ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 20 ರಿಂದ 30ರವರೆಗೆ ದೇಶಾದ್ಯಂತ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಲಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ನಡೆಸಿದ ವರ್ಚುಯಲ್ ಸಭೆಯ ನಂತರ 19 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆಯಲ್ಲಿ ಪ್ರತಿಭಟನೆಯನ್ನು ನಡೆಸುವ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ.
ದೇಶದ ಜಾತ್ಯಾತೀತ, ಪ್ರಜಾಸತಾತ್ಮಕ ಮತ್ತು ಗಣರಾಜ್ಯದ ರಕ್ಷಣೆಗಾಗಿ ಎಲ್ಲಾ ಪ್ರಜೆಗಳು ಎದ್ದೇಳುವಂತೆ ಜನರಿಗೆ 19 ಪ್ರತಿಪಕ್ಷಗಳ ಮುಖಂಡರು ಕರೆಯನ್ನು ನೀಡಿದ್ದಾರೆ. ಮೋದಿ ಸರ್ಕಾರದ ಮುಂದೆ 11 ಅಂಶಗಳ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಿರುವ ಪ್ರತಿಪಕ್ಷಗಳು ಮುಂಗಾರು ಅಧಿವೇಶನದ ವಾಶ್ ಔಟ್ ನ್ನು ತೀವ್ರವಾಗಿ ಖಂಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವಂತಹ ಭಾಷಣವು ದೇಶದ ಪ್ರಜೆಗಳ ಸಂಕಟಗಳತ್ತ ಗಮನವನ್ನು ಹರಿಸಲಿಲ್ಲ, ಇದು ಜನರ ಜೀವನ ಹಾಳಾಗುವುದನ್ನು ಮುಂದುವರಿಸುವ ಅಶುಭದ ಎಚ್ಚರಿಕೆ ಎಂದು ಪ್ರತಿಪಕ್ಷಗಳು ತಿಳಿಸಿವೆ.