Panchayati Raj:ಪಂಚಾಯತ್ ರಾಜ್ʼನಲ್ಲಿ ಸಿಗಲಿದೆ ಸಮಸ್ಯೆಗೆ ಪರಿಹಾರ!

(Panchayati Raj) ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆಯ ಕುರಿತು ಸಭೆ ನಡೆಸಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಹೌದು, ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳು 3ನೇ ಶನಿವಾರದಂದು ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಪಾಲ್ಗೊಂಡು ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ಭರವಸೆ ನೀಡಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ ಮಾಹೆಯ ಮೂರನೇ ಶನಿವಾರದಂದು ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನಿಗದಿತವಾಗಿ ಸಭೆ ನಡೆಸಲಾಗುವುದು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು 10ರಂದು ಬೆಂಗಳೂರಿನಲ್ಲಿ ನಡೆದ ಗ್ರಾಮ ಪಂಚಾಯತಿ ನೌಕರರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಬೇಡಿಕೆಯಂತೆ ನಿಗದಿತವಾಗಿ ಪ್ರತಿ ತಿಂಗಳು ಕುಂದು ಕೊರತೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.


ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್‌ ಹೊಂದಿರುವವರ ಗಮನಕ್ಕೆ;  ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಅದರಂತೆ ಪ್ರತಿ ಮಾಹೆಯ ಮೂರನೇ ಶನಿವಾರದಂದು ಅಪರಾಹ್ನ 3 ಗಂಟೆಗೆ ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ.

Panchayati Raj:ಪಂಚಾಯತ್ ರಾಜ್ʼನಲ್ಲಿ ಸಿಗಲಿದೆ ಸಮಸ್ಯೆಗೆ ಪರಿಹಾರ!
Panchayati Raj:ಪಂಚಾಯತ್ ರಾಜ್ʼನಲ್ಲಿ ಸಿಗಲಿದೆ ಸಮಸ್ಯೆಗೆ ಪರಿಹಾರ!

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಭರ್ಜರಿ ಸುದ್ದಿ; ನವೆಂಬರ್ ತಿಂಗಳ 2000 ಹಣ ಕುರಿತು ಸಿಎಂಯಿಂದ ಬಿಗ್‌ ಅಪ್ಡೇಟ್‌


ಇತ್ತೀಚಿನ ಜನಪ್ರಿಯ ಸುದ್ದಿಗಳು