Rambhapuri Shri: ಬಾಗಲಕೋಟೆ: (ನ್ಯೂಸ್ ಮಲ್ನಾಡ್ ವರದಿ) ರಂಭಾಪುರಿ ಶ್ರೀಗಳ ಕಾರಿಗೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದಿದೆ. ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ರಂಭಾಪುರಿ ಶ್ರೀ ವಿರುದ್ಧ ಜನರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ತೆರಳುವ ವಾಹನವನ್ನು ಅಡ್ಡಗಟ್ಟಲು ಪ್ರಯತ್ನ ನಡೆದಿದೆ. ಚಪ್ಪಲಿ ಎಸೆತದ ಬಳಿಕ ತಳ್ಳಾಟ, ನೂಕಾಟ ನಡೆದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.
ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು
ಏನಿದು ಗಲಾಟೆ?
ಕಲಾದಗಿಯ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು (Rambhapuri Shri: ) ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಮ್.ಗಂಗಾಧರ ಸ್ವಾಮೀಜಿಯನ್ನ ನೇಮಕ ಮಾಡಿದ್ದರು.

ಇದನ್ನೂ ಓದಿ; ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿದೆ ವಿವರ
ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಗ್ರಾಮಸ್ಥರು ಆರೋಪಿಸಿದ್ದರು. ನಂತರ ರಂಭಾಪುರಿ ಶ್ರೀಗಳ ವಿರೋಧಿ ಬಣ ನೂತನ ಸ್ವಾಮೀಜಿಯನ್ನಾಗಿ ಮಹಾಂತ ದೇವರು ಸ್ವಾಮೀಜಿಯನ್ನ ಕರೆತಂದು ಅದ್ಧೂರಿ ಮೆರವಣಿಗೆ ಮಾಡಿತ್ತು. ಪರ, ವಿರೋಧ ಬಣಗಳು ಹುಟ್ಟಿಕೊಂಡು ಪ್ರಕರಣ ಈಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದೆ.

ಇದನ್ನೂ ಓದಿ; ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?; 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಗೆ ಕೊಡುಗೆ ಏನು
ಇಂದು ಗಂಗಾಧರ ಸ್ವಾಮೀಜಿ ಮಠದ ಹೊಲದ ಉಳುಮೆಗೆ ಮುಂದಾದಾಗ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠದ ಒಟ್ಟು 72 ಎಕರೆ ಭೂಮಿಯನ್ನು ರಂಭಾಪುರಿ ಶ್ರೀ ಮತ್ತು ಗಂಗಾಧರ ಸ್ವಾಮೀಜಿ (Rambhapuri Shri:) ಲಪಟಾಯಿಸಲು ಮುಂದಾಗಿದ್ದಾರೆ ಎನ್ನುವುದು ಭಕ್ತರ ಆರೋಪ. ವಿವಾದ ಕೋರ್ಟ್ ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆಗೆ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಗಲಾಟೆ ನಡೆಯುತ್ತಿರುವಾಗಲೇ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ತೆರಳುತ್ತಿದ್ದರು. ಈ ವೇಳೆ ರಂಭಾಪುರಿ ಶ್ರೀಗಳು ಕಾರಿನ ಮೇಲೆ ಚಪ್ಪಲಿ ಎಸೆಯಲಾಗಿದೆ. ಕೂಡಲೇ ಅಲ್ಲಿದ್ದ ಭಕ್ತರು ಮಹಿಳೆಯನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply