ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಅಪರೂಪದ ಪ್ರಾಕೃತಿಕ ವಿದ್ಯಮಾನ ಸಂಭವಿಸಿದೆ. ಕಡಲ ತೀರದ ಉದ್ದಕ್ಕೂ ರಾಶಿ ರಾಶಿ ನಾರು ಬೇರುಗಳು ಬಂದು ಬಿದ್ದಿವೆ. ರಾತ್ರಿ ಬೆಳಗಾಗುವುದರೊಳಗಾಗಿ ಕಡಲು ಈ ಕಸದ ರಾಶಿಯನ್ನು ತಂದು ಗುಡ್ಡೆ ಹಾಕಿದೆ. ಹಾಗಂತ ಇದನ್ನು ಕಲ್ಮಶ ಅಥವಾ ಕಸ ಎನ್ನಲು ಸಾಧ್ಯವಿಲ್ಲ. ಸ್ಥಳೀಯ ಆಡು ಭಾಷೆಯಲ್ಲಿ ಈ ವಿಶಿಷ್ಟ ಸಸ್ಯ ಜನ್ಯ ನಾರುಗಳನ್ನು ಗಂಗೆಯ ಕೂದಲು ಎಂದು ಕರೆಯುತ್ತಾರೆ. ಸಮುದ್ರ ತೀರದ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಗಂಗೆಯ ಕೂದಲು ರಾಶಿ ಬಿದ್ದಿದೆ. ಕಡಲ ತೀರದ ಮರಳಿನ ರಾಶಿ ಕಾಣದಷ್ಟು ದಟ್ಟವಾಗಿ ಹಬ್ಬಿಕೊಂಡಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಕಾರ್ಮಿಕ ಮಹಿಳೆಯ ಹತ್ಯೆ ಮಾಡಿ ಸುಟ್ಟುಹಾಕಿದ ಹಂತಕರು, ಸ್ಥಳಕ್ಕೆ sp ಉಮಾ ಪ್ರಶಾಂತ್ ಭೇಟಿ
ಯಾವುದೇ ಚಂಡಮಾರುತ ಬಂದಾಗ ಕಡಲು ತನ್ನ ಒಡಲಿನಲ್ಲಿರುವ ಎಲ್ಲಾ ವಸ್ತುಗಳನ್ನು ತಂದು ದಡಕ್ಕೆ ರಾಶಿ ಹಾಕುತ್ತದೆ. ದಶಕಗಳ ಬಳಿಕ ಗಂಗೆಯ ಕೂದಲು ಕಡಲತೀರದಲ್ಲಿ ರಾಶಿ ಬಿದ್ದಿದೆ. ನೋಡಲು ಕಲ್ಮಶದಂತೆ ಕಂಡರೂ ಇದಕ್ಕೆ ಯಾವುದೇ ದುರ್ವಾಸನೆ ಇಲ್ಲ. ಹುಲ್ಲು ರಾಶಿಯ ರೀತಿಯಲ್ಲಿ ಕಾಣುತ್ತದೆ.
ಇದನ್ನೂ ಓದಿ; ಕಡೂರು; ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಟ್ರಯಲ್ ರನ್ ಯಶಸ್ವಿ
ಹಾಗಂತ ಈ ಗಂಗೆಯ ಕೂದಲನ್ನು ಯಾರು ತೆರವು ಮಾಡುವುದಿಲ್ಲ. ಕಡಲಿನ ಅಲೆಗಳು ತೀರ ಪ್ರದೇಶಕ್ಕೆ ಬಂದಾಗ, ಅವು ಈ ರಾಶಿಯನ್ನು ಹೊತ್ತು ಮತ್ತೆ ಕಡಲಿನ ಒಡಲಿಗೆ ಹಾಕುತ್ತದೆ. ಮೀನಿಗೆ ಇದು ಅತ್ಯುತ್ತಮ ಆಹಾರ. ಹಾಗಾಗಿ ಯಾರು ಕೂಡ ಇದರ ಗೋಜಿಗೆ ಹೋಗುವುದಿಲ್ಲ. ಸುಮಾರು ಹತ್ತು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ಗಂಗೆಯ ಕೂದಲು ಕಡಲತೀರಕ್ಕೆ ರಾಶಿ ಬಿದ್ದಿತ್ತು. ಈ ಬಾರಿ ಈ ರಾಶಿಯಲ್ಲಿ ಜನರು ಹಾಕಿರುವ ಕಸ, ಕಡ್ಡಿ ,ಪ್ಲಾಸ್ಟಿಕ್ ಗಳು ಕೂಡ ಸೇರಿವೆ.
ಇತ್ತೀನ ಜನಪ್ರಿಯ ಸುದ್ದಿಗಳು
- ಇಂದಿನ ಅಡಿಕೆ ರೇಟ್ ಎಲ್ಲೆಲ್ಲಿ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ-20.06.2023
- ಚಿಕ್ಕಮಗಳೂರು: ರೈತರಿಂದ ರಾಗಿ ಖರೀದಿಸಿ 51 ಕೋಟಿ ಸಾಲ ಉಳಿಸಿಕೊಂಡ ಸರ್ಕಾರ
- ಚಿಕ್ಕಮಗಳೂರು; ಸರ್ಕಾರಿ ಕಾಲೇಜಿಗೆ 50 ಲಕ್ಷ ರೂ. ಮೌಲ್ಯದ ಪೀಠೋಪಕರಣ
ರಾಜ್ಯದ 31 ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿ ನೇಮಕಗೊಳಿಸಿ ಆದೇಶ ಹೊರಡಿಸಿದ ಸರ್ಕಾರ; ಎಲ್ಲಿಗೆ ಯಾರು?
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾಯನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು
ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಅದರಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾಯನ್ನು ನೇಮಿಸಲಾಗಿದೆ. ಕಟಾರಿಯಾ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಎಂ.ಜಿ.ರಸ್ತೆ ಅಗಲೀಕರಣ, ಕಲ್ಯಾಣ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಶ್ರಮಿಸಿದ್ದರು.
ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಈ ಕೆಳಕಂಡಂತೆ ಇದೆ:
1. ಟಿ.ಕೆ. ಅನಿಲ್ ಕುಮಾರ್ – ಬೆಂಗಳೂರು ನಗರ
2. ಸಲ್ಮಾ ಕೆ. ಫಾಹಿಂ – ಬೆಂಗಳೂರು ಗ್ರಾಮಾಂತರ
3. ವಿ. ರಶ್ಮಿ ಮಹೇಶ್ – ರಾಮನಗರ
4. ಅಮಲಾನ್ ಆದಿತ್ಯ ಬಿಸ್ವಾಸ್ – ಚಿತ್ರದುರ್ಗ
5. ಡಾ. ಏಕ್ ರೂಪ್ ಕೌರ್- ಕೋಲಾರ
6. ಅಂಜುಂ ಪರ್ವೇಜ್ – ಬೆಳಗಾವಿ
7. ಡಾ. ಎನ್. ಮಂಜುಳ – ಚಿಕ್ಕಬಳ್ಳಾಪುರ
8. ಎಸ್. ಆರ್. ಉಮಾಶಂಕರ್ – ಶಿವಮೊಗ್ಗ
9. ಗುಂಜನ್ ಕೃಷ್ಣ- ದಾವಣಗೆರೆ
10. ಡಾ.ಎಸ್. ಸೆಲ್ವ ಕುಮಾರ್ – ಮೈಸೂರು
11. ಡಾ.ಪಿ.ಸಿ. ಜಾಫರ್- ಮಂಡ್ಯ
12. ಮಂಜುನಾಥ ಪ್ರಸಾದ್ .ಎನ್ – ಚಾಮರಾಜನಗರ
13. ಡಾ.ಎಂ.ಎನ್. ಅಜಯ್ ನಾಗಭೂಷಣ್ – ಹಾಸನ
14. ಡಾ.ಎನ್.ವಿ. ಪುಸಾದ್ – ಕೊಡಗು
15. ರಾಜೇಂದರ್ ಕುಮಾರ್ ಕಠಾರಿಯಾ – ಚಿಕ್ಕಮಗಳೂರು
16. ಡಾ. ಎಂ.ಟಿ. ರೇಜು – ಉಡುಪಿ
17. ಎಲ್.ಕೆ ಅತೀಕ್ – ದಕ್ಷಿಣ ಕನ್ನಡ
18. ಜಿ.ಸತ್ಯವತಿ – ತುಮಕೂರು
19. ವಿ.ಅನ್ಬುಕುಮಾರ್ – ಧಾರವಾಡ
20. ಸಿ. ಶಿಖಾ – ಗದಗ
21. ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ – ವಿಜಯಪುರ
22. ರಿತೇಶ್? ಕುಮಾರ್ ಸಿಂಗ್ – ಉತ್ತರ ಕನ್ನಡ
23. ಮೊಹಮ್ಮದ್ ಮೊಹಿಸಿನ್ – ಬಾಗಲಕೋಟೆ
24. ಪಂಕಜ್ ಕುಮಾರ್ ಪಾಂಡೆ – ಕಲಬುರಗಿ
25. ಮನೋಜ್ ಜೈನ್ – ಯಾದಗಿರಿ
26. ಡಾ. ಜೆ.ರವಿಶಂಕರ್ – ರಾಯಚೂರು
27. ನವೀನ್ ರಾಜ್ ಸಿಂಗ್ – ಕೊಪ್ಪಳ
28. ಡಾ. ಕೆ.ವಿ. ಲೋಕ್ ಚಂದ್ರ – ಬಳ್ಳಾರಿ
29. ಮುನೀಶ್ ಮೌದ್ಗಿಲ್ – ಬೀದರ್
30. ಡಾ.ವಿಶಾಲ್.ಆರ್ – ಹಾವೇರಿ
31. ಕೆ.ಪಿ.ಮೋಹನ್ ರಾಜ್ – ವಿಜಯನಗರ