(Surya Ghar Yojana) ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್ ಸೂರ್ಯ ಘರ್ ಯೋಜನೆಗೆ 5.14 ಲಕ್ಷ ನೋಂದಣಿಯಾಗಿದ್ದು, ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ ಎಂದು ಬೆಸ್ಕಾಂ ಎಂಡಿ ವಿವರಿಸಿದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಬ್ಯಾಂಕ್ ಗಳಿಂದ ಸಾಲ ಸೌಲಭ್ಯ:
ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಬ್ಯಾಂಕ್ ನಿಂದ ಸಾಲ ಪಡೆಯುವವರ ಗಮನಕ್ಕೆ:
ಪ್ರಸ್ತುತ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್ ಎಲ್ ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು. ಹಾಗೆಯೇ ಪಿಎಮ್ ಸೂರ್ಯ ಘರ್ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್ ಗಳ ಪ್ರತಿನಿಧಿ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ
ಸೌರ ಛಾವಣಿಯ ಪ್ರಯೋಜನಗಳು:
* ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ.
* 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ.
* ವಿದ್ಯುತ್ ಬಿಲ್ ಹೊರೆ ತಪ್ಪುವುದು.
* ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ
* ಕನಿಷ್ಠ ನಿರ್ವಹಣೆ ವೆಚ್ಚ.
* ಇಂಗಾಲದ ಹೊರಸೂಸುವಿಕೆ ತಗ್ಗುವುದು.
ಇದನ್ನೂ ಓದಿ; ಗಂಡಸರಿಗೂ ಫ್ರೀ ಬಸ್; ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ
ಸಬ್ಸಿಡಿ
* 1ಕಿ.ವ್ಯಾ – 2ಕಿ.ವ್ಯಾ ಸಾಮರ್ಥ್ಯದ ಘಟಕ 30,000-60,000 ರೂ.
* 2 ಕಿ.ವ್ಯಾ. – 3 ಕಿ.ವ್ಯಾ. ಸಾಮರ್ಥ್ಯ 60,000- 78,000 ರೂ.
* 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ 78,000 ರೂ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






