Sunday, June 4, 2023
Homeಆಧ್ಯಾತ್ಮಗಣೇಶೋತ್ಸವ ಆಚರಣೆಗೆ ಷರತ್ತು ಹೊರಡಿಸಿದ ಸರ್ಕಾರ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಗಣೇಶೋತ್ಸವ ಆಚರಣೆಗೆ ಷರತ್ತು ಹೊರಡಿಸಿದ ಸರ್ಕಾರ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಪ್ರತ್ಯೇಕ ಷರತ್ತುಗಳನ್ನು ವಿಧಿಸಿದ್ದು, ಪಾಲಿಕೆ ನಿಯಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಬಿಎಂಪಿ ಕಚೇರಿಗೆ ಮುತ್ತಿಗೆಯನ್ನು ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿರುವ ವಿ.ಹೆಚ್.ಪಿ., ಭಜರಂಗದಳ ಕಾರ್ಯಕರ್ತರು ಗಣೇಶ ಹಬ್ಬದ ಆಚರಣೆಗೆ ವಿಧಿಸಿರುವಂತಹ ಷರತ್ತುಗಳನ್ನು ಹಿಂಪಡೆಯುವoತೆ ಒತ್ತಾಯಿಸಿದ್ದಾರೆ.

ವಾರ್ಡಿಗೆ ಒಂದರoತೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ಮೂರು ಅಡಿಗಿಂತ ಎತ್ತರದ ಗಣೇಶ ಮೂರ್ತಿಗೆ ನಿರ್ಬಂಧ, ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಸೇರಿದಂತೆ ಬಿಬಿಎಂಪಿ ವಿಧಿಸಿರುವ ಇಂತಹ ಷರತ್ತುಗಳನ್ನು ವಾಪಸ್ ಪಡೆದುಕೊಳ್ಳಬೇಕು. ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಿoದ ಆಚರಿಸಲು ಅನುಮತಿಯನ್ನು ನೀಡಬೇಕು. ಒಂದು ವೇಳೆ ಅನುಮತಿಯನ್ನು ನೀಡದಿದ್ದರೆ ನಿಯಮ, ಷರತ್ತುಗಳನ್ನು ಉಲ್ಲಂಘಿಸಿ ಗಣೇಶೋತ್ಸವ ಆಚರಣೆ ಮಾಡುವುದಾಗಿ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದಾರೆ. ಸರ್ಕಾರದ ಆದೇಶದ ಪ್ರಕಾರ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಆದರೆ ಕೋವಿಡ್ ನಂತಹ ಸಾಂಕ್ರಾಮಿಕ ರೋಗದ ಭೀತಿಯ ಸಂದರ್ಭದಲ್ಲಿ ಮುಂಜಾಗೃತಾ ಕ್ರಮವಾಗಿ ಸರ್ಕಾರ ನಿಯಮಗಳನ್ನು ರೂಪಿಸಿರುವಾಗ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Most Popular

Recent Comments