ಹೊಸನಗರ: (ನ್ಯೂಸ್ ಮಲ್ನಾಡ್ ವರದಿ) ಶರಾವತಿ ನದಿಯಲ್ಲಿ ಸಾಗುತ್ತಿದ್ದ ವೇಳೆ ಹಸಿರುಮಕ್ಕಿ ಲಾಂಚ್ನ ಡೋರ್ ಕೇಬಲ್ ತುಂಡಾಗಿ ಸಂಚಾರ ಬಂದ್ ಆಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಈ ಮಾರ್ಗವಾಗಿ ಬದಲಿ ಲಾಂಚ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಎಂದಿನಂತೆ ಓಡಾಟ ಪ್ರಾರಂಭವಾಗಿದೆ.
ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು
ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ
ಹಸಿರುಮಕ್ಕಿ ನದಿಗೆ ಭಾನುವಾರ ಸಂಜೆಯೇ ಬದಲಿ ಲಾಂಚ್ ಅನ್ನು ತರಲಾಗಿದೆ. ಸಮೀಪದ ಸಿಗಂದೂರು ಹೊಳೆಬಾಗಿಲಿನಲ್ಲಿ ಸೇವೆಯಲ್ಲಿದ್ದ ಎರಡು ಲಾಂಚ್ಗಳ ಪೈಕಿ ಒಂದನ್ನು ಹಸಿರುಮಕ್ಕಿಗೆ ತಂದು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲಾಗಿದೆ.
ಡೋರ್ ತುಂಡಾಗಿ ಬಿದ್ದ ಲಾಂಚ್ ಅನ್ನು ದುರಸ್ತಿಗೊಳಿಸಲು 3-4 ದಿನ ಬೇಕಿದ್ದು, ಅಲ್ಲಿಯವರೆಗೆ ಈ ಲಾಂಚ್ ಸೇವೆಯಲ್ಲಿ ಇರಲಿದೆ ಎಂದು ಹೇಳಲಾಗಿದೆ.
ಏನಿದು ಘಟನೆ?:
ಹಸಿರುಮಕ್ಕಿ ಲಾಂಚ್ ಕೆಬಿ ಸರ್ಕಲ್ ಕಡೆಯಿಂದ ಸಾಗರ ಕಡೆ ಹೋಗುವ ನಿಲ್ದಾಣ ಪಾಯಿಂಟ್ ಬಳಿ ಹೋಗುತ್ತಿದ್ದಾಗ ಲಾಂಚ್ನ ಡೋರ್ ಕೇಬಲ್ ಕಟ್ ಆಗಿತ್ತು. ಈ ವೇಳೆ ಡೋರ್ ಮೇಲೆ ನಿಲ್ಲಿಸಿದ್ದ ಬೈಕ್ ನೀರಿಗೆ ಬಿದ್ದಿದೆ. ಆಗ ಅಲ್ಲೇ ಇದ್ದ ಲಾಂಚ್ ಸಿಬ್ಬಂದಿಯೊಬ್ಬರು ಬೈಕ್ ಅನ್ನು ಹಿಡಿದುಕೊಳ್ಳಲು ಮುಂದಾಗಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದಾರೆ. ಕೊನೆಗೆ ಈಜಿ ದಡ ಸೇರಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
- ಚುನಾವಣಾ ಅಧಿಕಾರಿಗಳು ಪಡೆಯುವ ಗೌರವಧನ ಎಷ್ಟು ಗೊತ್ತಾ? ಈ ಸ್ಟೋರಿ ಓದಿ.
- ಆಧಾರ್ ಕಾರ್ಡ್ನಲ್ಲಿ ನಿಮ್ಮ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಪ್ರಯಾಣಿಕರು ಸೇಫ್:
ಲಾಂಚ್ ಅನ್ನು ನಿಲುಗಡೆ ಮಾಡಬೇಕಾದರೆ ಡೋರ್ ಬಹಳ ಮುಖ್ಯವಾಗುತ್ತದೆ. ಕೊನೆಗೆ ಆ ಡೋರ್ ಮೂಲಕವೇ ವಾಹನಗಳ ಸಹಿತ ಜನರು ಸಹ ರಸ್ತೆಗೆ ದಾಟಬೇಕು. ಆದರೆ, ಡೋರ್ ಕೇಬಲ್ ಕಟ್ ಆಗಿದ್ದರಿಂದ ಜನತೆ ದಡಕ್ಕೆ ಹೋಗಲು ಕಷ್ಟವಾಗಿದೆ. ಕೊನೆಗೆ ಲಾಂಚ್ ಅನ್ನು ಹಿಮ್ಮುಖವಾಗಿ ದಡದತ್ತ ತಂದು, ಪ್ರಯಾಣಿಕರನ್ನು ಸುರಕ್ಷಿತವಾಗಿ ದಡ ಸೇರಿಸಲಾಗಿತ್ತು.
ಲಾಂಚ್ ಇಲ್ಲದೆ ಪರದಾಟ:
ಲಾಂಚ್ ಡೋರ್ ಮೇಲೆ ವಾಹನ ಹಾಕಬಾರದು ಎಂಬ ನಿಯಮ ಇದ್ದರೂ ಲಾಂಚ್ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈಗ ಲಾಂಬ್ನಲ್ಲಿ ಬಸ್, ಕಾರುಗಳು, ಬೈಕ್ಗಳು ಹಾಗೇ ಸಿಲುಕಿಕೊಂಡಿದ್ದವು, ಹಸಿರುಮಕ್ಕಿ ಲಾಂಚ್ ಇಲ್ಲದೆ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇದೀಗ ಪುನಃ ಸೇವೆ ಆರಂಭವಾಗಿರುವುದು ಸ್ಥಳೀಯರು ನಿರಾಳರಾಗುವಂತೆ ಮಾಡಿದೆ.
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್; ಮೇ 1ರಿಂದ ಫೇಕ್ ಕಾಲ್, ಮೆಸೇಜ್ ಗೆ ನಿರ್ಬಂಧ
ಟೆಲಿಕಾಂ ನೀತಿಯಲ್ಲಿ ಮೇ 1 ರಿಂದ ಮಹತ್ತರ ಬದಲಾವಣೆ ಆಗುತ್ತಿದೆ ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ.
ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ
ಫೇಕ್ ಕಾಲ್ ಹಾಗೂ ಮೆಸೇಜ್ಗೆ ಟ್ರಾಯ್ ಕಡಿವಾಣ ಹಾಕಿದೆ. ಮೊಬೈಲ್ ಬಳಕೆದಾರರು ಪ್ರತಿನಿತ್ಯ ಲೋನ್, ಬಂಪರ್ ಬಹುಮಾನ ಸೇರಿದಂತೆ ಹಲವು ಅನಗತ್ಯ ಕರೆ ಹಾಗೂ ಸಂದೇಶಗಳಿಂದ ಹೈರಾಣಾಗುತ್ತಿದ್ದವರಿಗೆ ಟ್ರಾಯ್ ಸಿಹಿ ಸುದ್ದಿ ನೀಡಿದೆ.
ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು
ಮೊಬೈಲ್ಗಳಿಗೆ ಬರುವ ಅನಗತ್ಯ ಮೆಸೇಜ್ಗಳಿಗೆ ಕಡಿವಾಣ ಹಾಕುವಂತೆ ಟೆಲಿಕಾಂ ಆಪರೇಟರ್ಗಳಿಗೆ ನಿಯಂತ್ರಕ ಸಂಸ್ಥೆ ಟ್ರಾಯ್ ಗುರುವಾರ ಸೂಚನೆ ನೀಡಿದೆ. ಮೇ.01 ರಿಂದ ಟೆಲಿಕಾಂ ಕಂಪನಿಗಳು ಅನಗತ್ಯ ಕಾಲ್ ಹಾಗೂ ಸಂದೇಶ ಫಿಲ್ಟರ್ ಮಾಡಲಿದೆ. ಇದರಿಂದಾಗಿ ಗ್ರಾಹಕರಿಗೆ ಅನಗತ್ಯ ಮೆಸೇಜ್ಗಳಿಂದ ಉಂಟಾಗುವ ಕಿರಿಕಿಯಿಂದ ಮುಕ್ತಿ ಸಿಗಲಿದೆ.
ಇನ್ನು ಅಪರಿಚಿತ ನಂಬರ್, ಸ್ಪಾಯಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್ನಲ್ಲಿ ಸೇವ್ ಆಗಿರದ ನಂಬರ್ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್ ಬಳಿ ಲಭ್ಯವಿರುವ ಕೆವೈಸಿ ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ ಮಾಡಲಾಗುತ್ತದೆ. ಈ ಉಪಕ್ರಮ ಜಾರಿಗೆ ಬಂದಾಗ ಮೊಬೈಲ್ನಲ್ಲಿ ಅಪರಿಚಿತ ನಂಬರ್ಗಳ ಬದಲು ಕರೆ ಮಾಡುತ್ತಿರುವವರ ಹೆಸರು ಕಾಣಿಸಲಿದೆ.
ಪ್ರಸ್ತುತ ಇಂತಹ ಸೌಲಭ್ಯವನ್ನು ಪಡೆಯಲು ಜನರು ‘ಟ್ರೂಕಾಲರ್’ನಂತಹ ಆಯಪ್ಗಳಿಗೆ ಮೊರೆ ಹೋಗಬೇಕಾಗುತ್ತದೆ. ಇಂತಹ ಆಯಪ್ಗಳು ಮಾಹಿತಿಯನ್ನು ಕ್ರೌಡ್ಸೋರ್ಸಿಂಗ್ ವಿಧಾನದ ಮೂಲಕ ಸಂಗ್ರಹಿಸುವುದರಿಂದ ಅವು ಅಧಿಕೃತವಾಗಿವೆ ಎನ್ನಲು ಸಾಧ್ಯವಾಗಿಲ್ಲ. ಆದರೆ ಕೆವೈಸಿ ಡೇಟಾಗಳು ಸಂಪೂರ್ಣವಾಗಿ ಅಧಿಕೃತ ಹಾಗೂ ನಂಬಲು ಅರ್ಹವಾಗಿರುತ್ತವೆ.
ಒಂದು ವೇಳೆ ಕೆವೈಸಿ ಸರಿಯಾಗಿ ಮಾಡಿಸದಿದ್ದರೆ ಫೋನ್ನಲ್ಲಿ ಹೆಸರು ಕಂಡುಬರುವುದಿಲ್ಲ. ಹೀಗಾಗಿ ಟ್ರಾಯ್ನ ಈ ಹೊಸ ಉಪಕ್ರಮದಿಂದಾಗಿ ಟೆಲಿಕಾಂ ಸೇವೆ ಪೂರೈಕೆದಾರರು ಕೆವೈಸಿ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆಯೇ ಎಂಬುದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಬಹುದಾಗಿದೆ.