(Lunar Eclipse 25:) ಸೆಪ್ಟೆಂಬರ್ 7ರಂದು ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಈ ದಿನ ಚಂದ್ರನು ಹೊಳೆಯುವ ರಕ್ತ ಚಂದ್ರನಾಗಿ ಬದಲಾಗುತ್ತಾನೆ. ಚಂದ್ರ ನಿಧಾನವಾಗಿ ಭೂಮಿಯ ನೆರಳಿನ ಮೂಲಕ ಹಾದು ಹೋದಂತೆ, ಆಕಾಶದಲ್ಲಿ ರಾತ್ರಿ ಅದು ಗಾಢ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಈ ಗ್ರಹಣ ಭಾರತದಲ್ಲಿ ಗೋಚರಿಸಲಿದ್ದು ಹೆಚ್ಚು ತೀವ್ರವಾಗಿರಲಿದೆ. ಪರಿಣಾಮ ತುಂಬಾ ಕೆಟ್ಟದಾಗಿ ಇರಬಹುದು. ಈ ಗ್ರಹಣಗಳು ವರ್ಷದಲ್ಲಿ ಕೆಲವು ಬಾರಿ ಮಾತ್ರ ಸಂಭವಿಸುವುದರಿಂದ ಕೆಲ ಕಂಟಕಗಳನ್ನು ತಂದೊಡ್ಡುತ್ತವೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಗ್ರಹಣ ಶತಭಿಷ ನಕ್ಷತ್ರ ಕುಂಭ ರಾಶಿಯಲ್ಲಿ ಸಂಭವಿಸುತ್ತದೆ. ಇದು ಕೆಲ ರಾಶಿ ಹಾಗೂ ನಕ್ಷತ್ರಗಳ ಮೇಲೆ ಪ್ರಭಾವ ಬೀರುವುದು. ಹಾಗಾದರೆ ಯಾವುದು ರಾಶಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಧನುಸ್ಸು, ಕನ್ಯಾ, ವೃಷಭ ಮತ್ತು ಮೇಷ ರಾಶಿಗಳಿಗೆ ಈ ಗ್ರಹಣ ಅತ್ಯಂತ ಶುಭಕರವಾಗಿದೆ. ಈ ರಾಶಿಯವರು ಈ ಸಮಯವನ್ನು ಧ್ಯಾನ, ಜಪ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ಅವಕಾಶವಾಗಿ ಬಳಸಿಕೊಳ್ಳಬಹುದು. ಆದಾಗ್ಯೂ, ಅತಿಯಾದ ಸಂತೋಷ ಮತ್ತು ನಿರ್ಲಕ್ಷ್ಯದಿಂದ ದೂರವಿರಬೇಕು.
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?
ಮಕರ, ತುಲಾ, ಸಿಂಹ ಮತ್ತು ಮಿಥುನ ರಾಶಿಯವರಿಗೆ ಗ್ರಹಣದ ಪ್ರಭಾವ ಮಿಶ್ರವಾಗಿರುತ್ತದೆ. ಈ ರಾಶಿಯವರು ತಮ್ಮ ನಿರ್ಧಾರಗಳಲ್ಲಿ ಎಚ್ಚರಿಕೆ ವಹಿಸುವುದು ಮತ್ತು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸುವುದು ಅವಶ್ಯಕ. ದೇವತಾ ಆರಾಧನೆ ಮತ್ತು ಪ್ರಾರ್ಥನೆಗಳ ಮೂಲಕ ಗ್ರಹಣದ ನಕಾರಾತ್ಮಕ ಪ್ರಭಾವವನ್ನು ಕಡಿಮೆ ಮಾಡಬಹುದು.
ಕುಂಭ, ಮೀನ, ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರಿಗೆ ಈ ಗ್ರಹಣ ಅಶುಭಕರವಾಗಿರುತ್ತದೆ ಎಂದು ಹೇಳಲಾಗಿದೆ. ಈ ರಾಶಿಯವರು ಗ್ರಹಣದ ಸಮಯದಲ್ಲಿ ಮಾನಸಿಕ ಒತ್ತಡ, ಕೋಪ ಮತ್ತು ಆತಂಕವನ್ನು ಅನುಭವಿಸಬಹುದು. ಅವಸರದ ನಿರ್ಧಾರಗಳು ಮತ್ತು ವಾಹನ ಸಂಚಾರದಲ್ಲಿ ಎಚ್ಚರಿಕೆ ಅತ್ಯಗತ್ಯ. ಗ್ರಹಣದ ನಕಾರಾತ್ಮಕ ಪ್ರಭಾವವನ್ನು ಕಡಿಮೆ ಮಾಡಲು ಧ್ಯಾನ, ಜಪ ಮತ್ತು ಪ್ರಾರ್ಥನೆಯನ್ನು ಮಾಡಲು ಶಿಫಾರಸು ಮಾಡಲಾಗಿದೆ.

(ಸೂಚನೆ: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ನ್ಯೂಸ್ ಮಲ್ನಾಡ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ ಮಲ್ನಾಡ್ ಇದಕ್ಕೆ ಜವಾಬ್ದಾರಿಯಲ್ಲ)
ಇತ್ತೀಚಿನ ಜನಪ್ರಿಯ ಸುದ್ದಿಗಳು (Lunar Eclipse 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





