ್ರಿಯ ಸುದ್ದಿಗಳು (Anna Bhagya Scheme:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?