(Compensation Amount) ರಾಜ್ಯ ಸರ್ಕಾರದಿಂದ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1 ನೇ ಜೂನ್ ರಿಂದ 30 ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದೆ. ಹೌದು, ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.
ಆದೇಶದಲ್ಲಿ ಏನಿದೆ?;
1. ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ಸಿ) ವಿಂಗಡಿಸಿ ಪರಿಹಾರ ಪಾವತಿಸುವುದು.
2. ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11/07/2023 ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು.
ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್
* ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು.
* ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯ ವಿವರಗಳನ್ನು ದಾಖಲಿಸುವುದು.
3. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ 1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಮತ್ತೊಂದು ಅಪ್ಡೇಟ್; ಇದೇ ನೋಡಿ ಕೊನೆಯ ದಿನಾಂಕ
4. ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11/07/2023 ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ಮಾರ್ಗಸೂಚಿಗಳನ್ನಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 6,500/-ಗಳ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 43,500/-ಗಳು ಸೇರಿದಂತೆ ಒಟ್ಟು 50,000/-ಗಳನ್ನು ಪಾವತಿಸುವುದು.
5. ನೈಸರ್ಗಿಕ ತುರ್ತು ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಒದಗಿಸಿರುವ ಅನುದಾನವನ್ನು ನಂತರ ಲೆಕ್ಕ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
6. ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11/07/2023 ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ಮಾರ್ಗಸೂಚಿಗಳನ್ನಯ ಪ್ರವಾಹದಿಂದ ಬಟ್ಟೆ ಕಳೆದುಕೊಂಡರೆ 2,500/- ಹಾಗೂ ಗೃಹೋಪಯೋಗಿ ವಸ್ತುಗಳನ್ನು ಹಾನಿಯಾದರೆ 2,500/- ಗಳ ಪರಿಹಾರ ಪಾವತಿಸಲು ನಿಗದಿಯಾಗಿದ್ದು, ಅದರಂತೆ ರೂ.5,000/- ಗಳನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸುವಂತೆ ಆದೇಶಿಸಿದೆ.

ಇದನ್ನೂ ಓದಿ: ಈ ಜಿಲ್ಲೆಯಾದ್ಯಂತ ಇರುವ ಅಂಗನವಾಡಿಯಲ್ಲಿ ಉದ್ಯೋಗ; 215 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






