Sunday, October 1, 2023
Homeಮಲೆನಾಡುಚಿಕ್ಕಮಗಳೂರುಎನ್ ಆರ್ ಪುರದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಹೆಚ್ಚಿದ ಭಯ

ಎನ್ ಆರ್ ಪುರದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಹೆಚ್ಚಿದ ಭಯ

ಎನ್.ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಹೊನ್ನೆಕುಡಿಗೆ ಗ್ರಾಮ ಪಂಚಾಯಿತಿಯ ಮೋರಿಮಠ ಮತ್ತು ಸಾರ್ಯಕ್ಕೆ ಹೋಗುವ ಮಾರ್ಗಮಧ್ಯದ ಹೊಣೆಕಡ್ಲು ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು 9:45 ಕ್ಕೆ ಚಿರತೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಗಾಬರಿ ಮೂಡಿಸಿದೆ.

ಇದನ್ನೂ ಓದಿ; ‘ಕುಮಾರಸ್ವಾಮಿ ಯಾರ್ರೀ?’ ಮೂಡಿಗೆರೆಯಲ್ಲಿ ಸಾಮೂಹಿಕ ರಾಜೀನಾಮೆಗೆ ತಯಾರಿ

ಇದನ್ನೂ ಓದಿ; ಕೈ ಟಿಕೆಟ್ ತಪ್ಪಿದ್ದಕ್ಕೆ ಗಳಗಳನೆ ಅತ್ತ ಗೋಪಿಕೃಷ್ಣ

ಹೊನ್ನೆಕುಡಿಗೆ ವಾಸಿಯಾದ ಸಂಜಯ್ ಮತ್ತು ಅವರ ಸ್ನೇಹಿತರು ಹೊನ್ನೆಕುಡಿಗೆಯಿಂದ ಸಾರ್ಯಕ್ಕೆ ಕೆಲಸದ ನಿಮಿತ್ತ ತೆರಳುತ್ತಿದ್ದರು. ಅವರು ಸಾರ್ಯದಿಂದ ಹಿಂದಿರುಗುವಾಗ ಹೊಣೆಕಡ್ಲು ಎಂಬಲ್ಲಿ ಈ ಚಿರತೆ ಪ್ರತ್ಯೇಕ್ಷವಾಗಿದೆ. ಸುಮಾರು 10 ನಿಮಿಷಗಳ ಕಾಲ ಕಾರಿನಲ್ಲಿಯೇ ಕುಳಿತು ಆ ಚಿರತೆಯ ಪೋಟೋವನ್ನು ಸೆರೆಹಿಡಿದ್ದಾರೆ. ನಂತರ ಬೈಕ್‌ನ ಹಾರನ್ ಸೌಂಡ್ ಕೇಳಿ ಕಾಡಿನೊಳಗೆ ಓಡಿಹೊಗಿದೆ ಎಂದು ಪ್ರತ್ಯಕ್ಷದರ್ಶಿ ಸಂಜಯ್ ತಿಳಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ತಾಲೂಕಿನ ಸುತ್ತಮುತ್ತ ಗೇಮ್ ಏರಿಯಗಳಲ್ಲಿ ಹುಲಿಗಳಿರುವ ಬಗ್ಗೆ ಮಾಹಿತಿ ಇತ್ತು, ಅವುಗಳನ್ನು ನೋಡಿರುವ ಪ್ರತ್ಯಕ್ಷದರ್ಶಿಗಳು ಸಹ ಇದ್ದಾರೆ. ಆದರೆ ದಿಢೀರಾಗಿ ಚಿರತೆ ಕಾಣಿಸಿಕೊಂಡಿರುವುದು ಭಯ ಅರಂಭವಾಗಿದೆ. ಅರಣ್ಯ ಸಿಬ್ಬಂದಿಗಳೇ ಈ ಚಿರತೆಯನ್ನು ತಂದು ಬಿಟ್ಟಿದ್ದಾರೆ ಎಂಬುವುದು ಗ್ರಾಮಸ್ಥರ ಅರೋಪವಾಗಿದೆ.

ಇದನ್ನೂ ಓದಿ👇:

ಕೊನೆಗೂ ಮೂಡಿಗೆರೆ ಹಾಗೂ ತರೀಕೆರೆಯ ಟಿಕೆಟ್ ಘೋಷಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕಡೆಯ ಪಟ್ಟಿಯಲ್ಲಿ 43 ಜನರ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕೊನಗೂ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೊದಲ 2 ಎರಡು ಪಟ್ಟಿ ಬಿಡುಗಡೆಗೊಳಿಸಿದ್ದ ಕಾಂಗ್ರೆಸ್ ಟಿಫ್ ಫೈಟ್ ಇರೋ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿತ್ತು. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕ್ ಮಾನೇಜರ್ ವಿರುದ್ಧ ದೂರು

ಇನ್ನೂ ಮೂಡಿಗೆರೆ ಕ್ಷೇತ್ರದಿಂದ ನಯನ ಮೋಟಮ್ಮಗೆ ಟಿಕೆಟ್ ಫೈನಲ್ ಆಗಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಅವರಿಗೆ ಟಿಕೆಟ್ ಫೈನಲ್ ಆಗಿದೆ.

ಮೂಡಿಗೆರೆಯಿಂದ ಕಾಂಗ್ರೆಸ್ ನಲ್ಲಿ 5ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದರು, ನಯನ ಮೋಟಮ್ಮಗೆ ಟಿಕೆಟ್ ನೀಡಬಾರದೆಂದು ಹಲವು ಬಾರಿ ಬಹಿರಂಗ ಸಭೆ ಮಾಡಿದ್ದರು. ನಯನ ಮೋಟಮ್ಮ ಇಲ್ಲಿಯವರಲ್ಲ ಅವರು ಹೊರಗಿನವರು, ಮೋಟಮ್ಮ ಅವರ ಮಗಳು ಎನ್ನುವುದೇ ಚುನಾವಣೆಗೆ ಸ್ಪರ್ಧಿಸಲು ಮಾನದಂಡವಾಗುವುದಿಲ್ಲ ಎಂಬ ಮಾತುಗಳು ಮೂಡಿಗೆರೆಯ ಕಾಂಗ್ರೆಸ್ ಆಕಾಂಕ್ಷಿಗಳಿಂದ ಕೇಳಿಬಂದಿತ್ತು. ತೀವ್ರ ವಿರೋಧದ ನಡುವೆಯೂ ನಯನ ಮೋಟಮ್ಮಗೆ ಕೈ ಟಿಕೆಟ್ ಘೋಷಣೆ ಮಾಡಿದೆ.

ಇದನ್ನೂ ಓದಿ; ಒಟಿಪಿ ಹೇಳಿದ ಮರುಕ್ಷಣವೇ ಖಾತೆಯಲ್ಲಿದ್ದ ಹಣ ಮಾಯ

ಇನ್ನು ತರೀಕೆರೆಯಲ್ಲಿ ಗೋಪಿಕೃಷ್ಣ ಪ್ರಭಲ ಆಕಾಂಕ್ಷಿಯಾಗಿದ್ದರು. ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಕೂಡ ರೇಸ್ ನಲ್ಲಿದ್ದರು. ಇತ್ತೀಚಿಗಷ್ಟೇ ದೋರನಾಳು ಪರಮೇಶ್ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಕೊಟ್ಟು ಈ ಬಾರಿ ದೋರನಾಳ್ ಪರಮೇಶ್ ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಆದರೆ ನಿರೀಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಶ್ರೀನಿವಾಸ್ ಗೆ ಟಿಕೆಟ್ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್ ಘೋಷಣೆ ಮಾಡಿದ್ದು, ಬಾರೀ ಗೊಂದಲವಿರುವ ಚಿಕ್ಕಮಗಳೂರಿನ ಟಿಕೆಟ್ ಬಾಕಿ ಉಳಿಸಿಕೊಂಡಿದೆ.

Most Popular

Recent Comments