ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಗಿರೀಶ್ ಮೃತ ಪಟ್ಟ ವ್ಯಕ್ತಿ.
ಇದನ್ನೂ ಓದಿ; ಬೈಕ್ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ
ಭದ್ರಾವತಿಯಿಂದ ಬರುತ್ತಿದ್ದ ಸ್ಕೂಟಿ ಸವಾರನಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಸವಾರ ಸಾವನ್ನಪ್ಪಿದ್ದಾನೆ.
ಭದ್ರಾವತಿಯಿಂದ ಬಿಳಕಿ ಕ್ರಾಸ್ ಬಳಿ ಸ್ಕೂಟಿ ಕ್ರಮಸಂಖ್ಯೆ ಕೆಎ 51 ಎಂ ಎಂ 5323 ನಲ್ಲಿ ಬರುತ್ತಿದ್ದ ಗಿರೀಶ್ ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಕೆಎ 57 ಎಫ್ 1650 ಕ್ರಮ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೋಲಿನ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸಿ.ಟಿ.ರವಿ
- ಸಿ.ಟಿ ರವಿಯನ್ನು ಸೋಲಿಸಿದ ಕಾಂಗ್ರೆಸ್ನ ತಮ್ಮಯ್ಯ
- ಚುನಾವಣೆಯಲ್ಲಿ ಸೋತ ಸಿ.ಟಿ ರವಿಗೆ ಧೈರ್ಯ ತುಂಬಿದ ಬಾಲಕ
ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಉರಗ ಸಂರಕ್ಷಕ ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸ್ನೇಕ್ ಕಿರಣ್ ಹಾವು ಕಡಿತಕ್ಕೆ ಒಳಗಾದವರು.
ನಗರದ ಹೊರಭಾಗವಾಗಿರುವ ತಾವರೆ ಚಟ್ನಹಳ್ಳಿಯಲ್ಲಿ ಹಾವು ಬಂದಿದೆ ಎಂದು ಕರೆ ಬಂದ ಹಿನ್ನಲೆಯಲ್ಲಿ ಹಾವು ಹಿಡಿಯಲು ಸ್ನೇಕ್ ಕಿರಣ್ ಮುಂದಾಗಿದ್ದಾರೆ. ಹಾವು ಹಿಡಿಯಲು ಮುಂದಾದಾಗ ಪೊದೆ ಒಳಗೆ ನುಗ್ಗಿದೆ.
ಇದನ್ನೂ ಓದಿ; ಭೀಕರ ಅಪಘಾತ, ಅತ್ತೆ-ಸೊಸೆ ಸಾವು
ಸ್ನೇಕ್ ಕಿರಣ್ ಶೂ ಹಾಕದೆ ಬಂದಿದ್ದೂ, ಕಾಲಿಗೆ ಸರಿಯಾಗಿ ಕೊಳಕಮಂಡಲ ಹಾವು ಕಚ್ಚಿದೆ. ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.