Wednesday, November 29, 2023
Homeರಾಜ್ಯHigh Court: ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ | ತೆರಿಗೆ ವಿಧಿಸಲು ಗ್ರಾಪಂಗೆ ಅಧಿಕಾರವಿಲ್ಲ

High Court: ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ | ತೆರಿಗೆ ವಿಧಿಸಲು ಗ್ರಾಪಂಗೆ ಅಧಿಕಾರವಿಲ್ಲ

High Court: ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂಬುದಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿವಾಸಿ ಕೆ. ನರಸಿಂಹಮೂರ್ತಿ ಎಂಬುವರು ತನ್ನ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯ್ತಿ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯ ಪೀಠವು ಈ ಆದೇಶ ನೀಡಿದೆ.

ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

ಜೊತೆಗೆ, ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದಕ್ಕಾಗಿ ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇ. ಭಾಸ್ಕರ್ ರಾವ್ ಪ್ರಕರಣದಲ್ಲಿ ಹೈಕೋರ್ಟ್ (High Court:) ತಿಳಿಸಿದೆ. ಕೋಳಿ ಸಾಕಾಣಿಕೆ ಕೇಂದ್ರಕ್ಕಾಗಿ ನಿರ್ಮಾಣ ಮಾಡುವ ಕಟ್ಟಡವನ್ನು ಕನಾರ್ಟಕ ಗ್ರಾಮ ಸ್ವರಾಜ್ ಕಾಯ್ದೆ-4ರ (ಎ)(2) ಅಡಿಯಲ್ಲಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ. ಕೋಳಿ ಸಾಕಾಣಿಕೆ ಕೇಂದ್ರವಿರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರೆಯಲಿದ್ದು, ಅದನ್ನು ವಾಣಿಜ್ಯ ಭೂಮಿಯನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಅರ್ಜಿದಾರರಿಂದ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರೂ.ಗಳನ್ನು ಹಿಂದಿರುಗಿಸಬೇಕು ಎಂದೂ ನಿರ್ದೇಶನ ನೀಡಿದೆ. ಇಷ್ಟೇ ಅಲ್ಲ, ಗ್ರಾಮ ಪಂಚಾಯ್ತಿ ಜಾರಿ ಮಾಡಿದ್ದ ನೊಟೀಸ್‌ ಅನ್ನು ರದ್ದುಪಡಿಸಿ ಆದೇಶಿಸಿದೆ.

High Court:
High Court:

ಇದನ್ನೂ ಓದಿ; ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 23-09-2023

ಪ್ರಕರಣವೇನು?;
ಅರ್ಜಿದಾರರ ಕೆ.ನರಸಿಂಹಮೂರ್ತಿ ಅವರು, ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಸಂದ್ರ ಎಂಬ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನನ್ನು ಹೊಂದಿದ್ದು, ಈ ಭಾಗದಲ್ಲಿ ಕೋಳಿ ಸಾಕಾಣಿಕೆ ಮಾಡುವ ಸಲುವಾಗಿ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ವಿದ್ಯುತ್ ಸಂಪರ್ಕ ಪಡೆಯುವುದಕ್ಕಾಗಿ ನಿರಾಕ್ಷೇಪಣಾ ಪತ್ರಕ್ಕಾಗಿ ಗ್ರಾಮ ಪಂಚಾಯ್ತಿಗೆ ಮನವಿ ಸಲ್ಲಿಸಿದ್ದರು.

ಈ ಮನವಿ ಪರಿಗಣಿಸಿದ್ದ ಪಂಚಾಯ್ತಿ ಅಧಿಕಾರಿಗಳು, ಕೋಳಿ ಸಾಕಾಣಿಕೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ಅದನ್ನ ನಿರಾಕ್ಷೇಪಣಾ ಪತ್ರ ವಿತರಣೆ ಮಾಡುವುದಕ್ಕಾಗಿ 1.3 ಲಕ್ಷ ರೂ.ಗಳನ್ನು ಪಾವತಿ ಮಾಡಲೇಬೇಕು ಎಂದು ಸೂಚನೆ ನೀಡಿ ನೊಟೀಸ್ ನೀಡಿದ್ದರು. ಇದರಿಂದ ಅರ್ಜಿದಾರ ೫೯,೫೫೧ ಪಾವತಿ ಮಾಡಿದ್ದರು.

ನಂತರ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆಗೆ ಕೃಷಿ ಚಟುವಟಿಕೆಗಳಾಗಿದ್ದು, ಇದಕ್ಕಾಗಿ ನಿರಾಕ್ಷೇಪಣಾ ಪತ್ರ ಪಡೆಯುವುದು ಹಾಗೂ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ. ಈ ರೀತಿ ತೆರಿಗೆ ವಿಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ (High Court:) ಎಂಬ ಅಂಶ ಮನಗಂಡು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು, ಕೋಳಿ ಸಾಕಾಣಿಕೆ ಮಾಡುವುದು ವಾಣಿಜ್ಯ ಚಟುವಟಿಕೆಯಾಗಿದ್ದು, ಕೋಳಿ ಸಾಕಾಣಿಕೆ ಕೇಂದ್ರದ ಕಟ್ಟಡಕ್ಕೆ ವಾಣಿಜ್ಯ ತೆರಿಗೆ ವಿಧಿಸಬಹುದಾಗಿದೆ ಎಂದು ವಾದ ಮಂಡಿಸಿದ್ದರು. ಈ ವಾದವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗ್ರಾಮ ಪಂಚಾಯ್ತಿಯ ನೊಟೀಸ್ ರದ್ದು ಪಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments