(bpl-card-cancel:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅಲ್ಲದೆ ಉಚಿತ ಚಿಕಿತ್ಸೆ, ಹಲವು ಯೋಜನೆಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಹಲವು ಜನ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಅಂತಹ ನಕಲಿ ದಾಖಲೆಯನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿರುವವರಿಗೆ ಇದೀಗ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ
ಹೌದು, ಬಿಪಿಎಲ್ ರೇಷನ್ ಕಾರ್ಡ್ ಗಾಗಿ ನಕಲಿ ದಾಖಲೆಯನ್ನು ನೀಡಿ ಕಾರ್ಡ್ ಪಡೆದುಕೊಂಡಿರುವವರಿಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎನ್ನಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ ನೀಡಿದವರು, 7.5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿದವರು, ಸ್ವಂತಕ್ಕೆ ನಾಲ್ಕು ಚಕ್ರದ ವಾಹನ ಹೊಂದಿದವರು ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳುವಂತಿಲ್ಲ. ಆದರೂ ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಸುಳ್ಳು ದಾಖಲೆ ನೀಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ:
ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಸಾಬೀತಾದಲ್ಲಿ ಇದುವರೆಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಪಡಿತರ ಮತ್ತು ಇತರೆ ಧಾನ್ಯಗಳ ಮೊತ್ತವನ್ನು ಅಕ್ಕಿ ಕೇಜಿಗೆ ತಲಾ 35 ರೂ.ನಂತೆ ಮರಳಿಸಬೇಕು. ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ
ಸುಳ್ಳು ದಾಖಲೆ ನೀಡಿ ಪಡೆದುಕೊಂಡ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಗಳನ್ನು ಹಿಂತಿರುಗಿಸುವಂತೆ ಆಹಾರ ಇಲಾಖೆ ಅನೇಕ ಬಾರಿ ಅವಕಾಶ ನೀಡಿದೆ. ಇದೀಗ ಪರಿಶೀಲನಾ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡಲಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಆಯಾ ತಾಲೂಕು ಕಚೇರಿಗೆ ತೆರಳಿ ಸ್ವಯಂ ಪ್ರೇರಿತವಾಗಿ ವಾಪಸ್ ನೀಡಬೇಕು. ಆಹಾರ ಇಲಾಖೆಯೇ ಪತ್ತೆ ಮಾಡಿದಲ್ಲಿ ಇದುವರೆಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಅಕ್ಕಿ ಅಥವಾ ಇತರೆ ಧಾನ್ಯಗಳ ಮೊತ್ತವನ್ನು ವಸೂಲಿ ಮಾಡಲಾಗುವುದು ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






