SC-ST Land:ಎಸ್ಸಿ-ಎಸ್ಟಿ ಪಂಗಡದವರಿಗೆ ಮಂಜೂರಾಗಿದ್ದ ಜಮೀನು ಕೃಷಿಯೇತರ ಉದ್ದೇಶಗಳ ಬಳಕೆಗೆ ಪರಿವರ್ತನೆಗೊಂಡಿದ್ದರೆ ಅದರ ಮಾರಾಟಕ್ಕೆ ಜಿಲ್ಲಾಧಿಕಾರಿಯ (ಸರ್ಕಾರದ) ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಮೀನುಕುಂಟೆ ಗ್ರಾಮದ ಮುನ್ನಯ್ಯ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿದೆ. ಮಂಜೂರಾಗಿರುವ ಭೂಮಿಯನ್ನು (SC-ST Land:) ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 95 ರ ಅಡಿಯಲ್ಲಿ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಿದ್ದರೆ, ಅದು ಮಂಜೂರಾದ ಭೂಮಿಯ ಸ್ವರೂಪ ಕಳೆದುಕೊಳ್ಳಲಿದೆ. ಆ ಭೂಮಿಯನ್ನು ಮಾರಾಟ ಮಾಡಲು ಅಥವಾ ಬೇರೆಯವರಿಗೆ ವರ್ಗಾಯಿಸಲು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿ ವರ್ಗಾವಣೆ ನಿಷೇಧ) ಕಾಯ್ದೆ-1978ರ ಸೆಕ್ಷನ್ 4 (2)ರ ಪ್ರಕಾರ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಮಂಜೂರಾದ ಭೂಮಿಗೆ ಮಾತ್ರ ಪೂರ್ವಾನುಮತಿ ಪಡೆಯುವ ಅಗತ್ಯವಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ
ಪ್ರಕರಣದ ಹಿನ್ನೆಲೆ:
ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಮೀನುಕುಂಟೆ ಗ್ರಾಮದಲ್ಲಿ 5 ಎಕರೆ 3 ಗುಂಟೆ ಭೂಮಿ ಸರ್ಕಾರದಿಂದ ಮಂಜೂರಾಗಿತ್ತು. ಆ ಭೂಮಿಯನ್ನು ಮಾರಾಟ ಮಾಡಲಾಗಿತ್ತು. ಆದರೆ ಅದರ ವಾರಸುದಾರರು 1996ರಲ್ಲಿ ದಾವೆ ಹೂಡಿ, ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪಂಗಡದವರಿಗೆ (ಕೆಲವು ಭೂಮಿ ವರ್ಗಾವಣೆ ನಿಷೇಧ) ಕಾಯ್ದೆ-1978ರ ಸೆಕ್ಷನ್ 4(2)ಪ್ರಕಾರ ಮಂಜೂರಾದ ಭೂಮಿ ಮಾರಾಟ ಮಾಡಲು ಸರ್ಕಾರದ ಪೂರ್ವಾನುಮತಿ ಪಡೆಯಬೇಕು. ಈ ಭೂಮಿಯ ಮಾರಾಟಕ್ಕೆ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ ಭೂ ಮಾರಾಟ ರದ್ದುಗೊಳಿಸಬೇಕೆಂದು ಕೋರಿದ್ದರು.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್
ಭೂಮಿ ಖರೀದಿಸಿದ್ದ ಭಿಮಲ್ ಕುಮಾರ ಗೋಯಂಕಾ ಪರ ವಕೀಲರು, ಕರ್ನಾಟಕ ಭೂ ಸುಧಾರಣಾ ಕಾಯ್ದೆ-1964ರ ಸೆಕ್ಷನ್ 95ರಡಿ ಭೂಮಿಯನ್ನು ಕೃಷಿಯೇತರ (SC-ST Land:) ಉದ್ದೇಶಗಳಿಗೆ ಪರಿವರ್ತನೆ ಮಾಡಿ ಮಾರಾಟ ಮಾಡಲಾಗಿದೆ, ಆದ್ದರಿಂದ ಭೂ ಮಾರಾಟಕ್ಕೆ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ ಎಂದು ವಾದಿಸಿದ್ದರು.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply