ಬೀರೂರು; (ನ್ಯೂಸ್ ಮಲ್ನಾಡ್ ವರದಿ) ಎಚ್.ಡಿ.ತಮ್ಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವ ತೊರೆಯುವುದಾಗಿ ಬೀರೂರು ಕೆ.ಎಂ.ವಿನಾಯಕ ತಿಳಿಸಿದರು.
ಇದನ್ನೂ ಓದಿ; ದಂಪತಿಗಳ ಬಲಿ ಪಡೆದ ಜವರಾಯ, ಭೀಕರ ಅಪಘಾತದಲ್ಲಿ ಮಕ್ಕಳ ಸ್ಥಿತಿಯೂ ಗಂಭೀರ
ಇದನ್ನೂ ಓದಿ; ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಅಭ್ಯರ್ಥಿ ಆಯ್ಕೆ ಕುರಿತು ಸಾಮಾಜಿಕ ನ್ಯಾಯದಡಿ ತರೀಕೆರೆಯಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಿದರೆ. ಕಡೂರಿನಲ್ಲಿ ಕುರುಬರಿಗೆ, ಕಡೂರಿನಲ್ಲಿ ಲಿಂಗಾಯತರಿಗೆ ನೀಡಿದರೆ ತರೀಕೆರೆಯಲ್ಲಿ ಕುರುಬರಿಗೆ ಎಂಬ ನೀತಿಯನ್ನು ಬದಿಗೊತ್ತಿ ಎರಡೂ ಕ್ಷೇತ್ರಗಳಲ್ಲಿ ಕುರುಬ ಸಮುದಾಯಕ್ಕೆ ಮಣೆ ಹಾಕಲಾಗಿದೆ ಎಂದರು.
ಏಳು ಮಂದಿಯನ್ನು ಕಡೆಗಣಿಸಿ ಲಿಂಗಾಯತ ಎಂಬ ಕಾರಣಕ್ಕೆ ತಮ್ಮಯ್ಯ ಅವರಿಗೆ ಟಿಕೆಟ್ ಘೋಷಿಸಿರುವುದು ಪಕ್ಷ ನಿಷ್ಠರಿಗೆ ಅಸಮಾಧಾನ ಉಂಟು ಮಾಡಿರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪೆಟ್ರೋಲ್ ಬಂಕ್ ಗಳಲ್ಲಿ ಈ 6 ಸೇವೆಗಳನ್ನು ಉಚಿತವಾಗಿ ನೀಡುವುದು ಕಡ್ಡಾಯ
- ಪೋಸ್ಟ್ ಆಫೀಸ್ನಲ್ಲಿರುವ ಈ 5 ಯೋಜನೆಗಳ ಬಗ್ಗೆ ನಿಮಗೆ ಗೊತ್ತೇ?
- ಕಂತೆ ಕಂತೆ ಹಣ ಬ್ಯಾಗಿಗೆ ತುಂಬುವ ವಿಡಿಯೋ ವೈರಲ್
ಚುನಾವಣೆಗೆ ನಿಲ್ಲಲು ಹರಸಾಹಸ ಪಟ್ಟರು ವರಿಷ್ಠರು ಟಿಕೆಟ್ ನೀಡಿರಲಿಲ್ಲ:
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಗಿಂತಲೂ ಅಧಿಕ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಾ ಬಂದಿದೇನೆ. ಕಳೆದ ಬಾರಿ ನಾನು ವಿಧಾನಸಭಾ ಚುನಾವಣೆಗೆ ನಿಲ್ಲಲು ಹರಸಾಹಸ ಪಟ್ಟರು ವರಿಷ್ಠರು ಟಿಕೆಟ್ ನೀಡಿರಲಿಲ್ಲ.
ಇನ್ನೆರಡು ದಿನಗಳ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ:
ಪಕ್ಷ ನನ್ನ ಕಾರ್ಯ ನೋಡಿ ಈ ಬಾರಿಯಾದರೂ ಟಿಕೆಟ್ ನೀಡುವ ನಿರೀಕ್ಷೆ ಇತ್ತು ಆದರೆ ಅದು ಹುಸಿಯಾಯಿತು. ಈಗಾಗಲೇ ಕೆಲವು ಪಕ್ಷದ ನಾಯಕರು ಭೇಟಿ ಮಾಡಿ ಪಕ್ಷ ಸೇರುವಂತೆ ಮನವಿ ಮಾಡಿದ್ದಾರೆ. ನಾನು ಒಪ್ಪಿಲ್ಲ. ನನ್ನ ಅಭಿಮಾನಿಗಳು ಮತ್ತು ಕಾರ್ಯಕರ್ತರ ಸಭೆ ಕರೆದು ಇನ್ನೆರಡು ದಿನಗಳ ಬಳಿಕ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ
ಶೃಂಗೇರಿ ಕ್ಷೇತ್ರದಲ್ಲಿ ತಂದೆಯ ಪರ ಪ್ರಚಾರಕ್ಕಿಳಿದ ಅಭ್ಯರ್ಥಿಗಳ ಮಕ್ಕಳು
ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಟಿ ಡಿ ರಾಜೇಗೌಡರವರ ಮೇಲಿರುವ ಅಭಿಮಾನ ಹಾಗು ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಶಾಸಕ ಟಿಡಿ ರಾಜೇಗೌಡರು ಪ್ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಶೃಂಗೇರಿ ಕ್ಷೇತ್ರಾದ್ಯಂತ ಯುವ ಸಮೂಹವು ನಮ್ಮ ಜನಪರ ಕಾಂಗ್ರೆಸ್ ನತ್ತ ಬರುತ್ತಿದ್ದು ಇದರಿಂದ ಹತಾಶೆಗೆ ಒಳಗಾದ ಬಿಜೆಪಿಯ ಜೀವರಾಜ್ ಬೆಂಬಲಿಗರು ಕೆಲವೆಡೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ರಾಜ್ ಕುಮಾರ್ ಹೆಗ್ಡೆ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ.
ಕ್ಷೇತ್ರದಲ್ಲಿ ಸಾವಿರಾರು ಜನ ಯುವಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಕೆಲ ದಿನಗಳ ಹಿಂದೆ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವಕರ ಗುಂಪು ಕಾಂಗ್ರೆಸ್ ಸೇರಿದ್ದು, ಯುವಕ ಸಂಪತ್ ಎಂಬುವರಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ಜಟಿಕೇಶ್ವರ ಹಾಗು ಗ್ರಾಮ ಪಂಚಾಯಿತಿ ಉದ್ಯೋಗಿ ದಿನೇಶ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಂಪತ್ ತಂದೆ ತಾಯಿಗೆ ಕೆಟ್ಟಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಇದರ ಬಗ್ಗೆ ಸಂಪತ್ ಆಡಿಯೋ ಇರುವ ಸಿಡಿಯೊಂದಿಗೆ ಶೃಂಗೇರಿ ಠಾಣೆಗೆ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ. ಪೊಲೀಸ್ ಇಲಾಖೆ ಕೂಡಲೇ ಅವರನ್ನು ಕರೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗು ದೂರು ಕೊಟ್ಟಿರುವ ಸಂಪತ್ ಮನೆಗೆ ರಕ್ಷಣೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ; ಶೃಂಗೇರಿ ಕ್ಷೇತ್ರದಲ್ಲಿ ತಂದೆಯ ಪರ ಪ್ರಚಾರಕ್ಕಿಳಿದ ಅಭ್ಯರ್ಥಿಗಳ ಮಕ್ಕಳು
ಮಾಜಿ ಶಾಸಕ ಜೇವರಾಜ್ ರವರ ಬೆಂಬಲಿಗರು ಮಲೆನಾಡಿನಲ್ಲಿ ಈ ರೀತಿ ಕೊಲೆ ಬೆದರಿಕೆಗಳನ್ನು ಹಾಕಿ ಶೃಂಗೇರಿಯಲ್ಲಿ ಭಯದ ವಾತಾವರಣ ಸೃಷ್ಟಿಮಾಡಲು ಹೊರಟಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದಶಿ ಪ್ರದೀಪ್ ಕಲ್ಲೊಳ್ಳಿ ಮಾತನಾಡಿ ದಿನೇಶ್ ಎಂಬ ಸರ್ಕಾರೀ ಉದ್ಯೋಗಿ ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದು ಕಾನೂನು ಬಾಹಿರ. ಚುನಾವಣಾ ಅಧಿಕಾರಿಗಳು ಈ ಕೂಡಲೇ ಅವರನ್ನು ಅಮಾನತ್ತು ಮಾಡಬೇಕು ಹಾಗು ಇದೇ ಸರಕಾರಿ ಉದ್ಯೋಗಿ ಕೊಲೆ ಬೆದರಿಕೆ ಹಾಕಿರುವುದರಿಂದ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮದ್ಯ ಪ್ರವೇಶಿಸಿ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ರಂಗೇರಿದ ಚುನಾವಣಾ ಕಾವು
ಕಾಂಗ್ರಸ್ ಯುವಘಟಕದ ನೂತನ್ ಕಲ್ಕುಳಿ ಮಾತನಾಡಿ ಬಿಜೆಪಿಯ ಭ್ರಷ್ಟಾಚಾರ ಹಾಗು ಹುಸಿ ದೇಶ ಭಕ್ತಿ ಇವುಗಳಿಂದ ಬೇಸತ್ತು ಸಿಡಿದೆದ್ದು ಹೊರಬಂದು ಕಾಂಗ್ರೆಸ್ ಸೇರುತ್ತಿರುವ ಯುವ ಸಮುದಾಯದೊಂದಿಗೆ ನಮ್ಮ ಇಡೀ ಕಾಂಗ್ರೆಸ್ ಕುಟುಂಬ ನಿಮ್ಮೊಂದಿಗೆ ಇರಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಜ್ವಲ್ ಶೆಟ್ಟಿ ಹೊಳೆಕೊಪ್ಪ, ಅಭಿಲಾಷ್ ಹುಲ್ಗಾರ್ , ಮೇಧ ಮದನ್, ಮತ್ತಿತರು ಇದ್ದರು.
ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ