ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜನರ ಖಾತೆಗೆ ಹಣ ಹಾಕಿ ಅವರೇ ಹೆಚ್ಚುವರಿ 5 ಕೆ.ಜಿ. ಅಕ್ಕಿ ಕೊಂಡುಕೊಳ್ಳುತ್ತಾರೆ ಎಂದು ಹೇಳಿದ್ದ ಸಿ.ಟಿ.ರವಿಗೆ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ; ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆ
ಇದನ್ನೂ ಓದಿ; ಉಚಿತ ವಿದ್ಯುತ್ ಯೋಜನೆಯನ್ನು ಪಡೆಯಲು ಏನು ಮಾಡಬೇಕು?
ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ದುಡ್ಡು ಕೊಡುತ್ತೇವೆ ಕೊಡಿ ಎಂದು ಕೇಳಿದ್ದೇವೆ. ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ಹಣವಲ್ಲ. ಎಫ್.ಸಿ.ಐ. ಅವರೇ ಸ್ಟಾಕ್ ಇದೆ, ಕೊಡುತ್ತೇವೆ ಎಂದು ಲೆಟರ್ ಕೊಟ್ಟಿದ್ದಾರೆ. ಈಗ ಅಕ್ಕಿ ವಾಪಸ್ ಹೋಗಿದೆ. ಕೊಳೆಯಲು ಬಿಟ್ಟಿದ್ದೀರಾ ಸಿ.ಟಿರವಿ ಅವರೇ ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಪಾಪ ಸಿ.ಟಿ.ರವಿ he is a part man. ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಅವರಿಗೆ ಇದೆಲ್ಲ ಹೇಗೆ ಗೊತ್ತಾಗುತ್ತದೆ. ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ಹಣ ಕೊಡಿ ಅಂದರೆ ಹೇಗೆ. ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ದುಡ್ಡಲ್ಲ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ; ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋ ಚೆನ್ನಾಗಿಲ್ಲ; ಫೋಟೋವನ್ನು ಬದಲಾಯಿಸಬಹುದು ಹೇಗೆ ಗೊತ್ತಾ?
ಇದೇ ವೇಳೆ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದಕ್ಕೆ ಬಿಜೆಪಿಯವರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಕೆಲಸವೇ ವಿರೋಧ ಮಾಡುವುದು. ಕಾಂಗ್ರೆಸ್ನ ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿಪಕ್ಷ ಅಲ್ಲ, ವಿರೋಧ ಪಕ್ಷ ಎಂದು ಲೇವಡಿ ಮಾಡಿದರು.
ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ ಹಾಗೂ ಆಶ್ವಾಸನೆ ಕೊಟ್ಟು ಮತಾಂತರ ಮಾಡುವುದು ತಪ್ಪು. ಅದು ಹಳೇ ಕಾಯ್ದೆಯೇ ಇದೆ. ಅದನ್ನು ನಾವು ಒಪ್ಪುತ್ತೇವೆ. ಆದರೆ, ಅವರು ಕೆಲವು ತಪ್ಪು ಮಾಡಿದ್ದಾರೆ. ಆರೋಪ ಮಾಡಿದವರು ದಾಖಲೆ ತೋರಿಸಬೇಕು. ಆರೋಪ ಮಾಡುವವರು ಸಾಕ್ಷಿ ಕೊಟ್ಟು ಹೇಳಬೇಕು ಎಂದು ಎಂದರು
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಹಾಗೂ ನರಸಿಂಹರಾಜಪುರ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ
- ನಿಮ್ಮ ಆಧಾರ್ ವಿವರಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಕೊನೆ ದಿನ
- ಪ್ಯಾರ ಮೆಡಿಕಲ್ ಕಾಲೇಜು ಮುಖ್ಯಸ್ಥರಿಂದ ವಿದ್ಯಾರ್ಥಿನಿಗೆ ಹಲ್ಲೆ
ನನ್ನ ಮೇಲೆ ಆರೋಪ ಮಾಡಿದರೆ, ನಾನೇ ಪ್ರೂವ್ ಮಾಡಬೇಕಾ. ಇದು ಯಾವ ಕಾನೂನಿನಲ್ಲಿ ಇದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಿಜೆಪಿಯವರು ಈ ರೀತಿ ತುಂಬಾ ತಪ್ಪುಗಳನ್ನು ಮಾಡಿದ್ದಾರೆ. ಅದನ್ನು ನಾವು ಸರಿ ಮಾಡುತ್ತೇವೆ. ಇಷ್ಟು ದಿನ ಅವರೇ ಇದ್ದರಲ್ಲಾ ಹೊಸದಾಗಿ ಏನು ಕಂಡುಹಿಡಿದಿದ್ದಾರೆ. ನಮಗೂ ಜವಾಬ್ದಾರಿ ಇದೆ, ಹಾಗಾಗಿ ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿಗೆ ಮಾಡುತ್ತೇವೆ ಎಂದರು.
ತಿಂಗಳಿಗೆ ಅತಿ ಹೆಚ್ಚು ಸಂಬಳ ನೀಡುವ ಟಾಪ್ ಸರ್ಕಾರಿ ಹುದ್ದೆಗಳು ಯಾವುದು ಗೊತ್ತ?
ನಮ್ಮಲ್ಲಿ ಬಹುತೇಕರು ಸರ್ಕಾರಿ ಉದ್ಯೋಗಗಳಿಗಾಗಿ ಸಾಕಷ್ಟು ವರ್ಷಗಳ ಕಾಲ ಪ್ರಯತ್ನಿಸುತ್ತಾರೆ. ಕುಟುಂಬದಲ್ಲಿ ಯಾರಾದರೂ ಒಬ್ಬರಿಗೆ ಸರ್ಕಾರಿ ಕೆಲಸ ಸಿಕ್ಕಿದ್ದರು ಸಾಕು ಅನ್ಕೋತಾರೆ. ಆದರೆ ಇನ್ನೂ ಕೆಲವರು ಪ್ರೈವೇಟ್ ಜಾಬ್ಸ್ ಬೆಸ್ಟ್ ಅಂತಾರೆ. ಯಾಕಂದ್ರೆ ಅಲ್ಲಿ ಲಕ್ಷಗಳಲ್ಲಿ ಸಂಬಳ ಸಿಗುತ್ತೆ, ಪ್ಯಾಕೇಜ್ ಚೆನ್ನಾಗಿರುತ್ತೆ ಅಂತ. ಆದ್ರೆ ಅದು ಸಂಪೂರ್ಣ ಸತ್ಯವಲ್ಲ. ಸರ್ಕಾರಿ ಕೆಲಸಗಳಲ್ಲೂ ಲಕ್ಷಾಂತರ ಸಂಬಳ ಪಡೆಯುವಂತಹ ಹುದ್ದೆಗಳಿವೆ. ಆ ಹುದ್ದೆಗಳು ಯಾವುವು ಅಂತ ನಾವು ಇವತ್ತು ನೋಡೋಣ.
ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ಠಾಣೆಗೆ ಹೈಟೆಕ್ ರೂಪ ಕೊಟ್ಟ ಪಿ.ಎಸ್.ಐ ಪವನ್
ಪ್ರೈವೇಟ್ ಜಾಬ್ ಗಳಲ್ಲಿ ಲಕ್ಷಾಂತರ ರೂಪಾಯಿ ಪ್ಯಾಕೇಜ್ ಸಿಗುತ್ತೆ. ಆದರೂ ಇವತ್ತಿಗೂ ಲಕ್ಷಾಂತರ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗದ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಿಗೆ ವರ್ಷಗಳ ಕಾಲ ತಯಾರಿ ನಡೆಸುತ್ತಾರೆ. ಯಾಕೆಂದ್ರೆ ಪ್ರೈವೇಟ್ ಜಾಬ್ ಗಳಲ್ಲಿ ಸಂಬಳ ಜಾಸ್ತಿ ಇದ್ರೂ ಜಾಬ್ ಸೆಕ್ಯೂರಿಟಿ ಇರೋದಿಲ್ಲ. ಆದರೆ ಸರ್ಕಾರಿ ಹುದ್ದೆಗಳಲ್ಲಿ ಉದ್ಯೋಗ ಭದ್ರತೆ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ.
ಅದಕ್ಕಾಗಿಯೇ ಜನ ಜಾಸ್ತಿ ಸಂಬಳ ಬರದಿದ್ದರೂ ಜಾಬ್ ಸೆಕ್ಯೂರಿಟಿಗಾಗಿ ಸರ್ಕಾರಿ ಹುದ್ದೆಗಳಿಗೆ ಆದ್ಯತೆ ನೀಡುತ್ತಾರೆ. ಹಾಗಾಗಿ ಇಂದಿನ ದಿನಗಳಲ್ಲೂ ಸರ್ಕಾರಿ ಹುದ್ದೆಗಳಿಗೆ ಬೇಡಿಕೆ ಇದೆ. ಹಾಗಾದರೆ ಯಾವೆಲ್ಲ ಹುದ್ದೆಗಳಲ್ಲಿ ಲಕ್ಷಗಳ ಪ್ಯಾಕೇಜ್ ಸಿಗುತ್ತೆ ಅನ್ನೋದರ ಬಗ್ಗೆ ಇವತ್ತು ಇಲ್ಲಿ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ; ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ
1. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕ ಹುದ್ದೆಗಳು:
ಅತೀ ಹೆಚ್ಚು ಸಂಬಳ ನೀಡುವ ಮತ್ತು ಗೌರವಾನ್ವಿತ ಹುದ್ದೆಗಳ ಪೈಕಿ ಉಪನ್ಯಾಸಕ ಹುದ್ದೆಯು ಒಂದು. ಉಪನ್ಯಾಸಕ ಹುದ್ದೆಗಳಿಗೆ ರೂ.40,000 ದಿಂದ 1,00,000 ದವರೆಗೂ ವೇತನ ನೀಡಲಾಗುತ್ತದೆ.
2. ವಿದೇಶಾಂಗ ಸಚಿವಾಲಯದ ಎಎಸ್ಒ ಹುದ್ದೆ:
ವಿದೇಶಾಂಕ ಸಚಿವಾಲಯದ ಅಸಿಸ್ಟಂಟ್ ಸೆಕ್ಷನ್ ಆಫೀಸರ್ (ಎಎಸ್ಒ) ಹುದ್ದೆ ಪಡೆಯಬೇಕಾದರೆ ಸಿಬ್ಬಂದಿ ನೇಮಕಾತಿ ಆಯೋಗದ (ಎಎಸ್ಸಿ) ಪರೀಕ್ಷೆಗಳಿಗೆ ತಯಾರಿ ನಡೆಸಬೇಕು. ವಿದೇಶಾಂಗ ಸಚಿವಾಲಯದ ಎಎಸ್ಒ ಹುದ್ದೆಗಳಿಗೆ 50.000 ದಿಂದ ರೂ.1,80,000 ದವರೆಗೆ ವೇತನ ನೀಡಲಾಗುತ್ತದೆ.
3. ಸರ್ಕಾರಿ ಬ್ಯಾಂಕ್ ಹುದ್ದೆಗಳು;
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಮತ್ತು ಉತ್ತಮ ಸಂಬಳ ಬಯಸುವ ಅಭ್ಯರ್ಥಿಗಳಿಗೆ ಹುದ್ದೆ ಬೆಸ್ಟ್ ಎಂದೇಳಬಹುದು. ಈ ಹುದ್ದೆಗೆ ಸಾಮಾನ್ಯವಾಗಿ ಮಾಸಿಕ 30,000 ರಿಮದ 1,00,000 ದವರೆಗೆ ವೇತನ ನೀಡಲಾಗುತ್ತದೆ.
4. ಪಿಎಸ್ಯು ಜಾಬ್ಸ್ (ಪಬ್ಲಿಕ್ ಸೆಕ್ಟಾರ್ ಅಂಡರ್ಟೇಕಿಂಗ್):
ಪಿಎಸ್ಯು ಅಥವಾ ಪಬ್ಲಿಕ್ ಸೆಕ್ಟಾರ್ ಅಂಡರ್ಟೇಕಿಂಗ್ ಜಾಬ್ಸ್ ಗಳಿಗೆ ಇಂಜಿನಿಯರ್ ಪದವೀಧರರು ಅರ್ಜಿ ಸಲ್ಲಿಸಬಹುದು. ಪಿಎಸ್ಯು ಹುದ್ದೆಯ ಅಧಿಕಾರಿಗಳಿಗೆ ರೂ.52,000 ಮಾಸಿಕ ಸಂಭಾವನೆ ನೀಡಲಾಗುತ್ತದೆ.
5. ರಕ್ಷಣಾ ಸೇವೆ:
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಕಂಬೈನ್ಡ್ ಡಿಫೆನ್ಸ್ ಸರ್ವೀಸ್, ಏರ್ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ ಸೇರಿದಂತೆ ಇತರೆ ಹಲವು ಪರೀಕ್ಷೆಗಳನ್ನು ರಕ್ಷಣಾ ಸೇವೆಯ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತದೆ. ಪ್ರೌಢಶಿಕ್ಷಣ ಮುಗಿಸಿದ ನಂತರ ಅಥವಾ ಪದವಿ ಶಿಕ್ಷಣ ಮುಗಿಸಿದ ನಂತರ ಯಾವಾಗ ಬೇಕಾದರೂ ಈ ಸೇವೆಗೆ ಸೇರಬಹುದು. ರಕ್ಷಣಾ ಇಲಾಖೆಯ ಹುದ್ದೆಗಳಿಗೆ ಆರಂಭಿಕ ವೇತನ ರೂ. 50,000 ರಿಂದ 1,00,000 ದವರೆಗೆ ಇರುತ್ತದೆ.
6. ರೈಲ್ವೆ ಇಂಜಿನಿಯರ್ ಹುದ್ದೆ:
ರೈಲ್ವೆ ಇಂಜಿನಿಯರ್ ಹುದ್ಡೆಗಳಿಗೆ ಮಹತ್ವವಾದ ಹಾಗೂ ಒಳ್ಳೆಯ ಹುದ್ದೆ ಎಂದು ಕರೆಸಿಕೊಂಡಿದ್ದೆ ಇವರಿಗೆ ವಿವಿಧ ಭತ್ಯೆಗಳ ಜೊತೆಗೆ ಮಾಸಿಕ 70,000 ರಿಂದ 1,00,000 ದವರೆಗೆ ಸಂಬಳ ನೀಡಲಾಗುತ್ತದೆ.
7. ಆದಾಯ ತೆರಿಗೆ ಇಲಾಖೆ:
ಈ ಹುದ್ದೆಯಲ್ಲಿ ನಾನಾತರವಾದ ಹುದ್ದೆಗಳು ಅದರಲ್ಲಿ ಆದಾಯ ತೆರಿಗೆ ಇಲಾಖೆಯ ಇನ್ಸ್ಪೆಕ್ಟರ್ ಹಾಗೂ ಕಮಿಷನರ್ ವರೆಗೆ ಯಾವ ಹುದ್ದೆಗೆ ಬೇಕಾದರು ಏರಬಹುದು. ಇದರಲ್ಲಿ ವಿವಿಧ ಸೌಲಭ್ಯಗಳು ಸಹ ನೀಡಲಾಗುತ್ತದೆ. ಮಾಸಿಕ ವೇತನ 50,000 ರಿಂದ 1,00,000 ದವರೆಗೆ ನೀಡಲಾಗುತ್ತದೆ.
8. ಸರ್ಕಾರಿ ವೈದ್ಯರು:
ಇನ್ನು ವೈದ್ಯರ ವೇತನ ಹೆಚ್ಚುವರಿಯಾಗಿನೆ ಇರುತ್ತದೆ. ಓರ್ವ ಸರ್ಕಾರಿ ಹಿರಿಯ ಸರ್ಜನ್ ಗೆ 1,00,000 ದಿಂದ 2,00,000 ದವರೆಗೆ ಸಿಗುತ್ತದೆ, ಕಿರಿಯ ವೈದ್ಯರಿಗೆ 50,000 ರಿಂದ 90,000 ದವರೆಗೆ ನೀಡಲಾಗುತ್ತದೆ.
9. ಸರ್ಕಾರಿ ವಿಜ್ಞಾನಿ:
ದೇಶದ ಪ್ರಗತಿಗೆ ಹಾಗೂ ಅದರ ವೈಜ್ಞಾನಿಕ ಅಭಿವೃದ್ದಿಯಲ್ಲಿ ವಿಜ್ಞಾನಿಗಳ ಪಾತ್ರ ಬಹಳ ಮುಖ್ಯ. ಇವರಗೆ ಮಾಸಿಕ ವೇತನ 40,000 ರಿಂದ 1,00,000 ದವರೆಗೆ ನೀಡಲಾಗುತ್ತದೆ. ಹಾಗೂ ಅನುಭವದ ಮೇಲೆ ಮಾಸಿಕ ವೇತನ ಹೆಚ್ಚಿಸಲಾಗುತ್ತದೆ.
ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ
10. ಸರ್ಕಾರಿ ಬ್ಯಾಂಕ್ ಹುದ್ದೆಗಳು:
ಬ್ಯಾಂಕ್ ಹುದ್ದೆಗಳಲ್ಲಿ ನಾನಾತರವದ ಹುದ್ದೆಗಳು ಇರುತ್ತದೆ ಅದರಲ್ಲಿ ಮಾಸಿಕ ವೇತನ 30,000 ರಿಂದ 1,00,000 ದವರೆಗೆ ಸಾಮಾನ್ಯವಾಗಿ ಸಿಗುತ್ತದೆ. ಇನ್ನು ಅನುಭವದ ಮೇಲೆ ಮಾಸಿಕ ವೇತನ ಹೆಚ್ಚಿಸಲಾಗುತ್ತದೆ.
ಮೇಲಿನ ಸರ್ಕಾರಿ ಹುದ್ದೆಗಳಿಗೆ ನೀಡಲಾದ ವೇತನ ಮಾಹಿತಿಯೂ ಆರಂಭಿಕ ವೇತನವಾಗಿದೆ. ಅದೇ ಹುದ್ದೆಗಳಲ್ಲಿ ಮುಂದುವರೆಯುವವರು ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಸಂಬಳ ಪಡೆಯುತ್ತಾ ಮುಂದುವರೆಯುತ್ತಾರೆ. ಅಲ್ಲದೆ, ಆ ಹುದ್ದೆಯಿಂದ ಮತ್ತೊಂದು ಉನ್ನತ ಹುದ್ದೆಗೆ ಭಡ್ತಿ ಸಹ ಪಡೆಯುತ್ತಾರೆ.