Friday, April 26, 2024
Homeಮಲೆನಾಡುವರದಕ್ಷಿಣೆ ಕಿರುಕುಳ, ಮಹಿಳೆಯ ಕೊಲೆ

ವರದಕ್ಷಿಣೆ ಕಿರುಕುಳ, ಮಹಿಳೆಯ ಕೊಲೆ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜೂಜು ಆಟದಲ್ಲಿ ಹಣ ಕಳೆದುಕೊಂಡು ಮನೆಯಲ್ಲಿದ್ದ ಮಡದಿ ಒಡವೆಯನ್ನು ಕೂಡ ಮಾರಿ ನಂತರ ತವರು ಮನೆಯಿಂದ ಹಣ ತರುವಂತೆ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಗುಡ್ಡೆಗೌಡನಹಳ್ಳಿ, ಕೊಪ್ಪಲುನಲ್ಲಿ ನಡೆದಿದೆ. ಹೆಚ್.ಎಂ. ರಂಜಿತ (23 ವರ್ಷ) ಕೊಲೆಯಾದ ಮಹಿಳೆ.

ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ಸಿ.ಟಿ.ರವಿ

ಅರಕಲಗೂಡು ತಾಲೂಕು ಹೆಂಟಗೆರೆ ಕೊಪ್ಪಲು ಗ್ರಾಮದ ಮಂಜೇಗೌಡ ಎಂಬುವರ ಮಗಳಾದ ಅರ್ಪಿತಾ ರಂಜಿತಾ ಅವರನ್ನು 2022 ಮೇ. 9 ರಂದು ವಿದ್ಯಾನಗರ ಬಳಿ ಇರುವ ಗುಟ್ಟೇಗೌಡನಹಳ್ಳಿ ಗ್ರಾಮದ ಸ್ವಾಮೀಗೌಡ ಎಂಬುವರ ಮಗ ಯು.ಟಿ. ಪವನ್ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ 250 ಗ್ರಾಂ. ಚಿನ್ನದ ವಡವೆ ಹಾಗೂ 2 ಲಕ್ಷ ರೂ. ನಗದು ಹಣ ನೀಡಿದ್ದರು. ಇದಾದ ನಂತರ 2-3 ತಿಂಗಳು ರಂಜಿತಾಳನ್ನು ಗಂಡನ ಮನೆಯವರು ಚೆನ್ನಾಗಿ ನೋಡಿಕೊಂಡಿದ್ದರು. ನಂತರ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡಲು ಪ್ರಾರಂಭಿಸಿದರು ಎನ್ನಲಾಗಿದೆ.

ಪವನನಿಗೆ ಇಸ್ಪೀಟ್ ಮತ್ತು ಐಪಿಎಲ್ ಕ್ರಿಕೆಟ್ ಜೂಜಾಡುವ ಹವ್ಯಾಸವಿದ್ದು, ರಂಜಿತಾಳಿಗೆ ಆಗಾಗ್ಗೆ ವರದಕ್ಷಿಣೆ ತರುವಂತೆ ಹೊಡೆದು, ಹೊರಗೆ ಕಳಿಸುತ್ತಿದ್ದ ಎನ್ನಲಾಗಿದೆ. 2 ತಿಂಗಳ ಹಿಂದೆ ಅಂದರೆ ಕಳೆದ ಮಾ.10 ಅರ್ಪಿತಾ ತವರು ಮನೆಗೆ ಬಂದು, ಗಂಡನ ಮನೆಗೆ ಹೋಗುವುದಿಲ್ಲ, ನನ್ನನ್ನು ಹೊಡೆದು ಸಾಯಿಸುತ್ತಾರೆಂದು ಹೇಳಿದ್ದಾಳೆ. ನಂತರ ಸಂಬಂಧಿಕರೆಲ್ಲರೂ ಸೇರಿ ರಾಜಿ ಪಂಚಾಯ್ತಿ ಮಾಡಿ ಸಮಧಾನ ಮಾಡಲಾಗಿತ್ತು. ಆದರೂ ಮೇ 2 ರಂದು ಮಧ್ಯಾಹ್ನ ರಂಜಿತಳನ್ನು ಗಂಡ ಪವನ್, ಅತ್ತೆ ಮಣಿ, ಮಾವ ತಿಮ್ಮೇಗೌಡ, ಸ್ವಾಮೀಗೌಡ ಎಂಬವರು ಮನ ಬಂದಂತೆ ಹಲ್ಲೆ ಮಾಡಿ ನಂತರದಲ್ಲಿ ಆಸ್ಪತ್ರೆಗೆ ಸೇರಿಸಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮಂಗಳವಾರ ಸಂಜೆ 6.45 ರ ಸುಮಾರಿಗೆ ಗಂಭೀರ ಗಾಯಗೊಂಡಿದ್ದ ರಂಜಿತಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ವಿಷಯ ತಿಳಿದ ಮೃತರ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಈಕೆಯ ಸಾವಿಗೆ ಕಾರಣರಾದ ಗಂಡ ಪವನ್, ಅತ್ತೆ ಮಣಿ, ಮಾವ ತಿಮ್ಮೇಗೌಡ ಸ್ವಾಮೀಗೌಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಂಬಂಧಿಕರು ಪೆನೆನ್ ಮೊಹಲಾ ಪೊಲೀಸರಿಗೆ ಠಾಣೆಗೆ ದೂರು ದಾಖಲಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಬೇಕೇ?; ಇಲ್ಲಿದೆ‌ ಸರಳ ವಿಧಾನ, ಹೀಗೆ ಪರಿಶೀಲಿಸಿ..

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ವೋಟರ್ ಐಡಿ ಪ್ರಮುಖ ದಾಖಲೆಯಾಗಿದೆ ಏಕೆಂದರೆ ಚುನಾವಣೆಯಲ್ಲಿ ಮತ ಚಲಾಯಿಸುವುದು ಅತ್ಯಗತ್ಯ. ಎಲ್ಲಾ ಅರ್ಹ ನಾಗರಿಕರಿಗೆ ಮಾನ್ಯವಾದ ಮತದಾರರ ಗುರುತಿನ ಚೀಟಿಯ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಈ ಗೊಂದಲ ನಿವಾರಿಸುವ ವಿಧಾನ ಇಲ್ಲಿ ವಿವರಿಸುತ್ತೇವೆ.

ಇದನ್ನೂ ಓದಿ; ʻಕೈ ʼ-jds ಕಾರ್ಯಕರ್ತರ ನಡುವೆ ಘರ್ಷಣೆ

ಒಂದು ನಿರ್ದಿಷ್ಟ ಕ್ಷೇತ್ರದ ಮತದಾರರ ಹೆಸರು ಮತ್ತು ಇತರ ವಿವರಗಳನ್ನು ಒಳಗೊಂಡಿರುವ ಸಮಗ್ರ ಮಾಹಿತಿಯನ್ನು ಮತದಾರರ ಪಟ್ಟಿ ಎಂದು ಕರೆಯಲಾಗುತ್ತದೆ. ಭಾರತದ ಚುನಾವಣಾ ಆಯೋಗವು ನಿಯಮಿತವಾಗಿ ನವೀಕರಿಸಿದ ಮತದಾರರ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತದೆ. ಆನ್ ಲೈನ್ ಮೂಲಕ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ಪತ್ತೆ ಹಚ್ಚಬಹುದು.

ಮತದಾರರ ಗುರುತಿನ ಚೀಟಿ ಎಂದರೇನು?
ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಕಾರ್ಡ್ ಭಾರತದ ಚುನಾವಣಾ ಆಯೋಗವು(election commission) ತನ್ನ ಮತವನ್ನು ಚಲಾಯಿಸಲು ಅರ್ಹರಾಗಿರುವ ಭಾರತೀಯ ನಾಗರಿಕರಿಗೆ ನೀಡಿದ ಫೋಟೋ ಗುರುತಿನ ಪುರಾವೆಯಾಗಿದೆ. ಮತದಾರರ ನೋಂದಣಿ ಕಾರ್ಡ್ ಎಂದೂ ಕರೆಯಲ್ಪಡುವ ಮತದಾರರ ಗುರುತಿನ ಚೀಟಿಯು ಒಬ್ಬರ ಪೌರತ್ವದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ, ಒಬ್ಬ ವ್ಯಕ್ತಿಯನ್ನು ಭಾರತದಲ್ಲಿ ಮತ ಚಲಾಯಿಸಲು ಅರ್ಹರನ್ನಾಗಿ ಮಾಡುತ್ತದೆ.

ಮತದಾರರ ಗುರುತಿನ ಚೀಟಿ ಏಕೆ ಅತ್ಯಗತ್ಯ?
ಇದು ರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗುರುತಿನ ರೂಪವಾಗಿ ಕಾರ್ಯನಿರ್ವಹಿಸುತ್ತದೆ.
ಇದು ಒಬ್ಬರ ಮತದಾರರ ನೋಂದಣಿಯ ದೃಢೀಕರಣವಾಗಿ ಕಾರ್ಯನಿರ್ವಹಿಸುತ್ತದೆ.
ಚುನಾವಣೆಗಳಲ್ಲಿ ಬಹು ಮತದಾನವನ್ನು ಗುರುತಿಸುವಿಕೆಯ ಮೂಲಕ
ಕಡಿಮೆ-ಸಾಕ್ಷರತೆಯ ಜನಸಂಖ್ಯೆಯ ಚುನಾವಣಾ ಅಗತ್ಯಗಳನ್ನು ಪೂರೈಸಲು ಇದನ್ನು ವಿನ್ಯಾಸಗೊಳಿಸಲಾಗಿದೆ.
ಸ್ಥಿರ ವಿಳಾಸವನ್ನು ಹೊಂದಿರದ ಮತದಾರರಿಗೆ ಇದು ಪ್ರಮುಖ ಗುರುತಿನ ಪುರಾವೆಯಾಗಿದೆ. ತಮ್ಮ ಉದ್ಯೋಗದ ಕಾರಣದಿಂದಾಗಿ ಆಗಾಗ್ಗೆ ಚಲಿಸುವ ವ್ಯಕ್ತಿಗಳಿಗೆ ಇದು ಸೂಕ್ತವಾಗಿದೆ. ಇದು ಫೋಟೋ ಗುರುತಿನ ಪುರಾವೆಯಾಗಿರುವುದರಿಂದ, ಇದು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುತ್ತದೆ ಮತ್ತು ಚುನಾವಣಾ ವಂಚನೆಯ ಪ್ರಕರಣಗಳನ್ನು ಪರಿಶೀಲಿಸುತ್ತದೆ.

ಮೊದಲಿಗೆ https://electoralsearch.in ಸೈಟ್ ಭೇಟಿ ನೀಡಿ ಸರ್ಚ್ ಬೈ ಡೀಟೇಲ್ಸ್ ಅನ್ನು ಆಯ್ಕೆ ಮಾಡಿಕೊಳ್ಳಿ. ಬಳಿಕ ನಿಮ್ಮ ಹೆಸರು, ವಯಸ್ಸು, ರಾಜ್ಯ, ಜಿಲ್ಲೆ ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಮಾಹಿತಿ ನೀಡಲಾಗುತ್ತದೆ.

ಇನ್ನೊಂದು ವಿಧಾನ:
ನೀವು ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದರ ಸಂಖ್ಯೆ ಬಳಸುವುದರ ಮೂಲಕ ಪರಿಶೀಲಿಸಬಹುದು.

https://electoralsearch.in ಸೈಟ್ ಗೆ ಭೇಟಿ ನೀಡಿ, ಸರ್ಚ್ ಬೈ ಎಪಿಕ್ ಆಯ್ಕೆ ಮಾಡಿಕೊಳ್ಳಿ. ನಿಮ್ಮ ಗುರುತಿನ ಚೀಟಿಯ ಸಂಖ್ಯೆ, ರಾಜ್ಯ, ಕ್ಯಾಪ್ಚಾ ಕೋಡ್ ನ್ನು ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಜಿಲ್ಲೆ, ವಿಧಾನಸಭಾ ಕ್ಷೇತ್ರ ವಿವರ ಮೂಡುತ್ತದೆ.

ಗಮನಿಸಬೇಕಾದ ಸಂಗತಿ ಎಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಚುನಾವಣೆಗೆ ಕನಿಷ್ಠ 10 ದಿನಗಳ ಮೊದಲು ಪರಿಶೀಲನೆ ಮಾಡಬೇಕು. ಇದರಿಂದ ಯಾವುದೇ ರೀತಿಯ ದೋಷವನ್ನು ಆದಷ್ಟು ಬೇಗ ಸರಿಪಡಿಸಬಹುದು.

Most Popular

Recent Comments