Crop -Damage;ಬೆಳೆ ಹಾನಿ ಪರಿಹಾರಕ್ಕೆ 297 ಕೋಟಿ ರೂ. ಬಿಡುಗಡೆ

(Crop -Damage;) ಪ್ರಸಕ್ತ ವರ್ಷದ ಮಳೆ ಹಾನಿಗೆ ಪರಿಹಾರವಾಗಿ ರೈತರಿಗೆ 297 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃ ಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು.


ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ


ಭೂಕುಸಿತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಎರಡೂವರೆ ವರ್ಷಗಳಲ್ಲಿ 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಆದರೆ, ಕೇಂದ್ರ ಸರ್ಕಾರದಿಂದ ಈ ವರ್ಷದ ಎನ್‌ಡಿಆರ್‌ಎಫ್‌ ಪರಿಹಾರ ಈವರೆಗೂ ಸಂದಾಯವಾಗಿಲ್ಲ ಎಂದರು.

3-4 ದಿನದಲ್ಲಿ ಜಮೆ:
ಪ್ರಸಕ್ತ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಬೆಳೆ ಹಾನಿ ಉದ್ದೇಶಕ್ಕೆ ಒಟ್ಟು 297 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.75 ರಷ್ಟು ಮಂದಿಗೆ ಪರಿಹಾರ ತಲುಪಿದೆ. ಬಾಕಿ ಉಳಿದವರಿಗೆ 3-4 ದಿನಗಳಲ್ಲಿ ಜಮೆಯಾಗಲಿದೆ ಎಂದರು.


ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…


ತುರ್ತು ಪರಿಹಾರಕ್ಕಾಗಿ 80.47 ಕೋಟಿ ರೂ. ಅನುದಾನ:
ರಸ್ತೆ, ಸೇತುವೆ, ಶಾಲಾ ಕೊಠಡಿ, ಅಂಗನವಾಡಿ, ಆರೋಗ್ಯ ಕೇಂದ್ರ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ವ್ಯವಸ್ಥೆ ಪುನರ್‌ ಸ್ಥಾಪನೆಯ ತುರ್ತು ಪರಿಹಾರಕ್ಕಾಗಿ 80.47 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಪೈಕಿ 60.16 ಕೋಟಿ ರೂ. ಬಿಡುಗಡೆಯಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳ ಖಾತೆಯಲ್ಲಿ 579 ಕೋಟಿ ರೂ:
ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳ ಖಾತೆಯಲ್ಲಿ ತುರ್ತು ಪರಿಹಾರಕ್ಕಾಗಿ 579 ಕೋಟಿ ರೂ. ಲಭ್ಯವಿದೆ. ಪ್ರವಾಹದಿಂದ ಮನೆಗೆ ನೀರು ನುಗ್ಗಿರುವ ಕಡೆ ನಿತ್ಯದ ಖರ್ಚು ನಿಭಾಯಿಸಲು 5,000 ರೂ. ವಿತರಿಸಲಾಗಿದ್ದು, 5.62 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ


ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕ್ರಮ
ರಾಜ್ಯದ ಆರು ಜಿಲ್ಲೆಗಳ 863 ಗ್ರಾಪಂಗಳನ್ನು ಭೂಕುಸಿತ ಸಂಭವಿಸುವ ಪ್ರದೇಶಗಳು ಎಂದು ಗುರುತಿಸಲಾಗಿದೆ,’’ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು.

ಭೂಕುಸಿತ ಸಂಭಾವ್ಯ ಸ್ಥಳಗಳ ಬಗ್ಗೆ ಕೇಂದ್ರ ಸರ್ಕಾರದ ನ್ಯಾಷನಲ್‌ ಜಿಯಾಲಜಿಕಲ್‌ ಸರ್ವೆ ಸಂಸ್ಥೆಯಿಂದ ವರದಿ ಪಡೆಯಲಾಗಿದೆ. ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಈ ಪಂಚಾಯಿತಿಗಳಿವೆ ಎಂದರು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವ ಯುವಕ – ಯುವತಿಯರಿಗೆ ಸಿಹಿಸುದ್ದಿ; ಈ ತರಬೇತಿಗೆ ಅರ್ಜಿ ಆಹ್ವಾನ


ಈ ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 425 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಿಎಂ ಜೊತೆಗೆ ಚರ್ಚಿಸಿ ಅವರ ಸೂಚನೆಯಂತೆ ಎರಡೂವರೆ ವರ್ಷದಲ್ಲಿ 400 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈಗಾಗಲೇ 152 ಕೋಟಿ ರೂ. ವೆಚ್ಚದಲ್ಲಿ ನಾನಾ ಕಾಮಗಾರಿ ಮಂಜೂರು ಮಾಡಲಾಗಿದೆ ಎಂದು ಸಚಿವ ತಿಳಿಸಿದರು.

Crop -Damage;ಬೆಳೆ ಹಾನಿ ಪರಿಹಾರಕ್ಕೆ 297 ಕೋಟಿ ರೂ. ಬಿಡುಗಡೆ
Crop -Damage;ಬೆಳೆ ಹಾನಿ ಪರಿಹಾರಕ್ಕೆ 297 ಕೋಟಿ ರೂ. ಬಿಡುಗಡೆ

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರ ಗಮನಕ್ಕೆ; ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು