Sunday, October 1, 2023
Homeಮಲೆನಾಡುಚಿಕ್ಕಮಗಳೂರುಕಡೂರು/ಬೆಂಗಳೂರು: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್

ಕಡೂರು/ಬೆಂಗಳೂರು: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್

ಕಡೂರು/ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ಸಂಬಂಧಿಸದಂತೆ ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ.

ಇದನ್ನೂ ಓದಿ;  ksrtc ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ; ಪುಟ್ಟ ಕಂದಮ್ಮ ಸೇರಿ ಆರು ಮಂದಿ ಬಲಿ

ಇದನ್ನೂ ಓದಿ; 5 ನಿಮಿಷದಲ್ಲಿ ಕೈ ಸೇರುತ್ತೆ ಡಿಜಿಟಲ್ ವೋಟರ್ ಐಡಿ

ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ.

ಏ.26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದ್ದಾರೆ. ಕಳೆದ ವಿಚಾರಣೆಯಲ್ಲಿ ದತ್ತಾ ಅವರು, ಏ.15ರಂದು ದೂರುದಾರರಿಂದ ಪಡೆದುಕೊಂಡಿರುವ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಅದರಂತೆ ಶನಿವಾರ ಇಂದು ಪಾವತಿ ಮಾಡಬೇಕಾಗಿತ್ತು. ವಿಚಾರಣೆ ವೇಳೆ ದತ್ತ ಅವರ ಪರ ವಕೀಲರು, ನಮ್ಮ ಕಕ್ಷಿದಾರರಿಗೆ ಖುದ್ದು ಹಾರಿಗೆ ವಿನಾಯಿತಿ ನೀಡುವಂತೆ ಕೋರಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದರು.

ಈಗಾಗಲೇ ನ್ಯಾಯಾಲಯ ಹಲವು ಬಾರಿ ವಾರಂಟ್ ನೀಡಿದ್ದರೂ ದತ್ತ ಹಾಜರಾಗಿರಲಿಲ್ಲ. ಅಲ್ಲದೇ, ಕಳೆದ ವಿಚಾರಣೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

ಇದನ್ನೂ ಓದಿ; ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ್ಯು.!

ಪ್ರಕರಣದ ಹಿನ್ನೆಲೆ:

2022ರಲ್ಲಿ ದೂರುದಾರ ಸೋಮಶೇಖರ್ ಸೇರಿದಂತೆ ಇತರರು ದತ್ತಾ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇಂದು ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳಗಳು ಇದೇ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.

ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನುರಹಿತ ವಾರಂಟ್ : 

ಚೆಕ್‌ ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತೀಚೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾ.28 ರಂದು ಕೋರ್ಟ್‌ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್​ಪಿಗೆ ಸೂಚನೆ ನೀಡಿದೆ.

ಇದನ್ನೂ ಓದಿ👇:

ಕೊನೆಗೂ ಮೂಡಿಗೆರೆ ಹಾಗೂ ತರೀಕೆರೆಯ ಟಿಕೆಟ್ ಘೋಷಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕಡೆಯ ಪಟ್ಟಿಯಲ್ಲಿ 43 ಜನರ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕೊನಗೂ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೊದಲ 2 ಎರಡು ಪಟ್ಟಿ ಬಿಡುಗಡೆಗೊಳಿಸಿದ್ದ ಕಾಂಗ್ರೆಸ್ ಟಿಫ್ ಫೈಟ್ ಇರೋ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿತ್ತು. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕ್ ಮಾನೇಜರ್ ವಿರುದ್ಧ ದೂರು

ಇನ್ನೂ ಮೂಡಿಗೆರೆ ಕ್ಷೇತ್ರದಿಂದ ನಯನ ಮೋಟಮ್ಮಗೆ ಟಿಕೆಟ್ ಫೈನಲ್ ಆಗಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಅವರಿಗೆ ಟಿಕೆಟ್ ಫೈನಲ್ ಆಗಿದೆ.

ಮೂಡಿಗೆರೆಯಿಂದ ಕಾಂಗ್ರೆಸ್ ನಲ್ಲಿ 5ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದರು, ನಯನ ಮೋಟಮ್ಮಗೆ ಟಿಕೆಟ್ ನೀಡಬಾರದೆಂದು ಹಲವು ಬಾರಿ ಬಹಿರಂಗ ಸಭೆ ಮಾಡಿದ್ದರು. ನಯನ ಮೋಟಮ್ಮ ಇಲ್ಲಿಯವರಲ್ಲ ಅವರು ಹೊರಗಿನವರು, ಮೋಟಮ್ಮ ಅವರ ಮಗಳು ಎನ್ನುವುದೇ ಚುನಾವಣೆಗೆ ಸ್ಪರ್ಧಿಸಲು ಮಾನದಂಡವಾಗುವುದಿಲ್ಲ ಎಂಬ ಮಾತುಗಳು ಮೂಡಿಗೆರೆಯ ಕಾಂಗ್ರೆಸ್ ಆಕಾಂಕ್ಷಿಗಳಿಂದ ಕೇಳಿಬಂದಿತ್ತು. ತೀವ್ರ ವಿರೋಧದ ನಡುವೆಯೂ ನಯನ ಮೋಟಮ್ಮಗೆ ಕೈ ಟಿಕೆಟ್ ಘೋಷಣೆ ಮಾಡಿದೆ.

ಇನ್ನು ತರೀಕೆರೆಯಲ್ಲಿ ಗೋಪಿಕೃಷ್ಣ ಪ್ರಭಲ ಆಕಾಂಕ್ಷಿಯಾಗಿದ್ದರು. ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಕೂಡ ರೇಸ್ ನಲ್ಲಿದ್ದರು. ಇತ್ತೀಚಿಗಷ್ಟೇ ದೋರನಾಳು ಪರಮೇಶ್ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಕೊಟ್ಟು ಈ ಬಾರಿ ದೋರನಾಳ್ ಪರಮೇಶ್ ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಆದರೆ ನಿರೀಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಶ್ರೀನಿವಾಸ್ ಗೆ ಟಿಕೆಟ್ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್ ಘೋಷಣೆ ಮಾಡಿದ್ದು, ಬಾರೀ ಗೊಂದಲವಿರುವ ಚಿಕ್ಕಮಗಳೂರಿನ ಟಿಕೆಟ್ ಬಾಕಿ ಉಳಿಸಿಕೊಂಡಿದೆ.

Most Popular

Recent Comments