Leopard: ಚಿಕ್ಕಮಗಳೂರು (ನ್ಯೂಸ್ ಮಲ್ನಾಡ್ ವರದಿ) ನಗರದ ಹೊರ ವಲಯದ ಕೆಸವಿನಮನೆ ರಸ್ತೆ ಬದಿಯ ತಂತಿಬೇಲಿಗೆ ಹಾಕಿದ್ದ ಉರುಳಿನಲ್ಲಿ ಸಿಲುಕಿದ ಚಿರತೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಗುರುವಾರ ರಾತ್ರಿ ರಸ್ತೆ ಬದಿಯ ಬೇಲಿಗೆ ಕಿಡಿಗೇಡಿಗಳು ಹಾಕಿರುವ ಉರುಳಿನಲ್ಲಿ ಸಿಲುಕಿಕೊಂಡಿತ್ತು.
ಇದನ್ನೂ ಓದಿ; ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ;ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
ಇದನ್ನೂ ಓದಿ; ಚಿಕ್ಕಮಗಳೂರಿಂದ ಬೆಂಗಳೂರಿಗೆ ಆಟೋದಲ್ಲೇ ತೆರಳಿ ಶಿವಣ್ಣನಿಗೆ ಮುತ್ತಿಟ್ಟ ಕಾಫಿನಾಡು ಚಂದು
ಶುಕ್ರವಾರ ಬೆಳಿಗ್ಗೆ ರಸ್ತೆಯಲ್ಲಿ ತಿರುಗಾಡುವವರು ನೋಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಬೆಳಿಗ್ಗೆ 9 ಗಂಟೆ ಸುಮಾರಿಗೆ ವಿಷಯ ತಿಳಿದಿದ್ದರೂ ಅರವಳಿಕೆ ತಜ್ಞರು ಶಿವಮೊಗ್ಗದಿಂದ ಬರುತ ತನಕ ಕಾಯಬೇಕಾಯಿತು. ಹುರುಳಿಗೆ ಸಿಲುಕಿ 9 ಗಂಟೆಗಳ ಕಾಲ ಚಿರತೆ ನರಳಾಡಿದೆ. ನಂತರ ಸೆರೆ ಹಿಡಿದು ಚಿಕಿತ್ಸೆ ನೀಡಿ ವೈದ್ಯರು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದೆ.
ಚಿಕ್ಕಮಗಳೂರು: ತಂತಿ ಬೇಲಿಯಲ್ಲಿ ಸಿಲುಕಿದ ಚಿರತೆಯ ರಕ್ಷಣೆ pic.twitter.com/kqGVVTYNhj
— News Malnad (@NewsMalnadMedia) July 15, 2023

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೊಪ್ಪ/ಶೃಂಗೇರಿ: ಕಿಟಕಿ ಗಾಜು ಒಡೆದು ಕಳ್ಳತನಕ್ಕೆ ಯತ್ನ: ದೂರು ದಾಖಲು
- ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ
- arecanut price: 14 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
ಅನ್ನ ಭಾಗ್ಯ ಯೋಜನೆ: ಅಕ್ಕಿ ಜೊತೆ ನಿಮಗೂ ಹಣ ಬಂತಾ?.ಇನ್ನೂ ಬಂದಿಲ್ವಾ, ನಿಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಿ?
anna bhagya scheme: ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದರು. ಹಣವು ಖಾತೆಗೆ ವರ್ಗಾವಣೆಯಾಗಿದೆಯೇ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಆಹಾರ ಇಲಾಖೆ ವೆಬ್ಸೈಟ್ ಲಿಂಕ್ (link) ಕೂಡ ಬಿಡುಗಡೆ ಮಾಡಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್ಸೈಟ್ ಲಿಂಕ್ (website link) ಬಿಡುಗಡೆ ಮಾಡಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.07.2023
- ಅನ್ನ ಭಾಗ್ಯ ಯೋಜನೆ:ಅಕ್ಕಿ ಜೊತೆ ನಿಮಗೂ ಹಣ ಬಂತಾ?.ಇನ್ನೂ ಬಂದಿಲ್ವಾ, ಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಿ?
- ಚಿಕ್ಕಮಗಳೂರು: ಅಂಗಡಿಯಲ್ಲಿದ್ದ 40 ಕೆ.ಜಿ. ಟೊಮೆಟೊ ಕಳ್ಳತನ
ಅನ್ನಭಾಗ್ಯ ದುಡ್ಡು ಆಕೌಂಟ್ ಸೇರಿದ್ಯಾ ಚೆಕ್ ಮಾಡೋದು ಹೇಗೆ?:
* ಆಹಾರ ಇಲಾಖೆಯ ವೆಬ್ ಸೈಟ್ ಗೆ ಲಾಗಿನ್ (login)ಆಗಿ (ahara.kar.nic.in/home/eservice)
* ಇ- ಸರ್ವಿಸ್ ಪೋರ್ಟಲ್ನಲ್ಲಿ( e-service portal) ಡಿಬಿಟಿ ಅನ್ನುವ ಲಿಂಕ್ ಕಾಣಿಸಲಿದೆ ಇದರ ಮೇಲೆ ಕ್ಲಿಕ್ ಮಾಡಿ.
* ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ(dbt) ಅನ್ನುವ ಆಯ್ಕೆ ಗೋಚರಿಸುತ್ತದೆ, ಅದನ್ನು ಆಯ್ಕೆ ಮಾಡಿ.
* ಮುಂದಿನ ಪುಟದಲ್ಲಿ ನಿಗದಿತ ಕಾಲಂನಲ್ಲಿ ರೇಷನ್ ಕಾರ್ಡ್ ನ ನಂಬರ್ ಅಂದ್ರೆ ಆರ್ ಸಿ ನಂಬರ್ನ್ನು ಭರ್ತಿಮಾಡಬೇಕು.
* ನಿಮ್ಮ ರೇಷನ್ ಕಾರ್ಡ್ನ(ration card) ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ (rc number) ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಆರಿಸಿ.
* ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ದುಡ್ಡು ಜಮೆ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಕ್ರೆಡಿಟ್(credit) ಆಗದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಲಿದೆ.

ಅನ್ನಭಾಗ್ಯ ಹಣ ವರ್ಗಾವಣೆ ಕುರಿತು ಏನೆಲ್ಲಾ ಮಾಹಿತಿ ಲಭ್ಯವಾಗುತ್ತದೆ?:
ಅನ್ನಭಾಗ್ಯ ಹಣ ವರ್ಗಾವಣೆ ಖಚಿತ ಪಡೆಸಿಕೊಳ್ಳಲು ವೆಬ್ಸೈಟ್ ಪರಿಶೀಲಿಸಿದಾಗ ಅದರಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಕುಟುಂಬ ಸದಸ್ಯರು, ಪಡಿತರ ಚೀಟಿ ವಿಧಾನ, ಅಕ್ಕಿ ಅರ್ಹತೆ ಪ್ರಮಾಣ (ಇಂತಿಷ್ಟು ಕೆ.ಜಿ) ಹಾಗೂ ಹಣ ವರ್ಗಾವಣೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ.
ಇದನ್ನೂ ಓದಿ; ಕೊಪ್ಪ: ಆನೆ ಸಂಚಾರ; ಆತಂಕದಲ್ಲಿ ಗ್ರಾಮಸ್ಥರು