Tharikere: (ನ್ಯೂಸ್ ಮಲ್ನಾಡ್ ವರದಿ) ರೈತರ ಜಮೀನಿನಲ್ಲಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ಇದನ್ನೂ ಓದಿ; ಜಯಪುರ: ಡಿಶ್ ರಿಪೇರಿ ಬಶೀರನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಹೊಡೆದ ಜನ
ಸಾಗುವಾನಿ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ತರೀಕೆರೆ ಪೊಲೀಸ್ ಠಾಣೆ ರವರ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ 10 ಲಕ್ಷ ಬೆಲೆ ಬಾಳುವ ಸಾಗುವಾನಿ ಮರ ಮತ್ತು 5 ಲಕ್ಷ ಬೆಲೆಯ ಟ್ರ್ಯಾಕ್ಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ; ಮೂಡಿಗೆರೆ: ಎಣ್ಣೆ ಏಟಿಗೆ ಡ್ರೈವರ್ ಟೈಟು; ಆಟೋ ಚಲಾಯಿಸುವಾಗ್ಲೇ ಕೆಳಗೆ ಬಿದ್ದ ಡ್ರೈವರ್,
Tharikere: ಆರೋಪಿಗಳನ್ನು ದಸ್ತಗಿರಿ ಮಾಡಿದ ಪೊಲೀಸ್ ತಂಡದಲ್ಲಿ ಪಿ.ಐ. ವೀರೇಂದ್ರ, ಪಿ.ಎಸ್.ಐ. ನಾಗೇಂದ್ರ ನಾಯ್ಕ, ಬಿ. ಎಸ್. ಬಗಲಿ, ಪ್ರೋ.ಪಿ.ಎಸ್.ಐ. ಧನಂಜಯ ಮತ್ತು ಪೊಲೀಸ್ ಸಿಬ್ಬಂದಿಗಳಾದ ನಾಗೇಶ್, ರುದ್ರೇಶ್, ರಾಮಪ್ಪ ಮತ್ತು ಕಲ್ಲೇಶ್ ನಾಯ್ಕ ರವರು ಕರ್ತವ್ಯ ನಿರ್ವಹಿಸಿರುತ್ತಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬರೋಬ್ಬರಿ 12 ಸಾವಿರಕ್ಕೆ ಮಾರಾಟವಾಯ್ತು ಎನ್ ಆರ್ ಪುರದಲ್ಲಿ ಸಿಕ್ಕ ಈ ಮೀನು
- ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಸಂಸದೆ ಶೋಭಾ ಕರಾಂದ್ಲಾಜೆ ರೆಬಲ್
- ಕೊಪ್ಪ: ರಸ್ತೆಯಲ್ಲಿ ಸಿಕ್ಕಿದ 12,900 ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
ಮೂಡಿಗೆರೆ: ಎಣ್ಣೆ ಏಟಿಗೆ ಡ್ರೈವರ್ ಟೈಟು; ಆಟೋ ಚಲಾಯಿಸುವಾಗ್ಲೇ ಕೆಳಗೆ ಬಿದ್ದ ಡ್ರೈವರ್,
mudigere: (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೊಬ್ಬ ಚಲಾಯಿಸುತ್ತಿದ್ದ ಆಟೋ, ತನ್ನ ಮಾಲಿಕನಂತೆಯೇ ತೂರಾಡುತ್ತಾ ರಸ್ತೆಯಲ್ಲಿ ಸಂಚರಿಸಿ ಕೊನೆಗೆ ತನ್ನ ಮಾಲಿಕನನ್ನು ಹೊರಗೆಸೆದು ತಾನು ಗುಂಡಿಗೆ ಬಿದ್ದ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಅಂಗಡಿಯಲ್ಲಿದ್ದ 40 ಕೆ.ಜಿ. ಟೊಮೆಟೊ ಕಳ್ಳತನ
ಇದನ್ನೂ ಓದಿ; ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ;ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಂಡಗೋಡು ಗ್ರಾಮದಲ್ಲಿ. ಮದ್ಯ ಸೇವಿಸಿ ನಶೆಯಲ್ಲಿಯೇ ಆಟೋ ಚಾಲನೆ ಮಾಡಿದ್ದಾನೆ. ಅಷ್ಟೇ ಅಲ್ಲ ಇಡೀ ರಸ್ತೆಯೇ ತನ್ನದೆಂಬಂತೆ ಅಡ್ಡಾದಿಡ್ಡಿ ಚಾಲನೆ ಚಾಲನೆ ಮಾಡಿದ್ದಾನೆ. ಕೊನೆಗೆ ನಿಯಂತ್ರಣ ತಪ್ಪಿ ತಾನೇ ಆಟೋದಿಂದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆಟೋ ಹೊಂಡಕ್ಕೆ ಬಿದ್ದಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೊಪ್ಪ/ಶೃಂಗೇರಿ: ಕಿಟಕಿ ಗಾಜು ಒಡೆದು ಕಳ್ಳತನಕ್ಕೆ ಯತ್ನ: ದೂರು ದಾಖಲು
- ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ
- arecanut price: 14 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಸದ್ಯ ಈ ಆಟೋದಲ್ಲಿ ಯಾವ ಪ್ರಯಾಣಿಕರು ಹಾಗೂ ಎದುರಿನಿಂದ ಯಾವುದೆ ವಾಹನ ಬರದೇ ಇದ್ದ ಕಾರಣ ಯಾವ ಅಪಾಯ ಸಂಭವಿಸಿಲ್ಲ. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರು ಚಾಲಕ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ; ಕೊಪ್ಪ: ಆನೆ ಸಂಚಾರ; ಆತಂಕದಲ್ಲಿ ಗ್ರಾಮಸ್ಥರು