ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾಯನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು
ಇದನ್ನೂ ಓದಿ; ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು
ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಅದರಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾಯನ್ನು ನೇಮಿಸಲಾಗಿದೆ. ಕಟಾರಿಯಾ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಎಂ.ಜಿ.ರಸ್ತೆ ಅಗಲೀಕರಣ, ಕಲ್ಯಾಣ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಶ್ರಮಿಸಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪಠ್ಯಪರಿಷ್ಕರಣೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
- ಶೃಂಗೇರಿ ಜನತೆಗೆ ಸಿಹಿಸುದ್ದಿ ಕೊಟ್ರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ ಜಾರ್ಜ್, ಅಧಿಕಾರಿಗಳಿಗೆ ಸೂಚನೆ; ಏನದು ಸಿಹಿಸುದ್ದಿ
- ಡಿ. ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದರ ಕುರಿತು ಭವಿಷ್ಯ ನುಡಿದ ಅವದೂತ ವಿನಯ್ ಗುರೂಜಿ
ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಈ ಕೆಳಕಂಡಂತೆ ಇದೆ:
1. ಟಿ.ಕೆ. ಅನಿಲ್ ಕುಮಾರ್ – ಬೆಂಗಳೂರು ನಗರ
2. ಸಲ್ಮಾ ಕೆ. ಫಾಹಿಂ – ಬೆಂಗಳೂರು ಗ್ರಾಮಾಂತರ
3. ವಿ. ರಶ್ಮಿ ಮಹೇಶ್ – ರಾಮನಗರ
4. ಅಮಲಾನ್ ಆದಿತ್ಯ ಬಿಸ್ವಾಸ್ – ಚಿತ್ರದುರ್ಗ
5. ಡಾ. ಏಕ್ ರೂಪ್ ಕೌರ್- ಕೋಲಾರ
6. ಅಂಜುಂ ಪರ್ವೇಜ್ – ಬೆಳಗಾವಿ
7. ಡಾ. ಎನ್. ಮಂಜುಳ – ಚಿಕ್ಕಬಳ್ಳಾಪುರ
8. ಎಸ್. ಆರ್. ಉಮಾಶಂಕರ್ – ಶಿವಮೊಗ್ಗ
9. ಗುಂಜನ್ ಕೃಷ್ಣ- ದಾವಣಗೆರೆ
10. ಡಾ.ಎಸ್. ಸೆಲ್ವ ಕುಮಾರ್ – ಮೈಸೂರು
11. ಡಾ.ಪಿ.ಸಿ. ಜಾಫರ್- ಮಂಡ್ಯ
12. ಮಂಜುನಾಥ ಪ್ರಸಾದ್ .ಎನ್ – ಚಾಮರಾಜನಗರ
13. ಡಾ.ಎಂ.ಎನ್. ಅಜಯ್ ನಾಗಭೂಷಣ್ – ಹಾಸನ
14. ಡಾ.ಎನ್.ವಿ. ಪುಸಾದ್ – ಕೊಡಗು
15. ರಾಜೇಂದರ್ ಕುಮಾರ್ ಕಠಾರಿಯಾ – ಚಿಕ್ಕಮಗಳೂರು
16. ಡಾ. ಎಂ.ಟಿ. ರೇಜು – ಉಡುಪಿ
17. ಎಲ್.ಕೆ ಅತೀಕ್ – ದಕ್ಷಿಣ ಕನ್ನಡ
18. ಜಿ.ಸತ್ಯವತಿ – ತುಮಕೂರು
19. ವಿ.ಅನ್ಬುಕುಮಾರ್ – ಧಾರವಾಡ
20. ಸಿ. ಶಿಖಾ – ಗದಗ
21. ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ – ವಿಜಯಪುರ
22. ರಿತೇಶ್? ಕುಮಾರ್ ಸಿಂಗ್ – ಉತ್ತರ ಕನ್ನಡ
23. ಮೊಹಮ್ಮದ್ ಮೊಹಿಸಿನ್ – ಬಾಗಲಕೋಟೆ
24. ಪಂಕಜ್ ಕುಮಾರ್ ಪಾಂಡೆ – ಕಲಬುರಗಿ
25. ಮನೋಜ್ ಜೈನ್ – ಯಾದಗಿರಿ
26. ಡಾ. ಜೆ.ರವಿಶಂಕರ್ – ರಾಯಚೂರು
27. ನವೀನ್ ರಾಜ್ ಸಿಂಗ್ – ಕೊಪ್ಪಳ
28. ಡಾ. ಕೆ.ವಿ. ಲೋಕ್ ಚಂದ್ರ – ಬಳ್ಳಾರಿ
29. ಮುನೀಶ್ ಮೌದ್ಗಿಲ್ – ಬೀದರ್
30. ಡಾ.ವಿಶಾಲ್.ಆರ್ – ಹಾವೇರಿ
31. ಕೆ.ಪಿ.ಮೋಹನ್ ರಾಜ್ – ವಿಜಯನಗರ
ಇದನ್ನೂ ಓದಿ; ಚಿಕ್ಕಮಗಳೂರು: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ
ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು
ಆಗುಂಬೆ/ಹೆಬ್ರಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಶಶಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಹಿಂಬದಿ ಕುಳಿತಿದ್ದ ನಿರ್ಮಿತಾಗೆ ಕೂಡ ತೀವ್ರ ತರಹದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನಾ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (22) ಸ್ಥಳದಲ್ಲೇ ಮೃತಪಟ್ಟಿದ್ದ, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.