(FARMERS-:) ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಸಿಗುವ ಸಾಲದ ಮಿತಿಯನ್ನು 3 ಲಕ್ಷ ರೂನಿಂದ 5 ಲಕ್ಷ ರೂಗೆ ಏರಿಸಿದ್ದಾರೆ. ಬಜೆಟ್ನಲ್ಲಿ ಕೃಷಿಕರಿಗೆ ಸಿಕ್ಕ ಕೊಡುಗೆಗಳೇನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ನೀಡಲಾಗುವ ಕಿರು ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಮೂರು ಲಕ್ಷ ರೂ ಇದ್ದ ಸಾಲದ ಮಿತಿಯನ್ನು ಐದು ಲಕ್ಷ ರೂಗೆ ಏರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್ನಲ್ಲಿ ಈ ಘೋಷಣೆ ಮಾಡಿದ್ದಾರೆ. ಏಳು ಕೋಟಿಗೂ ಹೆಚ್ಚು ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರಿಗೆ ಬಹಳ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುತ್ತದೆ.
ಬೇಳೆ ಕಾಳುಗಳಲ್ಲಿ ಸ್ವಾವಲಂಬನೆಗೆ 6 ವರ್ಷದ ಮಿಷನ್
ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಬೇಳೆಕಾಳು ಇತ್ಯಾದಿಯಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೇಳೆಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸುವ ಆರು ವರ್ಷದ ಮಿಷನ್ ಅನ್ನು ಅವರು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್ಎಎಫ್ಇಇ, ಎನ್ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ.
ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ
(FARMERS-:) ಪಿಎಂ ಧನ್ ಧಾನ್ಯ ಕೃಷಿ ಯೋಜನೆ:
ಬಜೆಟ್ ನಲ್ಲಿ ಪಿಎಂ ಧನ್ ಧಾನ್ಯ್ ಕೃಷಿ ಯೋಜನೆಯನ್ನು ಪ್ರಕಟಿಸಲಾಗಿದೆ. ಕಡಿಮೆ ಉತ್ಪನ್ನ ಇರುವ 100 ಜಿಲ್ಲೆಗಳನ್ನು ಗುರಿಯಾಗಿಸಿ, ರಾಜ್ಯಗಳ ಸಹಭಾಗಿತ್ವದಲ್ಲಿ ಈ ಯೋಜನೆ ರೂಪಿಸಲಾಗಿದೆ. ಬಹುಬೆಳೆ, ಸುಸ್ಥಿರ ಕೃಷಿ ವಿಧಾನ, ನೀರಾವರಿ ಸೌಲಭ್ಯ, ಸಾಲ ಸೌಲಭ್ಯ ಇತ್ಯಾದಿ ಮೂಲಕ ಕೃಷಿ ಉತ್ಪನ್ನವನ್ನು ಹೆಚ್ಚಿಸುವುದು ಈ ಯೋಜನೆ ಗುರಿ. 1.7 ಕೋಟಿ ರೈತರ ಜೀವನಕ್ಕೆ ಇದರಿಂದ ಅನುಕೂಲವಾಗಲಿದೆ.
ಗ್ರಾಮೀಣ ಆರ್ಥಿಕತೆಗೆ ಇಂಡಿಯಾ ಪೋಸ್ಟ್ ಶಕ್ತಿ
ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಅನುಕೂಲವಾಗಲಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





