BPL-CARD:ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ

(BPL-CARD:) ಚುನಾವಣೆಗೂ ಮುಂಚೆ ಕಾಂಗ್ರೆಸ್ ಸರ್ಕಾರವು ಘೋಷಿಸಿದ 10ಕೆ.ಜಿ ಅಕ್ಕಿ ನೀಡುವ ಭರವಸೆಯನ್ನು ಉಳಿಸಿಕೊಳ್ಳಲು ಇಲ್ಲಿಯ ತನಕ ಪಡಿತರ ಕಾರ್ಡು ಹೊಂದಿರುವವರಿಗೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯನಿಗೆ 170 ರೂ. ನಂತೆ ಹಣವನ್ನು ನೀಡಲಾಗುತ್ತಿತ್ತು. ಆದರೆ ಇದೀಗ 5 ಕೆ.ಜಿ ಅಕ್ಕಿ ಹಣವನ್ನು ನೀಡುತ್ತಿರುವುದರ ಬದಲಾಗಿ ಎಣ್ಣೆ, ಬೇಳೆ ಇತರೆ ಅಡುಗೆ ದಿನಸಿ ಸಾಮಗ್ರಿಗಳನ್ನು ನೀಡಲು ಸರ್ಕಾರವು ಚಿಂತನೆ ನಡೆಸಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ


ಕರ್ನಾಟಕ ಸರ್ಕಾರವು ಇತ್ತೀಚೆಗೆ ನಡೆಸಿದಂತಹ ಸಮೀಕ್ಷೆಯಲ್ಲಿ ಶೇಕಡ 93 ರಷ್ಟು ಪಡಿತರದಾರರು, 5 ಕೆ.ಜಿ ಅಕ್ಕಿಯ ಜೊತೆಗೆ ಇನ್ನೂ ಐದು ಕೆಜಿ ಅಕ್ಕಿಯ ಬದಲಾಗಿ ದಿನಸಿ ಸಾಮಗ್ರಿಗಳನ್ನು ಪಡೆಯಲು ಆಸಕ್ತಿ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ದಿನಸಿ ಸಾಮಗ್ರಿಗಳನ್ನು ಕೊಡುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಅದೇ ರೀತಿ ಇದರ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದೆಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದಂತಹ ಕೆ.ಎಚ್ ಮುನಿಯಪ್ಪನವರು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು


ಕರ್ನಾಟಕ ಸರಕಾರವು ಪ್ರತಿಯೊಂದು ಗ್ಯಾರಂಟಿ ಯೋಜನೆಗಳನ್ನು ಸರಿಯಾದ ಕ್ರಮದಲ್ಲಿ ಜಾರಿಗೆ ತರಲು ಪ್ರಯತ್ನ ಪಡುತ್ತಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ದಾರಿಯಲ್ಲಿ ನಡೆದುಕೊಳ್ಳುತ್ತಿದೆ.


ಇದನ್ನೂ ಓದಿ: ಇನ್ಮುಂದೆ ಕೃಷಿಗೆ ನೀರಾವರಿ ಸಮಸ್ಯೆ ಇಲ್ಲ..!; ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು 15 ದಿನ ಬಾಕಿ!


ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ:
ಹೌದು, ಕೆಲ ದಿನಗಳ ಹಿಂದೆಯೇ ಕೇಂದ್ರ ಗ್ರಾಹಕ ವ್ಯವಹಾರಗಳು ಆಹಾರ ಮತ್ತು ಪಡಿತರ ವಿತರಣಾ ಸಚಿವರಾದಂತಹ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಹಾಗೂ 5 ಕೆ.ಜಿಯ ಅಕ್ಕಿಯ ಬದಲಾಗಿ ಗ್ರಾಹಕರಿಗೆ ಇತರೆ ಅಡುಗೆ ದಿನಸಿ ಸಾಮಗ್ರಿಗಳನ್ನು ನೀಡುವುದರ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿ. ಕೆ ಶಿವಕುಮಾರ್ ಅವರೊಂದಿಗೆ ಚರ್ಚೆಯನ್ನು ನಡೆಸಿ ಈ ಯೋಜನೆಯನ್ನು ಯಾವ ರೀತಿ ಜಾರಿಗೆ ತರಬಹುದು ಎಂಬುದನ್ನು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ಅಕ್ಕಿ ಕೊಡುವುದಾಗಿ ಮನವಿ ಸಲ್ಲಿಸಿದ್ದು, ಈ ಒಂದು ಮನವಿಗೆ ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಾಗಿ ದಿನಸಿ ಸಾಮಗ್ರಿಗಳನ್ನು ನೀಡುವುದನ್ನು ಯಾವ ರೀತಿ ಕಾರ್ಯಗತ ಮಾಡಲಿದೆ ಎಂದು ಕಾಯ್ದು ನೋಡಬೇಕಾಗಿದೆ.

BPL-CARD:ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ
BPL-CARD:ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ

ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಶೇ. 80 ರಿಂದ ಶೇ.90% ರಷ್ಟು ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?