ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಾಂಸಕ್ಕಾಗಿ ದುಷ್ಕರ್ಮಿಗಳು ಎಮ್ಮೆಯೊಂದನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮದ ಎಬಿಸಿ ಕಾಫಿ ಎಸ್ಟೇಟ್ನಲ್ಲಿ ನಡೆದಿದೆ.
ಇದನ್ನೂ ಓದಿ; ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ
ದಯಾನಿಧಿ ಎಂಬ ರೈತರಿಗೆ ಸೇರಿದ್ದ ಎಮ್ಮೆಯನ್ನು ಕಾನೂನು ಬಾಹಿರವಾಗಿ ಹೊಂದಿದ್ದ ಡಬಲ್ ಬ್ಯಾರಲ್ ಗನ್ನಿಂದ ಹತ್ಯೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ (52) ಹಾಗೂ ಅಬ್ಯುಲ್ ಖಾದರ್ (67) ಎಂಬುವರನ್ನು ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ | 27-06-2023
- ಎನ್.ಆರ್.ಪುರ/ಕೊಪ್ಪ; ರಸ್ತೆಗೆ ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಹೋಗಿ ಗುಂಡಿಗೆ ಬಿದ್ದ ಕಾರು
- ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ
ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಖ್ಯ ಆರೋಪಿ ಪರಾರಿಯಾಗಿದ್ದು, ಸದ್ಯ ಇಬ್ಬರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವಾತನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಾಸನ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ಪರಿಸರವಾದಿ ಪ್ರದೀಪ್ ಗೌಡ ಮನೆಯಲ್ಲಿ ಕಳ್ಳತನ
ಚಿಕ್ಕಮಗಳೂರು: ಪರಿಸರವಾದಿ ಪ್ರದೀಪ್ ಗೌಡ ಮನೆಯಲ್ಲಿ ಕಳ್ಳತನ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕೋಟೆಯ ಚೆನ್ನಪುರ ರಸ್ತೆಯಲ್ಲಿರುವ ಪರಿಸರವಾದಿ ಪ್ರದೀಪ್ ಗೌಡ ಅವರ ಮನೆಯಲ್ಲಿ ನಡೆದಿದೆ.
ಇದನ್ನೂ ಓದಿ; ನರಸಿಂಹರಾಜಪುರ: ಶಾಲೆಯ ಸಮಸ್ಯೆ ಹೇಳಿಕೊಳ್ಳಲು ಪಾನಮತ್ತರಾಗಿ ಬಂದಿದ್ದ ಪ್ರಾಂಶುಪಾಲ; ಶಾಸಕ ಟಿ.ಡಿ ರಾಜೇಗೌಡ ತರಾಟೆ
ಮನೆಯಲ್ಲಿ ಯಾರು ಇಲ್ಲದ ವೇಳೆ ಕಿರಾತಕರು ಕಳ್ಳತನ ಮಾಡಿದ್ದು, 50 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ, ಒಂದು ಲ್ಯಾಪ್ ಟಾಪ್ ಸೇರಿದಂತೆ 1 ಲಕ್ಷದ 20 ಸಾವಿರ ಹಣವನ್ನು ಕಳ್ಳರು ದೋಚಿದ್ದಾರೆ.
ಇನ್ನು ಈ ಬಗ್ಗೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.