Sunday, September 24, 2023
Homeಮಲೆನಾಡುಚಿಕ್ಕಮಗಳೂರುನಾನು ಕೊಟ್ಟ ಮಾತಿಗೆ ಎಂದಿಗೂ ತಪ್ಪುವುದಿಲ್ಲ, ತಪ್ಪಿದಲ್ಲಿ ಒಂದು ನಿಮಿಷವೂ ಅಧಿಕಾರದ ಕುರ್ಚಿಯಲ್ಲಿ ಕೂರುವುದಿಲ್ಲ: ಮಾಜಿ...

ನಾನು ಕೊಟ್ಟ ಮಾತಿಗೆ ಎಂದಿಗೂ ತಪ್ಪುವುದಿಲ್ಲ, ತಪ್ಪಿದಲ್ಲಿ ಒಂದು ನಿಮಿಷವೂ ಅಧಿಕಾರದ ಕುರ್ಚಿಯಲ್ಲಿ ಕೂರುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ನಾನು ಕೊಟ್ಟ ಮಾತಿಗೆ ಎಂದಿಗೂ ತಪ್ಪುವುದಿಲ್ಲ. ಕೊಟ್ಟ ಭರವಸೆ ಈಡೇರಿಸದೆ ಇದ್ದರೆ ನಾನು ಅಧಿಕಾರದ ಕುರ್ಚಿಯಲ್ಲಿ ಒಂದು ನಿಮಿಷವೂ ಕೂರುವುದಿಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ; ಜಿಲ್ಲೆಯಲ್ಲಿ ಯೋಗಿ ಆದಿತ್ಯನಾಥ್’ ಹವಾ

ಕುವೆಂಪು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, 5 ವರ್ಷ ನಾನು ಮುಖ್ಯಮಂತ್ರಿಯಾಗಿದ್ದಾಗ ಏನು ಕೆಲಸ ಮಾಡಿದ್ದೆ? ಬಿಜೆಪಿ ಅಧಿಕಾರದ 5 ವರ್ಷದಲ್ಲಿ ಏನು ಕೆಲಸ ಮಾಡಿದೆ ಎಂದು ಜನರಿಗೆ ತಿಳಿಸಲಿ, ಕಾಂಗ್ರೆಸ್ 165 ಭರವಸೆಗಳನ್ನು ಕೊಟ್ಟಿದ್ದು ಎಲ್ಲವನ್ನೂ ಈಡೇರಿಸಿದ್ದೇವೆ. ಬಿಜೆಪಿ 600 ಭರವಸೆಗಳನ್ನು ಕೊಟ್ಟಿತ್ತು. ಆದರೆ ಈಡೇರಿಸಿದ್ದು 55 ಮಾತ್ರ ಎಂದರು.

ಇದನ್ನೂ ಓದಿ; ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಸ್ಥಳೀಯವಾಗಿ ಹೊನ್ನೇಕುಡಿಗೆ ಸೇತುವೆ ಮಾಡಿಕೊಡಿ ಎಂದು ಮಾಜಿ ಎಂಎಲ್ಸಿ ಎಂ.ಶ್ರೀನಿವಾಸ್ ಬೇಡಿಕೆಯಂತೆ 36 ಕೋಟಿ ರೂ. ವೆಚ್ಚದ ಸೇತುವೆ ಕಾಮಗಾರಿಗೆ ನಾನು ಸಿಎಂ ಆದ ಅವಧಿಯಲ್ಲೇ ಮಂಜೂರಾತಿ ನೀಡಿದ್ದು ಈಗ ಕಾಮಗಾರಿ ನಡೆಯುತ್ತಿದೆ. ಕಡಹಿನಬೈಲು ಏತ ನೀರಾವರಿ ಯೋಜನೆ ನೀಡಿದ್ದೇನೆ. ಇವೆಲ್ಲವನ್ನೂ ಡಿ.ಎನ್ ಜೀವರಾಜ್, ಬಿಜೆಪಿ ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ ಎಂದು ಮಾತಿಗೆ ಪ್ರಶ್ನಿಸಿದರು.

ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಮುರೊಳ್ಳಿ ಮಾತನಾಡಿದ ಅವರು, ಜೆಡಿಎಸ್‌ಗೆ ಹಾಕುವ ಒಂದೊಂದು ಮತವೂ ಬಿಜೆಪಿಗೆ ಲಾಭವಾಗುವ ಸಾಧ್ಯತೆಗಳಿವೆ. ಆದ್ದರಿಂದ ಕಾಂಗ್ರೆಸ್‌ಗೆ ಮತ ಹಾಕಿ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಪುಣ್ಯಭೂಮಿ ನಮ್ಮದು. ಆದರೆ ಬಿಜೆಪಿ ಯೋಗಿ ಆದಿತ್ಯನಾಥ್ ಅವರಂಥವರನ್ನು ಕೊಪ್ಪಕ್ಕೆ ಕರೆತಂದು ಕುವೆಂಪು ಅವರಿಗೆ ಅಪಮಾನ ಮಾಡಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಕೆಪಿಸಿಸಿ ಸದಸ್ಯರಾದ ಇಫಿಕಾರ್ ಆದಿಲ್, ಪಿ.ಆರ್.ಸದಾಶಿವ, ಮಾಜಿ ಎಂಎಲ್ಸಿ ಎಂ.ಶ್ರೀನಿವಾಸ್, ಸಚ್ಚಿನ್ ಮೀಗಾ, ಗೇರ್‌ಬೈಲ್ ನಟರಾಜ್, ರವೀಂದ್ರ ಕುಕ್ಕುಡಿಗೆ, ಎಚ್.ಎಂ.ಸತೀಶ್, ರಮೇಶ್ ಭಟ್,ಪ್ರಶಾಂತ್ ಶೆಟ್ಟಿ, ಬಿ.ಎಸ್.ಸುಬ್ರಹ್ಮಣ್ಯ, ಚನ್ನಕೇಶವ, ಜುಬೇದಾ, ಅನ್ನಪೂರ್ಣ ಇತರರಿದ್ದರು.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಬೇಕೇ; ಇಲ್ಲಿದೆ‌ ಸರಳ ವಿಧಾನ, ಹೀಗೆ ಪರಿಶೀಲಿಸಿ.

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ವೋಟರ್ ಐಡಿ ಪ್ರಮುಖ ದಾಖಲೆಯಾಗಿದೆ ಏಕೆಂದರೆ ಚುನಾವಣೆಯಲ್ಲಿ ಮತ ಚಲಾಯಿಸುವುದು ಅತ್ಯಗತ್ಯ. ಎಲ್ಲಾ ಅರ್ಹ ನಾಗರಿಕರಿಗೆ ಮಾನ್ಯವಾದ ಮತದಾರರ ಗುರುತಿನ ಚೀಟಿಯ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಈ ಗೊಂದಲ ನಿವಾರಿಸುವ ವಿಧಾನ ಇಲ್ಲಿ ವಿವರಿಸುತ್ತೇವೆ.

ಇದನ್ನೂ ಓದಿ; ʻಕೈ ʼ-jds ಕಾರ್ಯಕರ್ತರ ನಡುವೆ ಘರ್ಷಣೆ

ಒಂದು ನಿರ್ದಿಷ್ಟ ಕ್ಷೇತ್ರದ ಮತದಾರರ ಹೆಸರು ಮತ್ತು ಇತರ ವಿವರಗಳನ್ನು ಒಳಗೊಂಡಿರುವ ಸಮಗ್ರ ಮಾಹಿತಿಯನ್ನು ಮತದಾರರ ಪಟ್ಟಿ ಎಂದು ಕರೆಯಲಾಗುತ್ತದೆ. ಭಾರತದ ಚುನಾವಣಾ ಆಯೋಗವು ನಿಯಮಿತವಾಗಿ ನವೀಕರಿಸಿದ ಮತದಾರರ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತದೆ. ಆನ್ ಲೈನ್ ಮೂಲಕ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ಪತ್ತೆ ಹಚ್ಚಬಹುದು.

ಮತದಾರರ ಗುರುತಿನ ಚೀಟಿ ಎಂದರೇನು?
ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಕಾರ್ಡ್ ಭಾರತದ ಚುನಾವಣಾ ಆಯೋಗವು(election commission) ತನ್ನ ಮತವನ್ನು ಚಲಾಯಿಸಲು ಅರ್ಹರಾಗಿರುವ ಭಾರತೀಯ ನಾಗರಿಕರಿಗೆ ನೀಡಿದ ಫೋಟೋ ಗುರುತಿನ ಪುರಾವೆಯಾಗಿದೆ. ಮತದಾರರ ನೋಂದಣಿ ಕಾರ್ಡ್ ಎಂದೂ ಕರೆಯಲ್ಪಡುವ ಮತದಾರರ ಗುರುತಿನ ಚೀಟಿಯು ಒಬ್ಬರ ಪೌರತ್ವದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ, ಒಬ್ಬ ವ್ಯಕ್ತಿಯನ್ನು ಭಾರತದಲ್ಲಿ ಮತ ಚಲಾಯಿಸಲು ಅರ್ಹರನ್ನಾಗಿ ಮಾಡುತ್ತದೆ.

ಇದನ್ನೂ ಓದಿ; ವರದಕ್ಷಿಣೆ ಕಿರುಕುಳ, ಮಹಿಳೆಯ ಕೊಲೆ

ಮತದಾರರ ಗುರುತಿನ ಚೀಟಿ ಏಕೆ ಅತ್ಯಗತ್ಯ?
ಇದು ರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗುರುತಿನ ರೂಪವಾಗಿ ಕಾರ್ಯನಿರ್ವಹಿಸುತ್ತದೆ.
ಇದು ಒಬ್ಬರ ಮತದಾರರ ನೋಂದಣಿಯ ದೃಢೀಕರಣವಾಗಿ ಕಾರ್ಯನಿರ್ವಹಿಸುತ್ತದೆ.
ಚುನಾವಣೆಗಳಲ್ಲಿ ಬಹು ಮತದಾನವನ್ನು ಗುರುತಿಸುವಿಕೆಯ ಮೂಲಕ
ಕಡಿಮೆ-ಸಾಕ್ಷರತೆಯ ಜನಸಂಖ್ಯೆಯ ಚುನಾವಣಾ ಅಗತ್ಯಗಳನ್ನು ಪೂರೈಸಲು ಇದನ್ನು ವಿನ್ಯಾಸಗೊಳಿಸಲಾಗಿದೆ.
ಸ್ಥಿರ ವಿಳಾಸವನ್ನು ಹೊಂದಿರದ ಮತದಾರರಿಗೆ ಇದು ಪ್ರಮುಖ ಗುರುತಿನ ಪುರಾವೆಯಾಗಿದೆ. ತಮ್ಮ ಉದ್ಯೋಗದ ಕಾರಣದಿಂದಾಗಿ ಆಗಾಗ್ಗೆ ಚಲಿಸುವ ವ್ಯಕ್ತಿಗಳಿಗೆ ಇದು ಸೂಕ್ತವಾಗಿದೆ. ಇದು ಫೋಟೋ ಗುರುತಿನ ಪುರಾವೆಯಾಗಿರುವುದರಿಂದ, ಇದು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುತ್ತದೆ ಮತ್ತು ಚುನಾವಣಾ ವಂಚನೆಯ ಪ್ರಕರಣಗಳನ್ನು ಪರಿಶೀಲಿಸುತ್ತದೆ.

ಇದನ್ನೂ ಓದಿ; ರಸ್ತೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಿವಾದ

ಮೊದಲಿಗೆ https://electoralsearch.in ಸೈಟ್ ಭೇಟಿ ನೀಡಿ ಸರ್ಚ್ ಬೈ ಡೀಟೇಲ್ಸ್ ಅನ್ನು ಆಯ್ಕೆ ಮಾಡಿಕೊಳ್ಳಿ. ಬಳಿಕ ನಿಮ್ಮ ಹೆಸರು, ವಯಸ್ಸು, ರಾಜ್ಯ, ಜಿಲ್ಲೆ ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಮಾಹಿತಿ ನೀಡಲಾಗುತ್ತದೆ.

ಇನ್ನೊಂದು ವಿಧಾನ:
ನೀವು ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದರ ಸಂಖ್ಯೆ ಬಳಸುವುದರ ಮೂಲಕ ಪರಿಶೀಲಿಸಬಹುದು.

https://electoralsearch.in ಸೈಟ್ ಗೆ ಭೇಟಿ ನೀಡಿ, ಸರ್ಚ್ ಬೈ ಎಪಿಕ್ ಆಯ್ಕೆ ಮಾಡಿಕೊಳ್ಳಿ. ನಿಮ್ಮ ಗುರುತಿನ ಚೀಟಿಯ ಸಂಖ್ಯೆ, ರಾಜ್ಯ, ಕ್ಯಾಪ್ಚಾ ಕೋಡ್ ನ್ನು ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಜಿಲ್ಲೆ, ವಿಧಾನಸಭಾ ಕ್ಷೇತ್ರ ವಿವರ ಮೂಡುತ್ತದೆ.

ಇದನ್ನೂ ಓದಿ; ಜಿಲ್ಲೆಯ ಹಲವು ಕಡೆ ಬಜರಂಗದಳದ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

ಗಮನಿಸಬೇಕಾದ ಸಂಗತಿ ಎಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಚುನಾವಣೆಗೆ ಕನಿಷ್ಠ 10 ದಿನಗಳ ಮೊದಲು ಪರಿಶೀಲನೆ ಮಾಡಬೇಕು. ಇದರಿಂದ ಯಾವುದೇ ರೀತಿಯ ದೋಷವನ್ನು ಆದಷ್ಟು ಬೇಗ ಸರಿಪಡಿಸಬಹುದು.

Most Popular

Recent Comments