ಮುಂಗಾರಿನ ಆರಂಭವೇ ಸರಿಯಾಗಿ ಆಗಿಲ್ಲ. ಈ ಬಾರಿ ಬೆಳೆಗಳಿಂದ ಅಂದುಕೊಂಡಂತೆ ಫಸಲು ನಿರೀಕ್ಷಿಸುವುದು ಅನುಮಾನ. ಹೀಗಾಗಿ ರೈತರು ಆದಷ್ಟು ಬೇಗ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಂಡು ಸುರಕ್ಷತೆ ಪಡೆಯಲು ಇದು ಸಕಾಲ.
ಇದನ್ನೂ ಓದಿ; ದ್ವಿಚಕ್ರ ವಾಹನ ಸವಾರರಿಗೆ ಕಾಫಿನಾಡ ಪೊಲೀಸರ ಆರೋಗ್ಯ ಪಾಠ
2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಜಾರಿಗೊಳಿಸಲಾಗಿದೆ. ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿ ಮಟ್ಟಕ್ಕೂ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಇದನ್ನೂ ಓದಿ; ಏರುತ್ತಿದೆ ಕಾಫಿ ಬೆಲೆ, ಬೆಳೆಗಾರರಿಗೆ ಸಿಹಿ ಸುದ್ದಿ, ಗ್ರಾಹಕರಿಗೆ ಕಹಿ ಸುದ್ದಿ
ಯಾವ ಬೆಳೆಗಳಿಗೆ ವಿಮೆ ಅವಕಾಶವಿದೆ?:
10 ಬೆಳೆಗಳು ಈ ವಿಮಾ ವ್ಯಾಪ್ತಿಯಲ್ಲಿ ಬರಲಿವೆ. ಭತ್ತ (ನೀರಾವರಿ), ನೆಲಗಡಲೆ (ಶೇಂಗಾ) (ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆ ಆಶ್ರಿತ), ರಾಗಿ (ನೀರಾವರಿ), ರಾಗಿ (ಮಳೆ ಆಶ್ರಿತ), ಹುರುಳಿ (ಮಳೆಆಶ್ರಿತ), ತೊಗರಿ (ಮಳೆ ಆಶ್ರಿತ), ಈರುಳ್ಳಿ (ನೀರಾವರಿ), ಟೊಮೇಟೊ ಇವುಗಳನ್ನು ಹೋಬಳಿ ಮಟ್ಟಕ್ಕೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಕೊನೆ ದಿನ ಯಾವಾಗ?:
ಟೊಮೇಟೊ ಮತ್ತು ನೀರಾವರಿ ಆಶ್ರಿತ ಈರುಳ್ಳಿ ಬೆಳೆಗಳಿಗೆ ವಿಮೆ ಮಾಡಿಸಲು ಜೂನ್ 30 ಕೊನೆ ದಿನವಾಗಿದೆ. ನೀರಾವರಿ ಆಶ್ರಿತ ಮುಸುಕಿನ ಜೋಳದ ವಿಮೆಗೆ ಜುಲೈ 15, ಮಳೆಯಾಶ್ರಿತ ನೆಲಗಡಲೆ, ಮುಸುಕಿನ ಜೋಳ, ತೊಗರಿ ಬೆಳೆಗೆ ಜುಲೈ 31, ಭತ್ತ, ನೀರಾವರಿ ಆಶ್ರಿತ ಹಾಗೂ ಮಳೆ ಆಶ್ರಿತ ರಾಗಿ, ಮಳೆ ಆಶ್ರಿತ ಹುರುಳಿಗೆ ಆಗಸ್ಟ್ 18 ಬೆಳೆ ವಿಮೆ ಮಾಡಿಸಲು ಕೊನೆ ದಿನವಾಗಿದೆ.
ಯೋಜನೆಯನ್ನು ಅನುಷ್ಠಾನಗೊಳಿಸಲು ಯೂನಿವರ್ಸಲ್ ಸೋಂಪೋ ಜನರಲ್ ಇನ್ಶೂರೆನ್ಸ್ ಕಂಪನಿ ಎಂಬ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ. ಕೃಷಿ ಬೆಳೆಗಳಿಗೆ ವಿಮಾ ಮೊತ್ತಕ್ಕೆ ಶೇ.2ರಷ್ಟು ಹಾಗೂ ತೋಟಗಾರಿಕೆ ಬೆಳೆಗಳಿಗೆ ವಿಮಾ ಮೊತ್ತಕ್ಕೆ ಶೇ.5ರಷ್ಟು ವಿಮಾ ಕಂತನ್ನು ನಿಗದಿಪಡಿಸಲಾಗಿದೆ. ಅತಿ ಕಡಿಮೆ ದರದಲ್ಲಿ ಕಂತಗಳನ್ನು ಕೊಟ್ಟ ಪ್ರಕೃತಿ ವಿಕೋಪದಿಂದ ಬೆಳೆಗಳು ಹಾಳಾದರೂ ಹೆಚ್ಚಿನ ಮೊತ್ತದ ಹಣ ಸಿಗಲಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸಿಗಂದೂರು ಲಾಂಚ್ ಸ್ಥಗಿತಕ್ಕೆ ದಿನಗಣನೆ
- ಅನುಭವಕ್ಕೆ ಬಾರದ ಜ್ಞಾನ ವ್ಯರ್ಥ, ಆತ್ಮ ಜ್ಞಾನವೇ ವಿಜ್ಞಾನ- ವಿಶ್ವನಾಥ ಸುಂಕಸಾಳ
- ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ
ಹೆಚ್ಚಿನ ಮಳೆಯಿಂದಾಗಿ ಬೆಳೆ ಮುಳುಗಡೆ ಅಥವಾ ದೀರ್ಘಕಾಲ ತೇವಾಂಶ ಕೊರತೆಯಿಂದಾಗಿ ಅಥವಾ ತೀವ್ರ ಬರಗಾಲ ಇವುಗಳಿಂದ ಬೆಳೆ ನಷ್ಟ ಉಂಟಾದ ಸಂದರ್ಭಗಳಲ್ಲಿ ಬೆಳೆ ವಿಮಾ ಯೋಜನೆಯಲ್ಲಿ ಪರಿಹಾರ ಸಿಗಲಿದೆ. ಕಟಾವಿನ ನಂತರ, ಬೆಳೆಯನ್ನು ಜಮೀನಿನಲ್ಲಿ ಒಣಗಿಸಲು ಬಿಟ್ಟಂತಹ ಸಮಯದಲ್ಲಿ ಚಂಡಮಾರುತ, ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಬೆಳೆ ವಿಮೆ ಮಾಡಿಸಿದ್ದಲ್ಲಿ ವಿಮಾ ಸಂಸ್ಥೆಯು ಬೆಳೆ ನಷ್ಟ ಪರಿಹಾರವನ್ನು ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ನೀಡುವ ವ್ಯವಸ್ಥೆ ಇದೆ.
ತಮ್ಮ ಗ್ರಾಮದ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್ಗಳಲ್ಲಿ ಪಂಚಾಯತಿ ವ್ಯಾಪ್ತಿಯ ಗ್ರಾಮ ಒನ್ ಕೇಂದ್ರಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕೇಂದ್ರಗಳಲ್ಲಿ ಕೊನೆಯ ದಿನದೊಳಗೆ ರೈತರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಮೊತ್ತದ ಪ್ರೀಮಿಯಮ್ ಪಾವತಿಸಿ ನೋಂದಾಯಿಸಲು ಕೋರಲಾಗಿದೆ.
ವಿಮೆ ಮಾಡಿಸಲು ಏನಿರಬೇಕು?:
ಬೆಳೆ ವಿಮೆಗೆ ನೋಂದಾಯಿಸಲು ರೈತರು ಫ್ರೂಟ್ಸ್ ಐಡಿ (ಎಫ್ಐಡಿ) ಹೊಂದಿರುವುದು ಕಡ್ಡಾಯವಾಗಿದೆ. ರೈತರು ಬೆಳೆಯುವ ಬೆಳೆಯ ಸರ್ವೆ ನಂಬರ್ ಅವರ ಎಫ್ಐಡಿಯಲ್ಲಿ ನಮೂದಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಇದನ್ನೂ ಓದಿ; 29 ಜೂನ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಹೆಚ್ಚಿನ ಮಳೆಯಿಂದಾಗಿ ಬೆಳೆ ಮುಳುಗಡೆ ಅಥವಾ ದೀರ್ಘಕಾಲ ತೇವಾಂಶ ಕೊರತೆಯಿಂದಾಗಿ ಅಥವಾ ತೀವ್ರ ಬರಗಾಲ ಇವುಗಳಿಂದ ಬೆಳೆ ನಷ್ಟ ಉಂಟಾದ ವೇಳೆ ಬೆಳೆ ವಿಮಾ ಯೋಜನೆಯಲ್ಲಿ ಪರಿಹಾರ ಸಿಗಲಿದೆ. ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಿಸಲು ಬಿಟ್ಟಂತಹ ಸಮಯದಲ್ಲಿ ಚಂಡಮಾರುತ, ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಬೆಳೆ ವಿಮೆ ಮಾಡಿಸಿದರೆ ವಿಮಾ ಸಂಸ್ಥೆಯು ಬೆಳೆ ನಷ್ಟ ಪರಿಹಾರವನ್ನು ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ತಿಳಿಸಿದ್ದಾರೆ.