(Pension Facility 25:-) ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ
ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ), ವಯೋನಿವೃತ್ತಿ /ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಆನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ. ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು ಎಂದು ಸಹ ಆದೇಶಿಸಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಗಮನಕ್ಕೆ; ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ
ಸರ್ಕಾರ ನೀಡಿದ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಗಮನಾರ್ಹ ಸಂಖ್ಯೆಯ ಡಿಡಿಓಗಳು ಪಿಂಚಣಿ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವುದನ್ನು ಮುಂದುವರೆಸಿರುವುದನ್ನು ಗಮನಿಸಲಾಗಿದೆ. ಇದು ಪ್ರಕ್ರಿಯೆಯನ್ನು ವಿಳಂಬಗೊಳಿಸುವುದಲ್ಲದೆ, ePPO ಯೋಜನೆಯಡಿಯಲ್ಲಿ ಪಾವತಿಗಾಗಿ ಸಕಾಲಿಕ ಪಿಂಚಣಿ ದೃಢೀಕರಣ ಮತ್ತು ಎಲೆಕ್ಟ್ರಾನಿಕ್ ದತ್ತಾಂಶ ಪ್ರಸರಣಕ್ಕಾಗಿ ಮಹಾಲೇಖಪಾಲರ ಕಚೇರಿ ಮತ್ತು ಖಜಾನೆಯ ನಡುವಿನ ತಡರಹಿತ ಸಂಯೋಜನೆಗೆ ಅಡ್ಡಿಪಡಿಸುತ್ತದೆ ಎಂದು ಮಹಾಲೇಖಪಾಲರು ಉಲ್ಲೇಖಿತ ಪತ್ರದಲ್ಲಿ ತಿಳಿಸಿ, ಡಿಜಿಟಲ್ ಪರಿಸರ ವ್ಯವಸ್ಥೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಅಳವಡಿಸುವ ಸಲುವಾಗಿ ಈ ಕೆಳಗಿನ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿರುತ್ತಾರೆ. ಈ ನಿರ್ಧಾರದ ಪತ್ರ ಇಲ್ಲಿದೆ ನೋಡಿ.
ಇದನ್ನೂ ಓದಿ: ವಿಮಾ ಕಂಪನಿಯಲ್ಲಿ 300 ಹುದ್ದೆಗಳಿಗೆ ನೇಮಕಾತಿ: ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Pension Facility 25:-)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





