Sunday, December 3, 2023
Homeಮಲೆನಾಡುಚಿಕ್ಕಮಗಳೂರುಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಚಾಕು ಇರಿತ ಪ್ರಕರಣ, ವಿಘ್ನೇಶ್ ಸ್ಥಿತಿ ಗಂಭೀರ

ಸರ್ಕಾರಿ ಬಸ್ಸುಗಳ ನಡೆವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. 2019 ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯದೇ ಇರದ ಕಾರಣ ಈ ಅಪಘಾತ ಸಂಭವಿಸಿದ್ದು, ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಲಾಗಿದೆ. ಹಾಗೂ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣ ಎನ್ನಲಾಗಿದೆ. ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಅಡಿ ದೂರದಲ್ಲಿ ಇರುವವರು ಕಾಣದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಈ ಅಪಘಾತದಿಂದ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಘಾಟಿಯಲ್ಲಿ ಸಿಲುಕಿ ವಾಹನ ಸವಾರರ ಪರದಾಡುವಂತೆ ಆಗಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

ಕುವೆಂಪು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಆಗ್ರಹ

ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ; ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ

ಕುವೆಂಪು ವಿವಿಯು ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು. ಈ ವಿವಿಯ ಹಲವಾರು ವಿದ್ಯಾರ್ಥಿಗಳು ಇಂದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಆದರೆ ಪ್ರಸ್ತುತ ಸಂದರ್ಭದಲ್ಲಿ, ವಿವಿಯ ಹಲವಾರು ಧೋರಣೆಗಳಿಂದ ವಿದ್ಯಾರ್ಥಿಗಳು ನಿರಂತರವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ಸಾಗಿ ಪ್ರತಿಭಟನೆಯನ್ನು ನಡೆಸಿದರು.

ಸೆಮಿಸ್ಟರ್ ಪರೀಕ್ಷೆ ಶುಲ್ಕ ದುಬಾರಿ;
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಲು ಆಗ್ರಹಿಸಿದರು. ಪರೀಕ್ಷೆ ಶುಲ್ಕ ಕಡಿಮೆ ಮಾಡಲು ಆಗ್ರಹಿಸಿ ವಿವಿಧ ಬಾರಿ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದರೂ ಕುವೆಂಪು ವಿವಿಯು ಪರೀಕ್ಷಾ ಶುಲ್ಕ ಕಡಿಮೆ ಮಾಡದೆ nep ಮೊದಲ ಬ್ಯಾಚ್ ನ ಎರಡನೇ ಸೆಮ್ ನಾ b.sc ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ. ರಾಜ್ಯದ ಬಹುತೇಕ ಎಲ್ಲಾ ವಿವಿಗಳ, nep ಬ್ಯಾಚ್ ನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವು ಮಾರ್ಕ್ಸ್ ಕಾರ್ಡ್ ಶುಲ್ಕ ಸೇರಿದಂತೆ ಬಹುತೇಕ 1000 ರೂ.ಗಳ ಆಸುಪಾಸಿನಲ್ಲಿ ಇದೆ ಆದರೆ, ಕುವೆಂಪು ವಿವಿ ಭಾರಿ ಪ್ರಮಾಣದಲ್ಲಿ ಶುಲ್ಕ ಹೆಚ್ಚಳ ಮಾಡಿದ್ದು ಆದಷ್ಟು ಬೇಗ ಎಲ್ಲಾ ಕೋರ್ಸುಗಳ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ; ಮೂಡಿಗೆರೆ: ಶೆಡ್ ಗೆ ನುಗ್ಗಿ ಕಾರು ಪುಡಿ ಮಾಡಿರುವ ಕಾಡಾನೆ

ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸ್ಪಷ್ಟ ನೀತಿ ಇಲ್ಲದ ಕಾರಣ ವಿದ್ಯಾರ್ಥಿಗಳ ಪರದಾಟ:
ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇದನ್ನೂ ಓದಿ; ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

Most Popular

Recent Comments