Direct Recruitment: ನೇರ ನೇಮಕಾತಿ ಪುನಾರಂಭಕ್ಕೆ ಗ್ರೀನ್ ಸಿಗ್ನಲ್

(Direct Recruitment:) ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: LIC ಫೈನಾನ್ಸ್​​​​ನಲ್ಲಿ ಜಾಬ್‌ ಆಫರ್‌; 12,000 ಸಂಬಳ


ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾದ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಹೂಸದಾಗಿ ನೇರ ನೇಮಕಾತಿಯನ್ನು ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿರುತ್ತದೆ ಎಂದಿದ್ದಾರೆ.


ನ್ನೂ ಓದಿ: 3ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದು!; ಸಿದ್ದರಾಮಯ್ಯ ಖಡಕ್ ಸೂಚನೆ


(Direct Recruitment:) ಪ್ರಸ್ತುತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ಆಯೋಗವು ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟವು ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಅಂಗಿಕರಿಸಿದ್ದು, ಸರ್ಕಾರದ ಆದೇಶ/ ಸುತ್ತೋಲೆ ಇಲ್ಲಿದೆ ನೋಡಿ

1. ದಿನಾಂಕ 25.08.2025 ರ ಸರ್ಕಾರದ ಆದೇಶ ಸಂಖ್ಯೆ: ಸಕಇ 8 ಎಸ್‌ಎಲ್‌ಪಿ 2024.
2. ದಿನಾಂಕ: 03.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 02 ಸಹಿಮ 2025.
3. ದಿನಾಂಕ:06.09.2025ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 03 ಸೆಹಿಮ 2025
4. ದಿನಾಂಕ: 06.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 249 ಸೆನೆನಿ 2025.
5. ದಿನಾಂಕ 06.09.2025 ರ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 388 ಸೆನನಿ 2024.


ನ್ನೂ ಓದಿ: ಜುಲೈ, ಆಗಸ್ಟ್, ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!; ಮಾಹಿತಿ ಕೊಟ್ಟ ಸಚಿವೆ ಹೆಬ್ಬಾಳ್ಕರ್


ಮೇಲ್ಕಂಡ ಆದೇಶ/ ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಎಲ್ಲಾ ಇಲಾಖೆ/ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದ್ದಾರೆ.

Direct Recruitment: ನೇರ ನೇಮಕಾತಿ ಪುನಾರಂಭಕ್ಕೆ ಗ್ರೀನ್ ಸಿಗ್ನಲ್
Direct Recruitment: ನೇರ ನೇಮಕಾತಿ ಪುನಾರಂಭಕ್ಕೆ ಗ್ರೀನ್ ಸಿಗ್ನಲ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Direct Recruitment:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ