ಮೈಸೂರು: ನಗರದಲ್ಲಿ ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆಯನ್ನು ಹಾಕಿರುವ ಮಾಹಿತಿಯು ಮಾಧ್ಯಮದವರಿಗೆ ಲಭ್ಯವಾಗಿದೆ.
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಈಗಾಗಲೇ ಆರು ಮಂದಿಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿದ ಸತ್ಯಮಂಗಲದಲ್ಲಿ ಇಂದು ಬೆಳಗ್ಗೆ ಆರೋಪಿಗಳನ್ನು ಬಂಧಿಸಿ, ಇದೀಗ ಮೈಸೂರಿಗೆ ಕರೆತರಲಾಗಿದೆ.
ಆರೋಪಿಗಳಲ್ಲಿ ಮೂವರು ವ್ಯಕ್ತಿಗಳು ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದವರಾಗಿದ್ದಾರೆ. ರಸ್ತೆಗಳಲ್ಲಿ ವಾಹನವನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಗಳು ಇವರ ಮೇಲಿದೆ. ಅಂತೆಯೇ ಯುವಕ ಹಾಗೂ ಯುವತಿಯನ್ನೂ ದರೋಡೆ ಮಾಡಲು ತಂಡ ಹೋಗಿತ್ತು. ಇವರ ಬಳಿ ಏನೂ ಸಿಗದಕ್ಕೆ ಯುವತಿ ಮೇಲೆ ಅತ್ಯಾಚಾರವನ್ನು ನಡೆಸಿ ಪರಾರಿಯಾಗಿದ್ದರು.
ಸದ್ಯ ಐವರು ಆರೋಪಿಗಳನ್ನ ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು.
ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿಯ ಮೇರೆಗೆ ತೀವ್ರವಾದ ತನಿಖೆಗೆ ಪೊಲೀಸರು ಮುಂದಾಗಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯವನ್ನು ಎಸಗಿದ್ದಾರೆ ಎಂಬ ಮಾಹಿತಿಯು ಲಭ್ಯವಾಗಿದೆ.