Monday, December 11, 2023
Homeಮಲೆನಾಡುಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ; ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!

ಇದನ್ನೂ ಓದಿ; ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ

ಶಿವಮೊಗ್ಗ ಕೇಂದ್ರ ಕಾರಾಗೃಹದ ಆದಿತ್ಯ ರಾವ್ ಮೇ 31ರಂದು ಜೈಲಿನ ವಿಡಿಯೋ ಕಾನ್ಫರೆನ್ಸ್ ಕೊಠಡಿ ಬಳಿ ಬಂದಿದ್ದ. ತನ್ನ ವಿಚಾರಣೆ ಇದೆಯೇ ಎಂದು ಪ್ರಶ್ನಿಸಿದ್ದ. ಅಲ್ಲಿದ್ದ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸಿ ಇಲ್ಲ ಎಂದು ತಿಳಿಸಿದ್ದರು. ಸ್ವಲ್ಪ ದೂರ ಹೋಗಿದ್ದ ಆದಿತ್ಯ ಮತ್ತೆ ಹಿಂತಿರುಗಿ ಬಂದು ವಿ.ಸಿ.ಕೊಠಡಿಯಲ್ಲಿದ್ದ ಟಿವಿಯೊಂದಕ್ಕೆ ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಅಷ್ಟರಲ್ಲಿ ಕೊಠಡಿಯಲ್ಲಿದ್ದ ಸಿಬ್ಬಂದಿ ಆದಿತ್ಯನನ್ನು ಹಿಡಿದಿದ್ದರು. ಆದರೆ ಅವರಿಂದ ತಪ್ಪಿಸಿಕೊಂಡು ಮತ್ತೊಂದು ಟಿವಿಯನ್ನು ಒಡೆದು ಹಾಕಿದ್ದಾನೆ. ಕೂಡಲೆ ಸಿಬ್ಬಂದಿ ಆದಿತ್ಯನನ್ನು ಹಿಡಿದು ಜೈಲರ್ ವಶಕ್ಕೆ ಒಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜೈಲಿನಲಿದ್ದ ಎರಡು ಟಿವಿಗಳನ್ನು ಒಡೆದು ಹಾಕಿರುವ ಆದಿತ್ಯ ವಿರುದ್ಧ ಸಾರ್ವಜನಿಕ ಸ್ವತ್ತು ನಾಶಪಡಿಸಿದ ಆರೋಪದಲ್ಲಿ ದೂರು ನೀಡಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ನಕ್ಸಲರಿಗಿಂತ ಸಿ.ಟಿ ರವಿಯೇ ಡೇಂಜರ್

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

Most Popular

Recent Comments