ಹುಬ್ಬಳ್ಳಿ: ಭಾರತದಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘ ಇಲ್ಲದಿದ್ದರೆ ಭಾರತ ಮುರ್ನಾಲ್ಕು ಪಾಕಿಸ್ತಾನ ಆಗುತಿತ್ತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಆರ್ ಎಸ್ ಎಸ್ ಬಗ್ಗೆ ಇಲ್ಲಸಲ್ಲದ ಆರೋಪ, ಟೀಕೆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್ ಡಿ ಕುಮಾರಸ್ವಾಮಿ ಇಬ್ಬರು ತಮ್ಮ ವ್ಯಕ್ತಿತ್ವಕ್ಕೆ ದಕ್ಕೆ ತಂದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶಗೊಂಡರು.
ಸಿದ್ದರಾಮಯ್ಯ, ಕುಮಾರಸ್ವಾಮಿ, ಆರ್ ಎಸ್ ಎಸ್ ಸಂಘಟನೆಯನ್ನು ಟೀಕಿಸಿದರೆ ಮುಸ್ಲಿಂ ಮತದಾರರು ತಮ್ಮ ಪರವಾಗುತ್ತಾರೆಂಬ ಭ್ರಮೆಯಲ್ಲಿದ್ದಾರೆ, ಮುಸ್ಲಿಮರಿಗೂ ಇವರ ಬಂಡವಾಳ ತಿಳಿದು ಅನೇಕ ಮುಸ್ಲಿಂ ಮುಖಂಡರು ಬಿಜೆಪಿ ಸೇರಿದ್ದಾರೆ ಎಂದು ಹೇಳಿದರು.