(Bank Loan) ಲೋಕಸಭೆ ಚುನಾವಣೆ ಅಖಾಡ ರಂಗೇರುತ್ತಿದ್ದು, ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಕಾಂಗ್ರೆಸ್ ಹಾಗೂ ಬಿಜೆಪಿ ರಣತಂತ್ರ ಹೆಣೆಯುತ್ತಿವೆ. ಒಂದೆಡೆ, ತಮ್ಮ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿಕೊಂಡಿದ್ದಾರೆ. ಅದೇ ರೀತಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಯೋಜನೆಗಳ ಮಾತುಕತೆ ಕೂಡ ಪ್ರಚಾರ ಕಾರ್ಯಕ್ರಮಗಳಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ಈ ಬಾರಿಯ ಲೋಕಸಭಾ ಚುನಾವಣೆ ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದೆ ಎಂದು ಹೇಳಬಹುದು. ಒಂದು ಕಡೆ ಪ್ರಮುಖ ಯೋಜನೆಗಳನ್ನು ತರುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಅವರ ನೇತೃತ್ವದ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯ ಯೋಜನೆಗಳ ಮಾತುಕತೆ ಕೂಡ ಪ್ರಚಾರ ಕಾರ್ಯಕ್ರಮಗಳಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ಹೌದು, ರಾಹುಲ್ ಗಾಂಧಿ ರೈತರನ್ನು ಪ್ರಮುಖ ಗುರಿಯಾಗಿರಿಸಿಕೊಂಡು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸಾಮಾನ್ಯವಾಗಿ ಇತ್ತೀಚಿನ ವರ್ಷಗಳಲ್ಲಿ ಮಳೆ ಬೆಳೆ ಕೈ ಕೊಟ್ಟ ಕಾರಣದಿಂದಾಗಿ ಸಾಲ ಮಾಡಿಕೊಂಡಿರುವ ರೈತರಿಗೆ ಸಾಕಷ್ಟು ದೊಡ್ಡ ಮಟ್ಟದಲ್ಲಿ ನಷ್ಟವಾಗುತ್ತಿದೆ. ಲೋನ್ ಪಡೆದುಕೊಂಡಿದ್ದನ್ನು ಮರುಪಾವತಿ ಮಾಡಬೇಕು ಎನ್ನುವಂತಹ ಒತ್ತಡ ಕೂಡ ರೈತರ ಮೇಲೆ ಇರುತ್ತದೆ. ಇದೇ ಕಾರಣಕ್ಕಾಗಿ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ರವರು ರೈತರು ಮಾಡಿಕೊಂಡಿರುವಂತಹ ಪ್ರತಿಯೊಂದು ಸಾಲವನ್ನು ಪ್ರತಿಯೊಂದು ಬ್ಯಾಂಕುಗಳಲ್ಲಿಯೂ ಕೂಡ ಸಾಲ ಮನ್ನಾ ಮಾಡುವಂತಹ ಕೆಲಸವನ್ನು ಮಾಡುತ್ತೇವೆ ಎಂಬುದಾಗಿ ಹೇಳಿಕೊಂಡಿದ್ದು, ಇದು ಚುನಾವಣೆಯ ಸಂದರ್ಭದಲ್ಲಿ ಗೇಮ್ ಚೇಂಜ್ ಆಗಿ ಕಾಣಿಸಿಕೊಳ್ಳಬಹುದು.
ಕರ್ನಾಟಕದಲ್ಲಿ ಯಾವ ರೀತಿಯಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನೀಡಿತ್ತು. ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರು ಹೇಳುತ್ತಿರುವ ರೈತರ ಸಾಲ ಮನ್ನಾ, ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಗಳನ್ನು ತಂದರು ಕೂಡ ಆಶ್ಚರ್ಯ ಪಡಬೇಕಾಗಿಲ್ಲ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ







Leave a Reply