ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ನಂಜಪ್ಪ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ (22) ನಿಗೂಢವಾಗಿ ನಾಪತ್ತೆಯಾಗಿ ಆಕೆಯ ತಂದೆಗೆ 20 ಲಕ್ಷ ರೂ. ಬೇಡಿಕೆ ಬಂದಿದ್ದ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಯುವತಿಯನ್ನು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಲಾಗಿದ್ದು, ಇದೆಲ್ಲವೂ ಅವಳೇ ಸೃಷ್ಟಿಸಿದ ಕಟ್ಟು ಕಥೆ ಎಂಬುದು ಬಯಲಾಗಿದೆ.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಶಿವಮೊಗ್ಗದ ನಂಜಪ್ಪ ಕಾಲೇಜಿನಲ್ಲಿ ಫಿಸಿಯೋ ಥೆರಪಿ ವ್ಯಾಸಂಗ ಮಾಡುತ್ತಿದ್ದ ರಂಜಿತಾ ನಿಗೂಢವಾಗಿ ನಾಪತ್ತೆಯಾಗಿದ್ದಳು. ಅದಾದ ಬಳಿಕ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದ ಈ ಯುವತಿಯ ತಂದೆ ಬಸವರಾಜ್ ಅವರಿಗೆ ಎಸ್ಎಂಎಸ್ ಸಂದೇಶವೊಂದು ಬಂದಿತ್ತು. ಅದರಲ್ಲಿ 20 ಲಕ್ಷ ರೂ. ನೀಡದಿದ್ದರೆ ಮಗಳನ್ನು ಕೊಲುವುದಾಗಿ ಬೆದರಿಕೆ ಹಾಕಲಾಗಿತ್ತು. ಆತಂಕಗೊಂಡ ಬಸವರಾಜ್ ಅವರು ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಶಿವಮೊಗ್ಗ ಪೊಲೀಸರು ತೀವ್ರ ಹುಡುಕಾಟ ನಡೆಸಿ ಆಕೆಯನ್ನು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಶಿವಮೊಗ್ಗಕ್ಕೆ ಕರೆತಂದಿದ್ದು, ಪಾಲಕರ ವಶಕ್ಕೆ ಒಪ್ಪಿಸಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಉದ್ಯಮಿ ಕೃತ್ಯದ ವಿರುದ್ಧ ಮಹಿಳೆಯಿಂದ ದೂರು
- ಸಿ. ಟಿ ರವಿ ಸೋಲನ್ನು ಸಂಭ್ರಮಿಸುವ ರೀತಿ ವ್ಯಂಗ್ಯವಾಡಿದ ಎಂ ಪಿ ಕುಮಾರಸ್ವಾಮಿ
- ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ
ದೂರು ನೀಡುವ ವೇಳೆ ರಂಜಿತಾ ಬಗ್ಗೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದ ಶಿವಮೊಗ್ಗದ ಜಯನಗರ ಪೊಲೀಸರು ಆಕೆಯ ಬಗ್ಗೆ ಎಲ್ಲ ಕಡೆ ಜಾಲಾಡಿದ್ದರು. ರಂಜಿತಾಳ ಮೊಬೈಲ್ ಟ್ರ್ಯಾಕಿಂಗ್ ಹಾಕಿದ ಪೊಲೀಸರು, ಆಕೆಯ ಬ್ಯಾಂಕ್ ವ್ಯವಹಾರಗಳ ಮೇಲೂ ಕಣ್ಣಿಟ್ಟಿದ್ದರು, ಆಕೆ ಎಟಿಎಂನಿಂದ 5000 ರೂ. ವಿತ್ ಡ್ರಾ ಮಾಡಿದ್ದನ್ನೇ ಬೆನ್ನಟ್ಟಿದಾಗ ಆಕೆ ಹುಬ್ಬಳ್ಳಿಯಲ್ಲಿ ಇರುವುದು ಸ್ಪಷ್ಟವಾಯಿತು.
ಇದನ್ನೂ ಓದಿ; ಕಾರ್ಮಿಕನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ
ಹುಬ್ಬಳ್ಳಿಯಲ್ಲಿ ರಂಜಿತಾಳನ್ನು ವಶಕ್ಕೆ ಪಡೆದ ಪೊಲೀಸರು ಶಿವಮೊಗ್ಗಕ್ಕೆ ಕರೆ ತಂದು ವಿಚಾರಣೆ ನಡೆಸಿದಾಗ ಹಲವು ರೋಚಕ ಅಂಶಗಳು ಬೆಳಕಿಗೆ ಬಂದವು. ಅಪಹರಣ ಪ್ರಕರಣಕ್ಕೆ ಯುವತಿ ಹೇಳಿಕೆ ತಿರುವು ಕೊಟ್ಟಿತು. ರಂಜಿತಾ ಶಾಲೆಯಲ್ಲಿರುವಾಗಲೇ ಕ್ರಿಶ್ಚಿಯನ್ ಸನ್ಯಾಸಿನಿಯರ ಪ್ರಭಾವ ಆಗಿತ್ತು ಎನ್ನಲಾಗಿದೆ.
ಶಿವಮೊಗ್ಗದಲ್ಲಿ ಕ್ರಿಶ್ಚಿಯನ್ ವಿದ್ಯಾರ್ಥಿನಿಯರ ಪರಿಚಯವಾದ ಬಳಿಕ ಅದು ಇನ್ನಷ್ಟು ಗಾಢವಾಗಿತ್ತು. ಇದೀಗ ಆಕೆ ಮುಂಬೈನ ಕ್ಯಾಥೊಲಿಕ್ ಚರ್ಚ್ಗೆ ಹೊರಟಿದ್ದಳು ಎನ್ನಲಾಗಿದೆ.
ಇದನ್ನೂ ಓದಿ; ಜ್ಯೋತಿಷಿ ಮಾತು ಕೇಳಿ ಯುವಕನ ಕೈ-ಕಾಲು ಕತ್ತರಿಸಿದ್ದ ಚಿಕ್ಕಪ್ಪ?
ಮೇ ೧೪ರಂದು ಶಿವಮೊಗ್ಗದ ಹಾಸ್ಟೆಲ್ನಿಂದ ಹೊರಟಿದ್ದ ರಂಜಿತಾ ಶಿವಮೊಗ್ಗದಿಂದ ಮುಂಬೈಗೆ ಟಿಕೆಟ್ ಬುಕಿಂಗ್ ಮಾಡಲು ಯತ್ನಿಸಿದ್ದಳು. ಆದರೆ, ಸಿಕ್ಕಿರಲಿಲ್ಲ. ಬಳಿಕ ತೀರ್ಥಹಳ್ಳಿಯಿಂದ ಶೃಂಗೇರಿ, ಚಿಕ್ಕಮಗಳೂರು ಮೂಲಕ ಹುಬ್ಬಳ್ಳಿಗೆ ತೆರಳಿದ್ದಳು ಎನ್ನಲಾಗಿದೆ.
ಮುಂಬಯಿಗೆ ಹೋದ ಮೇಲೆ, ಅಲ್ಲಿ ವಾಸ ಮಾಡಲು ಹಣ ಬೇಕು ಎಂಬ ಕಾರಣಕ್ಕಾಗಿ ರಂಜಿತಾ ಅಪಹರಣದ ಕಥೆ ಸೃಷ್ಟಿ ಮಾಡಿದ್ದಳು. 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಡುವ ಮೆಸೇಜನ್ನು ತಂದೆಗೆ ತಾನೇ ಕಳಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ ರಂಜಿತಾಳ ಹಿಂದೆ ಯಾರಾದರೂ ಇದ್ದರಾ, ಇದೊಂದು ಮತಾಂತರ ಜಾಲದ ಕುಮ್ಮಕ್ಕಿನ ಕೃತ್ಯವೇ ಎಂಬ ಬಗ್ಗೆ ತವಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ; ಸರ್ಕಾರಿ ನೌಕರನಿಂದ ಮರ್ಕಲ್ ಗ್ರಾಮ ಪಂಚಾಯಿತಿ ಸಮೀಪ ಅಕ್ರಮ ಕಟ್ಟಡ ನಿರ್ಮಾಣ ಆರೋಪ, ಶಿಸ್ತು ಕ್ರಮಕ್ಕೆ