ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ ರವಿ 20 ವರ್ಷಗಳ ಬಳಿಕ ಮೊದಲ ಬಾರಿಗೆ ಸೋತಿದ್ದು, ಈ ವೇಳೆ ಬಾಲಕನೊಬ್ಬ ಅವರ ನಿವಾಸಕ್ಕೆ ಭೇಟಿ ನೀಡಿ “ನೀವು ಭಯ ಪಡಬೇಡಿ, ಬಿಜೆಪಿ ಜೊತೆ ನಾವು ಇರ್ತೀವಿ” ಎಂದಿದ್ದಾನೆ.
ಇದನ್ನೂ ಓದಿ; ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಈ ಬಾರಿ ಗೆಲುವು ಸಾಧಿಸಿದ್ದಾರೆ. ಈ ಮಧ್ಯೆ ಸಿ.ಟಿ ರವಿ ನಿವಾಸಕ್ಕೆ ಬಾಲಕ ಭೇಟಿ ನೀಡಿ ಧೈರ್ಯ ತುಂಬಿದ್ದಾನೆ. “ಸರ್ ನಿಮ್ಮ ಜೊತೆ ನಾವಿರ್ತೇವೆ, ನಾವು ಬಿಜೆಪಿ ಜೊತೆ ಇರ್ತಿವಿ, ನೀವು ಭಯ ಪಡಬೇಡಿ ಎನ್ನುವ ಮೂಲಕ ಬಾಲಕ ಧೈರ್ಯ ತುಂಬಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ವರುಣನ ಅಬ್ಬರ, ಸೇತುವೆ ಮುಳುಗಡೆ
- ಪ್ರೇಯಸಿ ಮೇಲೆ ಮಚ್ಚಿನಿಂದ ಹಲ್ಲೆ; ಕಲ್ಯಾಣಿಗೆ ಜಿಗಿದು ಪ್ರಾಣಬಿಟ್ಟ ಯುವಕ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು
ಭೀಕರ ಅಪಘಾತ, ಅತ್ತೆ-ಸೊಸೆ ಸಾವು
ಹಾಸನ: ದಾವಣೆಗೆರೆಯಿಂದ ಮನೆಯ ಗೃಹ ಪ್ರವೇಶ ಮುಗಿಸಿಕೊಂಡು ವಾಪಸ್ ಬರುವಾಗ ಟಿಪ್ಪರ್ ಲಾರಿಯೊಂದು ಓವರ್ ಟೇಕ್ ಮಾಡಲು ಹೋಗಿ ಚಲಿಸುತ್ತಿದ್ದ ಕಾರಿಗೆ ಟಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಅತ್ತೆ ಮತ್ತು ಸೊಸೆ ಇಬ್ಬರು ಸಾವನಪ್ಪಿದ ಘಟನೆ ಚನ್ನಗಿರಿ ಬಳಿ ನಡೆದಿದೆ.
ಬಾಳುಪೇಟೆಯ ಕಾಫಿ ಪ್ಲಾಂಟರ್ ಮತ್ತು ಸಹ್ಯಾದ್ರಿ ಥೀಯೇಟರ್ ಮಾಲೀಕರಾಗಿದ್ದ ಬಿ.ಎಸ್. ಗುರುನಾಥ್ ಅವರ ಪತ್ನಿ ಮೈತ್ರಿದೇವಿ 70 ವರ್ಷ ಹಾಗೂ ಸೊಸೆ ಸೌಜನ್ಯ (48) ಎಂಬುವರೇ ರಸ್ತೆ ಅಪಘಾಶದಲ್ಲಿ ಸಾವನಪ್ಪಿದ ದುರ್ದೈವಿಗಳು.
ಇದನ್ನೂ ಓದಿ; ಎರಡು ಬಸ್ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು
ನಗರದ ಮಲ್ಲಿಗೆ ಹೊಟೇಲ್ ಬಳಿಯಿರುವ ಮನೆಯಲ್ಲಿ ವಾಸವಿರುವ ಬಿ.ಎಸ್. ಗುರುನಾಥ್ ಅವರ ಮಗಳ ಹೊಸ ಮನೆ ಗೃಹ ಪ್ರವೇಶಕ್ಕೆಂದು ಕಾರಿನಲ್ಲಿ ಹಾಸನದಿಂದ ದಾವಣಗೆರೆಗೆ ತೆರಳಿದ್ದರು ಎನ್ನಲಾಗಿದೆ.
ಕಾರ್ಯಕ್ರಮ ಮುಗಿಸಿಕೊಂಡು ಹಾಸನಕ್ಕೆ ವಾಪಸ್ ತೆರಳುವಾಗ ಚನ್ನಗಿರಿ ಬಳಿ ಟಿಪ್ಸರ್ಲಾರಿ ವಾಹನದ ಚಾಲಕ ಅತೀ ವೇಗದಲ್ಲಿ ಓವರ್ ಟೇಕ್ ಮಾಡುವ ಅವಸರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆಗೆ ಉರುಳಿದೆ.
ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
ಈ ವೇಳೆ ಕಾರಿನಲ್ಲಿ ಮುಂಭಾಗ ಕುಳಿತ್ತಿದ್ದ ಬಿ.ಎಸ್. ಗುರುನಾಥ್ ಹಾಗೂ ಪುತ್ರ ರಾಜೇಶ್ ಇಬ್ಬರೂ ಸೇಫ್ಟಿ ಬೆಲ್ಟ್ ಹಾಕಿಕೊಂಡಿದ್ದರು. ಇನ್ನು ಕಾರು ಚಾಲನೆ ಮಾಡುತ್ತಿದ್ದ ರಾಜೇಶ್ ಅವರಿಗೂ ಕೂಡ ಗಾಯಗಳಾಗಿವೆ. ಗುರುನಾಥ್ ಅವರಿಗೆ ಗಾಯಗಳಾಗಿದ್ದು, ಹಿಂಬದಿ ಕುಳಿತಿದ್ದ ಗುರುನಾಥ್ ಪತ್ನಿ ಮೈತ್ರಿದೇವಿ ಮತ್ತು ಸೊಸೆ ಸೌಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.