Saturday, June 10, 2023
Homeಮಲೆನಾಡುಸರಗಳ್ಳರ ಕೈಚಳಕ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ!

ಸರಗಳ್ಳರ ಕೈಚಳಕ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ!

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೈಕ್‌ನಲ್ಲಿ ಹಿಂಬಾಲಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ರವೀಂದ್ರನಗರದ ಬಾಹುಬಲಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಿವೃತ್ತ ಶಿಕ್ಷಕಿ ರೇಣುಕಾ ಚಿನ್ನದ ಸರ ಕಳೆದುಕೊಂಡ ಮಹಿಳೆ.

ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ಕೆಆರ್ ಪುರ 10 ನೇ ಕ್ರಾಸ್‌ನಲ್ಲಿ ವಾಸವಿರುವ ರೇಣುಕಾ. ನಿನ್ನೆ ಸಂಜೆ ರಾಘವೇಂದ್ರಮಠಕ್ಕೆ ಭಜನೆಗೆ ಹೋಗುವುದಕ್ಕಾಗಿ ಎರಡು ಚಿನ್ನದ ಸರ ಹಾಕಿದ್ದ ರೇಣುಕಾ. ಸರಗಳ್ಳತನ ಮಾಡಲು ರಸ್ತೆಯಲ್ಲಿ ಹೊಂಚು ಹಾಕಿದ್ದ ಕಳ್ಳರು. ರೇಣುಕಾಳನ್ನು ಧರಿಸಿದ್ದ ಚಿನ್ನದ ಸರ ನೋಡಿ ಹಿಂಬಾಲಿಸಿದ್ದರು.

ಇದನ್ನೂ ಓದಿ; ಕಳ್ಳತನವಾಗಿದ್ದ 30 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರ

ಮೊದಲಿಗೆ ಒಬ್ಬ ರೇಣುಕಾ ಹಿಂಬಾಲಿಸಿಕೊಂಡು ಬಂದಿದ್ದಾನೆ. ರಾಘವೇಂದ್ರ ಮಠದ ಕಡೆಗೆ ತಿರುಗುತ್ತಿದ್ದಂತೆ ರಸ್ತೆ ತಿರುವಿನಲ್ಲಿ ರೇಣುಕಾ ಕುತ್ತಿಗೆಗೆ ಕೈಹಾಕಿದ ಕಳ್ಳ. ಕುತ್ತಿಗೆಯಲ್ಲಿದ್ದ ಎರಡು ಚಿನ್ನದ ಸರ ಕಿತ್ತುಕೊಂಡಿದ್ದಾನೆ. ಇನ್ನೊರ್ವ ಕಳ್ಳ ಬೈಕ್‌ನಲ್ಲಿ ಬಂದಿದ್ದಾನೆ. ಕೂಡಲೇ ಬೈಕ್ ಹತ್ತಿ ಎಸ್ಕೇಪ್ ಆಗಿರುವ ಕಳ್ಳರು. ಏಕಾಏಕಿ ಕುತ್ತಿಗೆಗೆ ಕೈ ಹಾಕಿ ಕದ್ದೊಯ್ಯುವ ವೇಳೆ ಮಹಿಳೆ ಕಿರುಚಾಡುತ್ತಾ ಕಳ್ಳನ ಬೆನ್ನಟ್ಟಿದ್ದಾಲೆ. ಆದರೆ ಕೈಗೆ ಸಿಗದೆ ಕೂಡಲೇ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


60 ಗ್ರಾಂ ಚಿನ್ನದ ಎರಡು ಸರಗಳನ್ನು ಕದ್ದು ಎಸ್ಕೇಪ್ ಆಗಿರುವ ಖತರ್ನಾಕ್ ಸರಗಳ್ಳರು. ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರಗಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಜಿ ಶಾಸಕ ಸಿಟಿ ರವಿಗೆ ಮತ್ತೊಂದು ಶಾಕ್ ನೀಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ; ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್

ಈ ಬಾರಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿ ಪರಿವರ್ತನೆಯಾಗಿತ್ತು. ಸಿಟಿ ರವಿ ಆಪ್ತ ಬಣ್ಣದಲ್ಲಿ ಗುರುತಿಸಿಕೊಂಡಿದ್ದ ಹೆಚ್ ಡಿ ತಮ್ಮಯ್ಯನೇ ಎದುರಾಳಿಯಾಗಿ ಸಿ.ಟಿ ರವಿಗೆ ಸೋಲಿನ ರುಚಿಯನ್ನು ತೋರಿಸಿದ್ದರು. ಇದೀಗ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ.

ಎಚ್ ಡಿ ತಮ್ಮಯ್ಯ ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ನಗರಸಭೆ ಆಡಳಿತವನ್ನು ಬಿಜೆಪಿಯಿಂದ ತಪ್ಪಿಸಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ಲೇಡಿ ಗ್ಯಾಂಗ್

ಮೂಲಗಳ ಮಾಹಿತಿ ಪ್ರಕಾರ ವಿಧಾನಸಭಾ ಅಧಿವೇಶನ ಮುಗಿದ ಬಳಿಕ ನಗರಸಭಾ ಸದಸ್ಯರ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಎಚ್ ಡಿ ತಮ್ಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಮೂವರು ನಗರಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸುವ ಮೂಲಕ ನಗರಸಭೆಯಲ್ಲಿ ಬಿಜೆಪಿ ಬಲವನ್ನು ತಗ್ಗಿಸುವ ಕಾರ್ಯತಂತ್ರವನ್ನು ಎಣಿದಿದ್ದಾರೆ.

ಇದನ್ನೂ ಓದಿ; ಬೆಂಗಳೂರಿಂದ ಚಿಕ್ಕಮಗಳೂರಿಗೆ 6 ಅತ್ಯಾಧುನಿಕ ‘ಎಲೆಕ್ಟ್ರಿಕ್ ಬಸ್’

ಬಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಮೂವರು ಸದಸ್ಯರು ರಾಜೀನಾಮೆ ಕೊಟ್ಟರೆ ನಗರಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಕುಸಿತಗೊಳ್ಳಲಿದೆ ಆಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ಯೋಜನೆಯನ್ನು ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.

Most Popular

Recent Comments