(Ayushman Bharat) ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆದಾಯವನ್ನು ಲೆಕ್ಕಿಸದೇ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಪುಟ ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ರಕ್ಷಣೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಈಗಾಗಲೇ ಅನೇಕ ಕುಟುಂಬಗಳು ವ್ಯಾಪ್ತಿಗೆ ಒಳಪಟ್ಟಿವೆ ಮತ್ತು ಹಿರಿಯ ನಾಗರಿಕರನ್ನು ಹೊಂದಿವೆ. ಅಂತಹ ಕುಟುಂಬಗಳಲ್ಲಿ ಹೆಚ್ಚುವರಿ ಕವರೇಜ್, ಟಾಪ್-ಅಪ್ ಕವರೇಜ್ 5 ಲಕ್ಷ ರೂಪಾಯಿ ಇದೆ. 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ಗಳ ಉಚಿತ ಆರೋಗ್ಯ ವಿಮಾ ರಕ್ಷಣೆ ನೀಡುವ ಗುರಿಯನ್ನು ಈ ವ್ಯಾಪ್ತಿ ಹೊಂದಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಏನಿದು ಕೇಂದ್ರ ಸರ್ಕಾರದ ಯೋಜನೆ?:
70 ವರ್ಷ ದಾಟಿದವರಿಗೆ ಉಚಿತ ಆರೋಗ್ಯ ಚಿಕಿತ್ಸೆ ಇದಾಗಿದ್ದು ಆಯುಷ್ಮಾನ್ ಭಾರತ್ ಪಿಎಂ-ಜೆಎವೈ ಯೋಜನೆ ಎಂದು ಹೆಸರಿಡಲಾಗಿದೆ. ದೇಶದ ಒಟ್ಟು 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ ಈ ಸೌಲಭ್ಯ ಸಿಗಲಿದೆ. 5 ಲಕ್ಷ ರೂಪಾಯಿ ವರೆಗೂ ಚಿಕಿತ್ಸೆಗೆ ಸೌಲಭ್ಯ ಲಭಿಸಲಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಗೆ ಇದೀಗ ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದ್ದು ಬುಧವಾರದಂದು ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ; ವಾಹನ ಸವಾರರ ಗಮನಕ್ಕೆ; ಇನ್ನು ನಾಲ್ಕು ದಿನಗಳ ನಂತರ ಫೈನ್ ಗ್ಯಾರಂಟಿ; ಯಾಕೆ ಗೊತ್ತಾ? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಈಗಾಗಲೇ ಆಯುಷ್ಮಾನ್ ಕಾರ್ಡ್ ಇರುವವರಿಗೆ ಹೆಚ್ಚುವರಿಯಾಗಿ 5 ಲಕ್ಷ ರೂ ಸೌಲಭ್ಯ ಲಭಿಸಲಿದೆ. ಬಡವರು, ಮಧ್ಯಮ ವರ್ಗದ ಎಲ್ಲರಿಗೂ ಈ ಸೌಲಭ್ಯ ಪಡೆಯಬಹುದು. ಅದೇ ರೀತಿ ಸಿಜಿಎಚ್ಎಸ್, ಇಎಸ್ಐಸಿ, ಖಾಸಗಿ ವಿಮೆ ಇದ್ದರೂ ಕೇಂದ್ರದ ಈ ಯೋಜನೆಯನ್ನು ಬಳಸಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






