ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಾರ್ಖಂಡ್ ರಾಜ್ಯಪಾಲರ ಪತ್ನಿ ಹಾಗೂ ಕುಟುಂಬದವರು ಮಲೆನಾಡ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಜಾರ್ಖಂಡ್ ರಾಜ್ಯಪಾಲರ ಕುಟುಂಬ ಸಮೇತರಾಗಿ ಕಳಸದ ಕಳಸೇಶ್ವರ, ಹೊರನಾಡಿನ ಅನ್ನಪೂರ್ಣೇಶ್ವರಿ ಹಾಗೂ ಶೃಂಗೇರಿ ಶಾರದಾಂಬೆ ದರ್ಶನವನ್ನು ಪಡೆದುಕೊಂಡಿದ್ದಾರೆ. ಜಾರ್ಖಂಡ್ ರಾಜ್ಯಪಾಲರ ಪತ್ನಿ ಸುಮತಿ ಹಾಗೂ 14 ಜನ ಕುಟುಂಬ ಸದಸ್ಯರಿಂದ ಶೃಂಗೇರಿ ಹಾಗೂ ಹೊರನಾಡು ಭೇಟಿ ನೀಡಿದ ಹಿನ್ನಲೆ ಜಿಲ್ಲಾ ಪೊಲೀಸರಿಂದ ಭದ್ರತೆಯನ್ನು ಕಲ್ಪಿಸಲಾಗಿತ್ತು.
Read Next News: ಮೂಡಿಗೆರೆಯಲ್ಲಿ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಕಾರು
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಜಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದಲ್ಲಿ ನಡೆದಿದೆ.
ಮಲೆನಾಡಲ್ಲಿ ಮುಂದುವರಿದ ಮಳೆ-ಗಾಳಿ ಅಬ್ಬರದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಜಾರಿದೆ. ಧರ್ಮಸ್ಥಳದಿಂದ ತುಮಕೂರು ಜಿಲ್ಲೆ ಶಿರಾಗೆ ಹೋಗುತ್ತಿದ್ದ ಕಾರಿನಲ್ಲಿ ಐದು ಮಂದಿ ಜನರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಣಕಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.