Lawyers:ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್

(Lawyers) ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರ ನೇಮಕಾತಿ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ದಿನ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!


ಆದೇಶದಲ್ಲಿ ಏನಿದೆ?;
ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ ಇವರು ಮಾನ್ಯ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮತ್ತು ನಿಗಮಗಳ ಅಧಿಕಾರಿಗಳೊಂದಿಗೆ ದಿನಾಂಕ:01-06-2023 ರಂದು ಜರುಗಿದ ಸಭೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡವಳಿಯಲ್ಲಿ ಕ್ರಮವಹಿಸಲು ನಿರ್ದೇಶನವಿರುತ್ತದೆ. ಅದರಂತೆ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸುವಂತೆ ಶೇ.24 ರಷ್ಟು ಪರಿಶಿಷ್ಟ ಜಾತಿ/ ಪಂಗಡದವರಿಗೆ ಪ್ರಾತಿನಿಧ್ಯತೆ ನೀಡಬಹುದೆಂಬ ಅಭಿಪ್ರಾಯದೊಂದಿಗೆ ಪ್ರಸ್ತಾವನೆಯನ್ನು ಕಾನೂನು ಇಲಾಖೆಗೆ ಕಳುಹಿಸಲು ಸೂಕ್ತ ಆದೇಶವನ್ನು ಹೊರಡಿಸುವಂತೆ ಕೋರಿದ್ದಾರೆ.


ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!


ಕ್ರಮ ಸಂಖ್ಯೆ (2)ರ ಕಾನೂನು ಇಲಾಖೆಯ ಟಿಪ್ಪಣಿಯಲ್ಲಿ “ಕರ್ನಾಟಕ ರಾಜ್ಯಪತ್ರ ಸಂಖ್ಯೆ: ಸಂವ್ಯಶಾಇ 29 ಶಾಸನ 2022, ದಿನಾಂಕ:23.10.2022ರಲ್ಲಿ ಅಧ್ಯಾದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇಕಡ 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ” ಎಂದು ಅಭಿಪ್ರಾಯ ನೀಡಿರುತ್ತಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್‌ ನ್ಯೂಸ್‌; ಏನದು? ಇಲ್ಲಿದೆ ನೋಡಿ


(Lawyers) ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17% ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7% ಸೇರಿ ಒಟ್ಟು ಶೇ.24% ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.

Lawyers:ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್
Lawyers:ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಕೃಷಿ ಯಂತ್ರಗಳ ಖರೀದಿಗೆ ಭಾರೀ ಸಬ್ಸಿಡಿ;  ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು