Saturday, December 9, 2023
Homeಆಧ್ಯಾತ್ಮಮಂತ್ರಾಲಯದಲ್ಲಿ ಗುರು ರಾಯರ 350 ನೇ ವರ್ಷದ ಆರಾಧನೆ : ಆ.21ರಿಂದ 27ರ ವರೆಗೆ ಸಪ್ತ...

ಮಂತ್ರಾಲಯದಲ್ಲಿ ಗುರು ರಾಯರ 350 ನೇ ವರ್ಷದ ಆರಾಧನೆ : ಆ.21ರಿಂದ 27ರ ವರೆಗೆ ಸಪ್ತ ರಥೋತ್ಸವ 

ರಾಯಚೂರು: ಮಂತ್ರಾಲಯದಲ್ಲಿ ರಾಯರು ಬೃಂದಾವನ ಸೇರಿ 350 ವರ್ಷವಾಗಿದೆ. ಆಗಸ್ಟ್ 21 ರಿಂದ 27ರ ವರೆಗೆ ಏಳು ದಿನ ಸಪ್ತ ರಥೋತ್ಸವ ನಡೆಯಲಿದೆ ಎಂದು ತಿಳಿಸಿದರು. 22, 23, 24 ರಂದು ರಾಯರ ಆರಾಧನೆ ಮಹೋತ್ಸವ ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟವನ್ನು ಗಮನದಲ್ಲಿಟುಕೊಂಡು ಅತ್ಯಂತ ಸರಳವಾಗಿ ಆರಾಧನ ಮಹೋತ್ಸವವನ್ನು ರೂಪಿಸಲಾಗಿದೆ ಎಂದು ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ.

ಕೊವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ. ರಾಯರ ದರ್ಶನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್ ನನ್ನು ನೀಡಲಾಗುತ್ತದೆ. ಸ್ಯಾನಿಟೈಸರ್ ಮಾಡಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೂಡ ಸ್ಥಾಪಿಸಲಾಗಿದೆ. ನದಿ ತೀರದಲ್ಲಿ ವಸತಿ ನಿಲಯ, ಮಠದ ಆವರಣದಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಗುತ್ತಿದೆ. ನದಿ ತೀರದಲ್ಲಿ ಸ್ನಾನಘಟ್ಟಗಳನ್ನು ನಿರ್ಮಿಸಲಾಗಿದೆ. ಅರಾಧನೆಗೆ ಬರುವ ಪ್ರತಿಯೊಬ್ಬ ಭಕ್ತರಿಗೂ ಎಲ್ಲಾ ರೀತಿಯ ಸೌಕರ್ಯವನ್ನು ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ.

ಹಾಗೆಯೇ ಅಂಬುಲೆನ್ಸ್ ಸೇರಿ ತುರ್ತು ಸೇವೆಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಮಳ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿದೆ. ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ತಿರುಮಲ ತಿರುಪತಿಯ ಎಲ್ಲಾ ಅಧಿಕಾರಿಗಳು ವಸ್ತ್ರವನ್ನ ತರುತ್ತಾರೆ. ಗುರು ರಾಯರಿಗೆ ತಿರುಪತಿ ವಸ್ತ್ರ ಸಮರ್ಪಿಸಲಾಗುತ್ತದೆ. ನಾಡಿನ ಮೂಲೆ ಮೂಲೆಯಿಂದಲೂ ಅಸಂಖ್ಯಾತ ಭಕ್ತರು ಶ್ರಿಮಠಕ್ಕೆ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಕೊವಿಡ್ ನಿಯಮಗಳನ್ನ ತಪ್ಪದೆ ಪಾಲಿಸುತ್ತ ಎಲ್ಲ ಕಾರ್ಯಕ್ರಮ ಆಯೋಜನೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಪಂಡಿತರಿAದ ಉಪನ್ಯಾಸ, ಸಾಂಸ್ಕೃತಿಕ ನೃತ್ಯ, ವೀಣೆ ನುಡಿಸುವ ಕಾರ್ಯಕ್ರಮ ಇರಲಿದೆ. ರಸ್ತೆ ಅಗಲೀಕರಣ ಮಾಡಲಾಗಿದೆ. ವಿದ್ಯುತ್ ದೀಪಗಳನ್ನು ಹಾಕಿಸಲಾಗಿದೆ. ನವರತ್ನದ ಕವಚವನ್ನು ರಾಯರ ಮೂಲ ಬೃಂದಾವನಕ್ಕೆ ಅರ್ಪಿಸಲಾಗುತ್ತಿದೆ. ಬಂಗಾರದ ಆಭರಣಗಳನ್ನ ಮೂಲ ರಾಮ ದೇವರಿಗೆ ಸಮರ್ಪಣೆ ಮಾಡಲಾಗುತ್ತಿದೆ. ರಂಗ ಸಭಾಂಗಣದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸುಭುದೇಂದ್ರ ತೀರ್ಥರು ಮಾಹಿತಿಯನ್ನು ನೀಡಿದ್ದಾರೆ.

Most Popular

Recent Comments