Teachers: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Teachers: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ(Teachers) ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Teachers: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Teachers: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ಶಿಪ್! ಈ ರೀತಿ ಮಾಡಿ ಅರ್ಜಿ ಸಲ್ಲಿಸಿ


ಈ ಮೇಲ್ಕಂಡ  ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(01) ರ ಪತ್ರದಲ್ಲಿ ಬ್ಯಾಕ್ ಲಾಗ್ ಸಚಿವ ಸಂಪುಟ ಉಪ ಸಮಿತಿ ಸಭೆಯ ನಿರ್ಣಯದಂತೆ, ಸರ್ಕಾರದ ವಿವಿಧ ಇಲಾಖೆಗಳು/ನಿಯಮಗಳು/ಮಂಡಳಿಗಳು /ವಿಶ್ವವಿದ್ಯಾನಿಯಗಳು/ ಸಹಕಾರ ಸಂಸ್ಥೆಗಳು/ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ತನಿಖಾ ತಂಡವನ್ನು ರಚಿಸಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ, ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲಕಾಲಕ್ಕೆ, ಹೊರಡಿಸಿರುವ ಮೀಸಲಾತಿ ನಿಯಮಗಳನ್ನಯ ನೇರ ನೇಮಕಾತಿ ಮತ್ತು ಮುಂಬಡ್ತಿಯನ್ನು ಅನುಷ್ಠಾನಗೊಳಿಸಿರುವ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಪರಿಶೀಲಿಸಲು ಸದರಿ ಆಯೋಗದ ತಂಡವನ್ನು ನೇಮಿಸಿರುತ್ತಾರೆ.


ಇದನ್ನೂ ಓದಿ:  ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?


ಈ ವಿಷಯಕ್ಕೆ ಸಂಬಂಧಪಟ್ಟಂತೆ ಉಲ್ಲೇಖ(2) ರಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಮೂನೆ-01 & 02 ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಒದಗಿಸಲು ತಿಳಿಸಿರುತ್ತಾರೆ.
ಇಲಾಖೆಯಲ್ಲಿ 1978 ರಿಂದ 2003 ರ ವರೆಗೆ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಾಧಿಕಾರಿಯು ರಾಜ್ಯದ 04 ವಿಭಾಗೀಯ ಕಛೇರಿಗಳ ಸಹನಿರ್ದೇಶಕರಾಗಿದ್ದು, 2003ನೇ ಸಾಲಿನಿಂದ ನೇಮಕಾತಿ ಪ್ರಾಧಿಕಾರಿಗಳು ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು ಆಗಿರುತ್ತಾರೆ. ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ನೀಡುವ ಸಕ್ಷಮ ಪ್ರಾಧಿಕಾರಿಯು 35 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಾಗಿರುವ ವಿಷಯವನ್ನು ಮಾನ್ಯ ಆಯೋಗದ ಗಮನಕ್ಕೆ ತರಲಾಗಿದೆ.


ಇದನ್ನೂ ಓದಿ:  ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು


ಮಾನ್ಯ ಆಯೋಗವು ನಮೂನೆ-01 & 02 ಮಾಹಿತಿ/ದಾಖಲೆಗಳೊಂದಿಗೆ ಖುದ್ದು ಹಾಜರಾಗಿ ಆಯೋಗವು ಅಪೇಕ್ಷಿಸಿರುವ ಮಾಹಿತಿಯನ್ನು ಒದಗಿಸಲು ಸಂಬಂಧಪಟ್ಟ ನೇಮಕಾತಿ/ಬಡ್ತಿ ನೀಡುವ ಕಛೇರಿಯ ಜವಾಬ್ದಾರಿಯುತ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಬೆಂಗಳೂರು, ಇಲ್ಲಿಗೆ ನಿಯೋಜಿಸಲು ಸೂಚಿಸಿರುತ್ತಾರೆ.


ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ! ಯಾವ ಯೋಜನೆ?


ಪ್ರಯುಕ್ತ ಆಯೋಗವು ನೀಡಿರುವ ನಮೂನೆ-01 & 02 ನ್ನು ಈ ವತ್ರಕ್ಕೆ ಲಗತ್ತಿಸುತ್ತಾ ಈ ಕೆಳಕಂಡ ವಿಭಾಗೀಯ ಕಛೇರಿಗಳ ನೇಮಕಾತಿ ಪ್ರಾಧಿಕಾರಿಗಳು, ಜಿಲ್ಲಾ ನೇಮಕಾತಿ ಪ್ರಾಧಿಕಾರಿಗಳು ಮತ್ತು ಬಡ್ತಿ ನೀಡುವ ಸಕ್ಷಮ ಪ್ರಾಧಿಕಾರಿಗಳ ಕಚೇರಿಯಿಂದ ಈ ಪ್ರಕ್ರಿಯೆಗಳ ಸಂಬಂಧ ಜವಾಬ್ದಾರಿಯುತ ಅಧಿಕಾರಿಗಳನ್ನು ಸೂಚಿತ ದಿನಾಂಕದಂದು ಮಾಹಿತಿ/ದಾಖಲೆಗಳೊಂದಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಕಛೇರಿಯಲ್ಲಿ ತನ್ನದೇ ಹಾಜರಾಗಿ ಅಪೇಕ್ಷಿತ ಮಾಹಿತಿಯನ್ನು ಸಲ್ಲಿಸಲು ನಿಯೋಜಿಸುವುದು.

ಮೇಲ್ಕಂಡಂತೆ ಮಾಹಿತಿಯನ್ನು ಸಲ್ಲಿಸಿರುವ ಬಗ್ಗೆ, ಈ ಕಛೇರಿಗೆ ವರದಿಯನ್ನು ಸಲ್ಲಿಸಲು ತಿಳಿಸಿದೆ. ಈ ವಿಷಯದಲ್ಲಿನ ಯಾವುದೇ ವಿಳಂಬ ಮಾಡದೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸೂಚಿಸಿದೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ