Tuesday, November 28, 2023
Homeಇತರೆತಜ್ಞರ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಸಿಎಂ ಬೊಮ್ಮಾಯಿ

ತಜ್ಞರ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ತರಲು ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರಿನಲ್ಲಿoದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ 1ಮತ್ತು 2 ನೇ ಅಲೆಯ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಲಾಗುವುದು. ಅದಕ್ಕಾಗಿ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಾಯಂಕಾಲ ಕೋವಿಡ್ ಸಂಬoಧಿ ಸಭೆಯನ್ನು ತಜ್ಞರ ಜೊತೆ ಮಾಡುತ್ತೇನೆ, ಕೋವಿಡ್3 ನೇ ಅಲೆ ನಿಯಂತ್ರಣಕ್ಕೆ ಜನರ ನಿತ್ಯ ಕೆಲಸಗಳಿಗೆ ತೊಂದರೆಯಾಗದoತೆ ಏನು ಕಠಿಣ ಕ್ರಮವನ್ನು ಕೈಗೊಳ್ಳಬಹುದು ಎಂದು ವೈಜ್ಞಾನಿಕವಾಗಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಾರಿ ದೇಶ 75 ನೇ ಸ್ವಾತಂತ್ರ‍್ಯ ವರ್ಷಾಚರಣೆಯನ್ನು ಆಚರಿಸುತ್ತಿದ್ದು ಕೋವಿಡ್ ನಿರ್ಬಂಧಗಳ ನಡುವೆ ಸರಳವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮವು ನಡೆಯಲಿದೆ. ಹಲವು ವಿಷಯಗಳಲ್ಲಿ ಇಂದು ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

Most Popular

Recent Comments